Don't Miss!
- News Everest Fish Curry Masala: ಎವರೆಸ್ಟ್ ಫಿಶ್ ಕರಿ ಮಸಾಲೆ ಬ್ಯಾನ್: ಕಾರಣ ಇಲ್ಲಿದೆ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಬ್ಬಳ್ಳಿ ಹೈದರು ಕುಣಿದು ಕುಪ್ಪಳಿಸುವಂತೆ ಮಾಡಿದ ಪುನೀತ್
ಹಿಂದೆ ಕನ್ನಡದ ವರನಟ ಡಾ. ರಾಜ್ ಕುಮಾರ್ "ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು" ಎಂದು ಹಾಡಿದ್ದು ಇದೇ ಹುಬ್ಬಳ್ಳಿಯಲ್ಲಿ. ಇಂದು ವರನಟನ ಪುತ್ರ ಪುನೀತ್ ರಾಜ್ ಕುಮಾರ್ "ಅಭಿಮಾನಿಗಳೇ ನಮ್ಮನೇ ದೇವ್ರು" ಹಾಡಿಗೆ ಹೆಜ್ಜೆ ಹಾಕಿದ್ದು ಇದೇ ಗಂಡು ಮೆಟ್ಟಿದ ನೆಲದಲ್ಲಿ.
ಶುಕ್ರವಾರ ಹುಬ್ಬಳ್ಳಿಯಲ್ಲಿ ಪವರ್ ಸ್ಟಾರ್ ರಂಗು. ಚೆನ್ನಮ್ಮ ವೃತ್ತದಲ್ಲಿ ಸಹಸ್ರಾರು ಅಭಿಮಾನಿಗಳು ತುಂಬಿದ್ದರು. ಕೆಎಸ್ ಆರ್ ಟಿಸಿ ಬಸ್ ಏರಿ ಕನ್ನಡದ ಬಾವುಟ ಹಿಡಿದು ಹೆಜ್ಜೆ ಹಾಕಿದ ಪುನೀತ್ ಅವರೊಂದಿಗೆ ಅಭಿಮಾನಿಗಳು ಸಂಭ್ರಮಿಸಿದರು.[ದೊಡ್ಮನೆ 'ಅಪ್ಪು'ವನ್ನು ಅಪ್ಪಿಕೊಂಡ ಅಭಿಮಾನಿ ದೇವರುಗಳು]
ದೊಡ್ಮನೆ ಹುಡುಗ ಚಿತ್ರದ ಚಿತ್ರೀಕರಣ ರಾಜ್ ಕುಮಾರ್ ಅವರ ಆಕಸ್ಮಿಕ ಚಿತ್ರದ ದಿನಗಳನ್ನು ನೆನಪು ಮಾಡಿತು. ಅಭಿಮಾನಿಗಳು ಮುಗಿಬಿದ್ದ ಪರಿಣಾಮ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೆಕಾಯಿತು.[ಕೋಟಿ ರೂಪಾಯಿ ವೆಚ್ಚದಲ್ಲಿ 'ದೊಡ್ಮನೆ ಹುಡುಗ' ಸಾಂಗ್ ಶೂಟ್]
ಬುಧವಾರ ಮತ್ತು ಗುರುವಾರ ಬಳ್ಳಾರಿ ಮತ್ತು ಹೊಸಪೇಟೆಯಲ್ಲಿ ನಡೆದ ಚಿತ್ರೀಕರಣಕ್ಕೂ ಅಪಾರ ಸಂಖ್ಯೆಯ ಅಭಿಮಾನಿಗಳು ಮುತ್ತಿಗೆ ಹಾಕಿದ್ದರು.ಜನರು ಕಟ್ಟಡ ಏರಿ ಚಿತ್ರೀಕರಣ ನೋಡಿ ಸಂಭ್ರಮಿಸಿದರು. ನೆಚ್ಚಿನ ನಟನೊಂದಿಗೆ ಫೋಟೋ ತೆಗೆದುಕೊಳ್ಳಲು ಹರಸಾಹಸ ಪಟ್ಟರು.[ಪುನೀತ್ ಜೊತೆ ಡ್ಯಾನ್ಸ್ ಮಾಡಲು ಅಭಿಮಾನಿಗಳಿಗೆ ಇಲ್ಲಿದೆ ಅವಕಾಶ]