Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂತೋಷ್-ಪುನೀತ್ ಚಿತ್ರದ ಟೈಟಲ್ ಫಿಕ್ಸ್ ಅಂತೆ
Recommended Video
'ರಾಜಕುಮಾರ' ಚಿತ್ರದ ನಂತರ ನಿರ್ದೇಶಕ ಸಂತೋಷ್ ಆನಂದ್ ರಾಮ್ ತಮ್ಮ ಮುಂದಿನ ಸಿನಿಮಾವನ್ನ ಮತ್ತೆ ಪುನೀತ್ ರಾಜ್ ಕುಮಾರ್ ಜೊತೆಯಲ್ಲೇ ಮಾಡ್ತಿರುವುದಾಗಿ ಈ ಹಿಂದೆಯೇ ಖಚಿತ ಪಡಿಸಿದ್ದರು.
ಆದ್ರೆ, ಈ ಸಿನಿಮಾ ಯಾವಾಗ ಆರಂಭವಾಗುತ್ತೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ. ಆದ್ರೀಗ, ಪುನೀತ್ ಮತ್ತು ಸಂತೋಷ್ ಜೋಡಿಯ ಚಿತ್ರದ ಕೆಲಸ ಚುರುಕುಗೊಳಿಸಿದ್ದಾರೆ.
ಎರಡು ಸೂಪರ್ ಹಿಟ್ ಸಿನಿಮಾ ನೀಡಿದ್ದ ಸಂತೋಷ್ ಆನಂದ್ ರಾಮ್ ಈಗ ಮೂರನೇ ಚಿತ್ರದ ಕಥೆ ಏನು, ಟೈಟಲ್ ಏನು, ಯಾವ ರೀತಿ ಸಿನಿಮಾ ಮಾಡಬಹುದು ಎಂಬ ಕುತೂಹಲ ಕಾಡುತ್ತಿದೆ.ಈ ಬಗ್ಗೆ ಈಗ ಸಂತೋಷ್ ಆನಂದ್ ರಾಮ್ ಅವರು ಒಂದು ಸುಳಿವು ಬಿಟ್ಟುಕೊಟ್ಟಿದ್ದಾರೆ.
ಮತ್ತೊಮ್ಮೆ ಅಪ್ಪುಗೆ ಆಕ್ಷನ್ ಕಟ್ : ರಾಜಮಾರ್ಗದಲ್ಲಿ ಸಂತೋಷ್ ಆನಂದ್ ರಾಮ್
ಈ ಚಿತ್ರವನ್ನ ಹೊಂಬಾಳೆ ಫಿಲ್ಮ್ ನಿರ್ಮಾಣ ಮಾಡುತ್ತಿದ್ದು, ಈಗಾಗಲೇ ಚಿತ್ರಕ್ಕೆ ಶೀರ್ಷಿಕೆ ಅಂತಿಮವಾಗಿದೆಯಂತೆ. ಈ ವಿಷ್ಯವನ್ನ ಖುದ್ದು ಸಂತೋಷ್ ಅವರೇ ಸ್ಪಷ್ಟಪಡಿಸಿದ್ದಾರೆ. ಆದ್ರೆ, ಆ ಟೈಟಲ್ ಯಾವುದು ಎಂಬುದನ್ನ ಶೀಘ್ರದಲ್ಲೇ ಬಹಿರಂಗಪಡಿಸುತ್ತಾರಂತೆ.
ಸದ್ಯ, ಪವನ್ ಒಡೆಯರ್ ನಿರ್ದೇಶನ 'ನಟಸಾರ್ವಭೌಮ' ಚಿತ್ರದಲ್ಲಿ ನಟಿಸುತ್ತಿರುವ ಪುನೀತ್ ಗೆ ಇದು 29ನೇ ಸಿನಿಮಾವಾಗಲಿದೆ. ಸಂತೋಷ್ ಆನಂದ್ ರಾಮ್ ಗೆ 3ನೇ ಚಿತ್ರವಾಗಲಿದ್ದು, ಹೊಂಬಾಳೆ ಫಿಲ್ಮ್ ಗೆ 6ನೇ ಚಿತ್ರವಾಗಲಿದೆ. ಸದ್ಯಕ್ಕೆ ಇಷ್ಟು ಬಿಟ್ಟರೇ ಬೇರೆ ಮಾಹಿತಿಯನ್ನ ನಿರ್ದೇಶಕರು ಬಿಟ್ಟುಕೊಟ್ಟಿಲ್ಲ.