Don't Miss!
- News ನೇಹಾ ಕೊಲೆ: ಫಯಾಜ್ ಜೈಲಲ್ಲಿದ್ದರೂ ಆತನ ಮೊಬೈಲ್ನಲ್ಲಿದ್ದ ಫೋಟೋ ಲೀಕ್ ಆಗಿದ್ದೇಗೆ?: ಪ್ರಹ್ಲಾದ್ ಜೋಶಿ
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಪವರ್ ಸ್ಟಾರ್ ಜೊತೆ ಸೂಪರ್ ಸ್ಟಾರ್ ಚಿತ್ರ
ಮೈನಾ, ಪೃಥ್ವಿ, ಜಟ್ಟಾ ಚಿತ್ರಗಳ ನಿರ್ಮಾಪಕ ಎನ್ ಎಸ್ ರಾಜ್ ಕುಮಾರ್ ನಿರ್ಮಾಣ ಚಿತ್ರಕ್ಕೆ ಗಿರಿರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರು ಸದ್ಯಕ್ಕೆ ವಿದೇಶಿ ಪ್ರವಾಸದಲ್ಲಿರುವ ಕಾರಣ ಅವರ ಅನುಪಸ್ಥಿತಿಯಲ್ಲಿ ಚಿತ್ರದ ಮುಹೂರ್ತ ನೆರವೇರಿತು.
ಚಿತ್ರದ ಪಾತ್ರವರ್ಗದಲ್ಲಿ ಭಾವನಾ, ರವಿಕಾಳೆ, ಅರ್ಚನಾ, ಅತುಲ್ ಕುಲಕರ್ಣಿ ಮುಂತಾದವರು ಇದ್ದಾರೆ. ಪುನೀತ್ ಅವರ ಬಹುತೇಕ ಚಿತ್ರಗಳಿಗೆ ಕ್ಲಾಪ್ ಮಾಡಿರುವ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಈ ಹೊಸ ಚಿತ್ರಕ್ಕೂ ಕ್ಲಾಪ್ ಮಾಡಿದರು.
ಕೇವಲ ರು.35 ಸಾವಿರ ಕ್ಯಾಮೆರಾ ಬಳಸಿ ನವಿಲಾದವರು ಚಿತ್ರವನ್ನು ಮಾಡಿದ್ದ ಗಿರಿರಾಜ್ ಬಳಿಕ ಅದ್ವೈತ ಹಾಗೂ ಜಟ್ಟಾ ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ. ಇನ್ನೂ ಹೆಸರಿಡ ಈ ಚಿತ್ರಕ್ಕೆ ಇಳಯರಾಜಾ ಅವರ ಸಂಗೀತವಿದೆ.
ಈಗಾಗಲೆ ಪುನೀತ್ ಬರ್ತ್ ಡೇ ದಿನ ಸೆಟ್ಟೇರಿರುವ 'ನಿನ್ನಿಂದಲೇ' ಚಿತ್ರದ ಬಳಿಕ ಈ ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರಕ್ಕೆ ಶೀರ್ಷಿಕೆ ಆಯ್ಕೆ ನಡೆಯುತ್ತಿದೆ. ಈಗಾಗಲೆ ಹತ್ತು ಶೀರ್ಷಿಕೆಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆಯಂತೆ. ಅವುಗಳಲ್ಲಿ ಜೇಡರಬಲೆ, ನಾಂದಿ, ಲಗೋರಿ ಸೇರಿದಂತೆ ಹಲವು ಹೆಸರುಗಳಿವೆ ಎನ್ನಲಾಗಿದೆ. (ಏಜೆನ್ಸೀಸ್)