Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಪವರ್ ಸ್ಟಾರ್ ಜೊತೆ ಸೂಪರ್ ಸ್ಟಾರ್ ಚಿತ್ರ
ಮೈನಾ, ಪೃಥ್ವಿ, ಜಟ್ಟಾ ಚಿತ್ರಗಳ ನಿರ್ಮಾಪಕ ಎನ್ ಎಸ್ ರಾಜ್ ಕುಮಾರ್ ನಿರ್ಮಾಣ ಚಿತ್ರಕ್ಕೆ ಗಿರಿರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರು ಸದ್ಯಕ್ಕೆ ವಿದೇಶಿ ಪ್ರವಾಸದಲ್ಲಿರುವ ಕಾರಣ ಅವರ ಅನುಪಸ್ಥಿತಿಯಲ್ಲಿ ಚಿತ್ರದ ಮುಹೂರ್ತ ನೆರವೇರಿತು.
ಚಿತ್ರದ ಪಾತ್ರವರ್ಗದಲ್ಲಿ ಭಾವನಾ, ರವಿಕಾಳೆ, ಅರ್ಚನಾ, ಅತುಲ್ ಕುಲಕರ್ಣಿ ಮುಂತಾದವರು ಇದ್ದಾರೆ. ಪುನೀತ್ ಅವರ ಬಹುತೇಕ ಚಿತ್ರಗಳಿಗೆ ಕ್ಲಾಪ್ ಮಾಡಿರುವ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಈ ಹೊಸ ಚಿತ್ರಕ್ಕೂ ಕ್ಲಾಪ್ ಮಾಡಿದರು.
ಕೇವಲ ರು.35 ಸಾವಿರ ಕ್ಯಾಮೆರಾ ಬಳಸಿ ನವಿಲಾದವರು ಚಿತ್ರವನ್ನು ಮಾಡಿದ್ದ ಗಿರಿರಾಜ್ ಬಳಿಕ ಅದ್ವೈತ ಹಾಗೂ ಜಟ್ಟಾ ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ. ಇನ್ನೂ ಹೆಸರಿಡ ಈ ಚಿತ್ರಕ್ಕೆ ಇಳಯರಾಜಾ ಅವರ ಸಂಗೀತವಿದೆ.
ಈಗಾಗಲೆ ಪುನೀತ್ ಬರ್ತ್ ಡೇ ದಿನ ಸೆಟ್ಟೇರಿರುವ 'ನಿನ್ನಿಂದಲೇ' ಚಿತ್ರದ ಬಳಿಕ ಈ ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರಕ್ಕೆ ಶೀರ್ಷಿಕೆ ಆಯ್ಕೆ ನಡೆಯುತ್ತಿದೆ. ಈಗಾಗಲೆ ಹತ್ತು ಶೀರ್ಷಿಕೆಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆಯಂತೆ. ಅವುಗಳಲ್ಲಿ ಜೇಡರಬಲೆ, ನಾಂದಿ, ಲಗೋರಿ ಸೇರಿದಂತೆ ಹಲವು ಹೆಸರುಗಳಿವೆ ಎನ್ನಲಾಗಿದೆ. (ಏಜೆನ್ಸೀಸ್)