Don't Miss!
- Sports
ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ರೋಹಿತ್ ಶರ್ಮಾ ಕೋವಿಡ್ ವರದಿ ನೆಗೆಟಿವ್; ಟಿ20 ಸರಣಿಗೆ ರೆಡಿ
- News
ISWA: ಆಸ್ಟ್ರೇಲಿಯಾದ ಅನಿವಾಸಿ ಭಾರತೀಯರೊಂದಿಗೆ ಸಚಿವ ಪ್ರಲ್ಹಾದ್ ಜೋಶಿ ನಿಯೋಗ ಭೇಟಿ
- Finance
Gold Rate Today: ಚಿನ್ನ ಸ್ಥಿರ: ಪ್ರಮುಖ ನಗರಗಳಲ್ಲಿ ಜು.3ರಂದು ಬೆಲೆ ಎಷ್ಟು
- Technology
ಶೀಘ್ರದಲ್ಲೇ ವಾಟ್ಸಾಪ್ ಸೇರಲಿದೆ ಅತಿ ಉಪಯುಕ್ತ ಫೀಚರ್ಸ್! ವಿಶೇಷತೆ ಏನು?
- Automobiles
ಜೂನ್ ತಿಂಗಳಿನಲ್ಲಿ 4.84 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್
- Lifestyle
Weekly Horoscope: ಜುಲೈ 3ರಿಂದ ಜುಲೈ 9ರ ವಾರ ಭವಿಷ್ಯ: ಮೇಷ, ಮಿಥುನ, ಮಕರ, ಕುಂಭ ರಾಶಿಯ ವ್ಯಾಪಾರಸ್ಥರು ಆರ್ಥಿಕ ಲಾಭ ಪಡೆಯಬಹುದು
- Education
JNV Result 2022 : 6ನೇ ತರಗತಿ ತಾತ್ಕಾಲಿಕ ಆಯ್ಕೆ ಪಟ್ಟಿ ಜು.10ರಂದು ಪ್ರಕಟ ಸಾಧ್ಯತೆ
- Travel
ಕೆಮ್ಮಣ್ಣು ಗುಂಡಿ - ಒಂದು ಮನಮೋಹಕ ತಾಣ!
ಪುನೀತ್ ಅಗಲಿ 7 ತಿಂಗಳು: ಪುಣ್ಯಭೂಮಿಗೆ ಪೂಜೆ ಸಲ್ಲಿಸಿದ ಪತ್ನಿ ಅಶ್ವಿನಿ, ರಾಘಣ್ಣ!
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿ ಇಂದಿಗೆ 7 ತಿಂಗಳು ಕಳೆದಿವೆ. ಕಳೆದ ವರ್ಷ ಅಕ್ಟೋಬರ್ 29ರಂದು ಅಪ್ಪು ಅಪಾರ ಅಭಿಮಾನಿಗಳು ಕುಟುಂಬಸ್ಥರನ್ನು ಬಿಟ್ಟು ಅಗಲಿದ್ದರು. ಇದು ಕನ್ನಡ ಚಿತ್ರರಂಗದ ಪಾಲಿಗೆ ಕರಾಳ ದಿನ. ಇದೇ ನೋವಿನಲ್ಲಿ ಇನ್ನೂ ಪವರ್ಸ್ಟಾರ್ ಅಭಿಮಾನಿಗಳಿದ್ದಾರೆ.
ಇಂದಿಗೆ ( ಮೇ 29) ಪುನೀತ್ ರಾಜ್ಕುಮಾರ್ ಅಗಲಿ ಏಳು ತಿಂಗಳಾಗಿದ್ದರಿಂದ ಪುನೀತ್ ಕುಟುಂಬಸ್ಥರು ಹಾಗೂ ಆಪ್ತರು ಪುಣ್ಯಭೂಮಿಗೆ ಪೂಜೆ ಸಲ್ಲಿಸಿದರು. ಬೆಳಗ್ಗೆನೇ ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ಅವರ ಇಬ್ಬರು ಪುತ್ರಿಯರು. ರಾಘವೇಂದ್ರ ರಾಜ್ಕುಮಾರ್, ವಿನಯ್ ರಾಜ್ಕುಮಾರ್, ಯುವರಾಜ್ಕುಮಾರ್ ಸೇರಿದಂತೆ ಕುಟುಂಬಸ್ಥರು ಬಂದು ವಿಶೇಷ ಪೂಜೆಯನ್ನು ಸಲ್ಲಿಸಿದರು.
ಮೈಸೂರು
ರಸ್ತೆ
ನಾಯಂಡಹಳ್ಳಿ
ಜಂಕ್ಷನ್
ರಸ್ತೆಗೆ
ಪುನೀತ್
ಹೆಸರು
ಅಳವಡಿಸಿದ
BBMP
ಅಪ್ಪು ಸಮಾಧಿ ವಿಶೇಷ ಪೂಜೆ
ಪ್ರತಿ ತಿಂಗಳು ಅಪ್ಪು ಅಗಲಿದ ದಿನದಂದು ಕುಟುಂಬಸ್ಥರು ಹಾಗೂ ಆಪ್ತರು ಸಮಾಧಿಗೆ ಭೇಟಿ ಕೊಡುತ್ತಾರೆ. ವಿಶೇಷ ಪೂಜೆಯನ್ನುಸಲ್ಲಿಸುತ್ತಾರೆ. ಅದರಂತೆ, ಈ ತಿಂಗಳು ಕೂಡ ಪೂಜೆಯನ್ನು ಸಲ್ಲಿಸಲಾಗಿದೆ. ಪೂಜೆ ಸಲ್ಲಿಸಿದ ಬಳಿಕ ಅಪ್ಪು ಅಭಿಮಾನಿಗಳಿಗೂ ಪುಣ್ಯಭೂಮಿಗೆ ಭೇಟಿ ನೀಡಲು ಅವಕಾಶ ನೀಡಲಾಗುತ್ತಿದೆ.
ಪುನೀತ್ ರಾಜ್ಕುಮಾರ್ ಸಮಾಧಿ ಬಳಿಕ ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ಅವರ ಪುತ್ರಿಯರು, ವಿನಯ್ ರಾಜ್ಕುಮಾರ್, ಯುವ ರಾಜ್ಕುಮಾರ್ ಸೇರಿದಂತೆ ಕುಟುಂಬಸ್ಥರೆಲ್ಲರೂ ಪಾರ್ವತಮ್ಮ ರಾಜ್ಕುಮಾರ್ ಹಾಗೂ ರಾಜ್ಕುಮಾರ್ ಸಮಾಧಿಗೂ ಭೇಟಿ ನೀಡಿ ಪೂಜೆಯನ್ನು ಸಲ್ಲಿಸಿದರು.
ಅಪ್ಪು ನೆನೆದ ರಾಘವೇಂದ್ರ ರಾಜ್ಕುಮಾರ್
ಪುನೀತ್ ರಾಜ್ಕುಮಾರ್ ನಿಧನದ ಸುದ್ದಿಯನ್ನು ಕೇಳಿದ ಅಭಿಮಾನಿಗಳು ಹಾಗೂ ಕನ್ನಡಿಗರು ಕಣ್ಣೀರು ಹಾಕಿದ್ದರು. ಸದ್ದಿಲ್ಲದೆ ಪುನೀತ್ ಮಾಡಿದ ಸಾಮಾಜಿಕ ಕೆಲಸವನ್ನು ಕಂಡು ಬೆರಗಾಗಿದ್ದರು. ಇತ್ತ ಅಭಿಮಾನಿಗಳು ಕೂಡ ಹೃದಯ ಶ್ರೀಮಂತಿಕೆಯ ನಟನನ್ನು ಕಳೆದುಕೊಂಡ ದು:ಖದಲ್ಲಿತ್ತು. ಇತ್ತ ರಾಘವೇಂದ್ರ ರಾಜ್ಕುಮಾರ್ ಕೂಡ ತಮ್ಮ ಅಗಲಿಕೆಯ ನೋವಿನಲ್ಲಿದ್ದಾರೆ.
Happy morning
— Raghavendra Rajkumar (@RRK_Official_) May 28, 2022
Happy Sunday
Take care
Jai Anjeneya
Jai Gurudev 🙏🙏🙏 pic.twitter.com/cJKBZTXqQL
ಈ ಕಾರಣಕ್ಕೆ ಇಂದು ( ಮೇ 29) ಅಪರೂಪ ಫೋಟೊಗಳ ಮೂಲಕ ಪುನೀತ್ ರಾಜ್ಕುಮಾರ್ ಅವರನ್ನು ನೆನೆದಿದ್ದಾರೆ. ಅಪ್ಪು ಬಾಲ್ಯದ ಅಪರೂಪಗಳಿಂದ ಹಿಡಿದು ಸಿನಿಮಾರಂಗಕ್ಕೆ ಕಾಲಿಡುವವರೆಗಿನ ಸುಂದರ ಫೋಟೊಗಳನ್ನು ವಿಡಿಯೋ ಮೂಲಕ ಶೇರ್ ಮಾಡಿದ್ದಾರೆ.

ಪುನೀತ್ ರಾಜ್ಕುಮಾರ್ ಅಗಲಿಕೆ ಇನ್ನೂ ಅಪ್ಪು ಅಭಿಮಾನಿಗಳು ನಂಬುತ್ತಿಲ್ಲ. ಅಪ್ಪು ನಟಿಸಿದ ಕೊನೆಯ ಸಿನಿಮಾ ' ಜೇಮ್ಸ್ ' ಬಿಡುಗಡೆಯಾಗಿ ಯಶಸ್ಸು ಕಂಡಿದೆ. ಇನ್ನು ಅವರ ಕನಸು 'ಗಂಧದ ಗುಡಿ' ಯಾವಾಗ ಬಿಡುಗಡೆಯಾಗುತ್ತೆ ಎಂದು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.