Don't Miss!
- News Timmappa Gift to Rama: ಶ್ರೀರಾಮ ನವಮಿಯಂದು ರಾಮನಿಗೆ ಉಡುಗೊರೆ ನೀಡಿದ ತಿರುಪತಿ ತಿಮ್ಮಪ್ಪ
- Finance ಕ್ಯಾನ್ಸರ್ಗೆ ಸವಾಲು ಹಾಕಿ ಗೆದ್ದ 33 ವರ್ಷದ ಹುಡುಗಿ ಬಳಿ ಈಗ 10 ಖಾಸಗಿ ಜೆಟ್ಗಳು!
- Lifestyle ಹಾಲು ಜೇನಿನಂತಿರುವ ಸಂಬಂಧ ಹಾಳಾಗುತ್ತಿರುವ ಲಕ್ಷಣಗಳಿವು..!
- Sports KKR vs RR IPL 2024: ಜೋಸ್ ದಿ ಬಾಸ್ ಬಟ್ಲರ್ ಆರ್ಭಟಕ್ಕೆ ಕೆಕೆಆರ್ ಹೈರಾಣ; ರಾಯಲ್ ಆಗಿ ಗೆದ್ದ ರಾಜಸ್ಥಾನ
- Automobiles ಪೆಟ್ರೋಲ್ ಎಂಜಿನ್ಗಳಲ್ಲಿ ಮಾತ್ರ ಬರಲಿದೆ ರೆನಾಲ್ಟ್ನ ಬ್ರಹ್ಮಾಸ್ತ್ರ ಡಸ್ಟರ್
- Technology YouTube: ಯೂಟ್ಯೂಬ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್! ಆಡ್ ಬ್ಲಾಕರ್ ವಿರುದ್ಧ ಸಮರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪುಂಡಿಪಣವು' ಚಿತ್ರದ ಧ್ವನಿ ಸುರುಳಿ ಬಿಡುಗಡೆ
ತವಿಷ್ ಎಂಟರ್ಪ್ರೈಸಸ್ ಲಾಂಛನದಲ್ಲಿ ರಾಮಕೃಷ್ಣ ಶೆಟ್ಟಿ ನಿರ್ಮಿಸಿದ ಗಂಗಾಧರ ಕಿರೋಡಿಯನ್ ನಿರ್ದೇಶನದ ಪುಂಡಿಪಣವು ತುಳು ಚಲನಚಿತ್ರದ ಧ್ವನಿಸುರುಳಿ ಮತ್ತು ಟ್ರೈಲರ್ ಬಿಡುಗಡೆ ಸಮಾರಂಭವು ಮಂಗಳೂರಿನ ಪುರಭವನದಲ್ಲಿ ಜರಗಿತು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ. ಭಂಡಾರಿ ಅವರು ಧ್ವನಿಸುರುಳಿಯನ್ನು ಬಿಡುಗಡೆಗೊಳಿಸಿದರು. ತುಳು ಭಾಷೆಯ ಬೆಳವಣಿಗೆಗೆ ತುಳು ಸಿನಿಮಾರಂಗ ಪೂರಕವಾಗಿ ಕೆಲಸ ಮಾಡುತ್ತಿದೆ. ನಮ್ಮ ಸಂಸ್ಕೃತಿ, ಆಚಾರ, ವಿಚಾರದ ಬಗ್ಗೆ ಇಂದು ತುಳು ಚಲನಚಿತ್ರಗಳು ಬೆಳಕು ಚೆಲ್ಲುವ ಕೆಲಸ ಮಾಡುತ್ತಿದೆ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ ನಿರ್ಮಾಪಕ, ನಿರ್ದೇಶಕ ರಿಚರ್ಡ್ ಕ್ಯಾಸ್ಟಲಿನೊ ಮಾತನಾಡಿ, ತುಳು ಸಿನಿಮಾ ನಿರ್ಮಿಸುವುದು ಸುಲಭ. ಆದರೆ ಥಿಯೇಟರ್ ಸಮಸ್ಯೆ ಎದುರಾಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತುಳು ಚಲನಚಿತ್ರ ನಿರ್ಮಾಪಕರ ಸಂಘ ಕೆಲಸ ಮಾಡಬೇಕೆಂದರು.
ತುಳು ಚಿತ್ರರಂಗ ರಾಜಕೀಯದಿಂದ ದೂರ ಉಳಿಯಲು ಕಾರಣಗಳೇನು?
ಡಾ. ಸಂಜೀವ ದಂಡೆಕೇರಿ ಮಾತನಾಡಿ, ಗಂಗಾಧರ ಕಿರೋಡಿಯನ್ ಅವರು ಭೂತಾರಾಧನೆಯ ಕುರಿತು ಸಾಮಾಜಿಕ ಕಳಕಳಿ ಇರುವಂತಹ ಸಿನಿಮಾಗಳನ್ನು ನಿರ್ಮಿಸಿ ಜನ ಮನ್ನಣೆ ಗಳಿಸುತ್ತಿದ್ದಾರೆ ಎಂದರು. ಒಂದು ಸಿನಿಮಾವನ್ನು ಕಡಿಮೆ ಬಜೆಟ್ ನಲ್ಲಿ ನಿರ್ಮಿಸಿ ನಿರ್ಮಾಪಕರ ಪಾಲಿಗೆ ಉತ್ತಮ ನಿರ್ದೇಶಕ ಎಂಬುದನ್ನು ಗಂಗಾಧರ ಕಿರೋಡಿಯನ್ ತೋರಿಸಿಕೊಟ್ಟಿದ್ದಾರೆ ಎಂದು ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ತಿಳಿಸಿದರು.
ಆಗಸ್ಟ್ 10ಕ್ಕೆ ತೆರೆಗೆ ಬರಲಿದೆ ನಿರೀಕ್ಷಿತ ತುಳು ಚಿತ್ರ 'ಪತ್ತೀಸ್ ಗ್ಯಾಂಗ್'
ವೇದಿಕೆಯಲ್ಲಿ ಕಿಶೋರ್ ಡಿ ಶೆಟ್ಟಿ, ವಿಜಯಕುಮಾರ್ ಕೊಡಿಯಾಲ್ ಬೈಲ್, ಸುಹಾಸ್ ಹೆಗ್ಡೆ, ಕೀರ್ತಿರಾಜ್ ಶೆಟ್ಟಿ ಬೆಂಗಳೂರು, ವಿ.ಜಿ.ಪಾಲ್, ನಿರ್ದೇಶಕ ಗಂಗಾಧರ ಕಿರೋಡಿಯನ್, ನಿರ್ಮಾಪಕ ರಾಮಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.