Don't Miss!
- News Soumya Reddy in Tirupati:ಸೌಮ್ಯ ರೆಡ್ಡಿ ಫೋಟೋ ಹಿಡಿದು ತಿರುಪತಿ ದೇವಸ್ಥಾನದ ಮುಂದೆ ಫೋಸ್ ಕೊಟ್ಟ ಭಕ್ತ!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Automobiles ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂತೋಷ್ ಪುನೀತ್ ಕಾಂಬಿನೇಶನ್ ಸಿನಿಮಾಗೆ ಸಜ್ಜಾಯ್ತು ವೇದಿಕೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಸಂತೋಷ್ ಆನಂದ್ ರಾಮ್ ಕಾಂಬಿನೇಶನ್ ಸಿನಿಮಾ ಸೆಟ್ಟೇರಲು ತಯಾರಾಗಿದೆ. ರಾಜಕುಮಾರ ಚಿತ್ರವನ್ನ ಪ್ರೇಕ್ಷಕರಿಗೆ ನೀಡಿದ್ದ ಈ ಜೋಡಿ ಒಟ್ಟಿಗೆ ಮಾಡುತ್ತಿರುವ ಚಿತ್ರ ಇನ್ನ ಕೆಲವೇ ತಿಂಗಳಲ್ಲಿ ಸೆಟ್ಟೇರಲಿದೆ.
ಮಾರ್ಚ್ 17 ರಂದು ಪವರ್ ಸ್ಟಾರ್ ಹುಟ್ಟುಹಬ್ಬದ ವಿಶೇಷವಾಗಿ ಚಿತ್ರದ ಟೈಟಲ್ ಬಿಡುಗಡೆಯಾಗಲಿದೆ ಎಂದು ಈಗಾಗಲೇ ಸುದ್ದಿ ಹಬ್ಬಿದೆ. ಪುನೀತ್ ಸದ್ಯ ರಿಯಾಲಿಟಿ ಶೋನಲ್ಲಿ ಬ್ಯುಸಿ ಆಗಿದ್ದಾರೆ. ಅದಕ್ಕೂ ಮುಂಚೆ ಅಪ್ಪು ಕೃಷ್ಣ ಲೀಲಾ ಸಿನಿಮಾ ಖ್ಯಾತಿಯ ನಿರ್ದೇಶಕ ಶಶಾಂಕ್ ಆಕ್ಷನ್ ಕಟ್ ನಲ್ಲಿ ಅಭಿನಯ ಮಾಡಲಿದ್ದಾರೆ.
ಹೊಸ ವರ್ಷಕ್ಕೆ ಪುನೀತ್ ರಾಜ್ ಕುಮಾರ್ ರೆಸಲ್ಯೂಶನ್ ಏನು?
ಎಲ್ಲರಿಗೂ ತಿಳಿದಿರುವಂತೆ ನಿರ್ದೇಶಕ ಸಂತೋಷ್ ಪ್ರತಿ ಸಿನಿಮಾ ನಿರ್ದೇಶನ ಮಾಡುವ ಮುಂಚೆ ಪ್ರೀ ಪ್ರೊಡಕ್ಷನ್ ಗಾಗಿ ಕೆಲವು ತಿಂಗಳು ಮೀಸಲಿಡುತ್ತಾರೆ. ಈ ಚಿತ್ರದ ಸ್ಕ್ರಿಪ್ಟ್ ಗಾಗಿಯೂ ಆರು ತಿಂಗಳು ಕೆಲಸ ಮಾಡಿದ ನಂತರ ಚಿತ್ರೀಕರಣ ಶುರು ಮಾಡಲಿದ್ದಾರೆ ಸಂತೋಷ್ ಮತ್ತು ತಂಡ.
'ಅಂಜನಿಪುತ್ರ' ಸಿನಿಮಾದ ನಂತರ ಅಪ್ಪು ಯಾವ ಸಿನಿಮಾದಲ್ಲಿ ಅಭಿನಯಿಸುತ್ತಾರೆ ಎನ್ನುವ ಕುತೂಹಲ ಹೆಚ್ಚಾಗಿದೆ. ಕೆಲವು ಮೂಲಗಳ ಪ್ರಕಾರ ಮೊದಲಿಗೆ ಶಶಾಂಕ್ ಅವರ ಸಿನಿಮಾದಲ್ಲಿ ಅಭಿನಯಿಸಿ ನಂತರ ಹೊಂಬಾಳೆ ನಿರ್ಮಾಣದ ಚಿತ್ರದಲ್ಲಿ ಭಾಗಿ ಆಗಲಿದ್ದಾರಂತೆ. ಸದ್ಯದ ಸುದ್ದಿಯ ಪ್ರಕಾರ ಅಪ್ಪು ಅಭಿನಯದ ಶಶಾಂಕ್ ನಿರ್ದೆಶನದ ಸಿನಿಮಾ ಸಂಕ್ರಾಂತಿ ಹಬ್ಬದಂದು ಸೆಟ್ಟೇರಲಿದೆ ಅಂತೆ.