Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನಟ ಸಾರ್ವಭೌಮ' ಕಾರ್ಯಕ್ರಮ ಪ್ರಸಾರ ಸಮಯದ ಬಗ್ಗೆ ಅಭಿಮಾನಿಗಳಿಗೆ ಬೇಸರ
Recommended Video
'ನಟ ಸಾರ್ವಭೌಮ' ಸಿನಿಮಾ ಆಡಿಯೋ ಬಿಡುಗಡೆಯ ಕಾರ್ಯಕ್ರಮ ಇತ್ತೀಚಿಗಷ್ಟೆ ಹುಬ್ಬಳ್ಳಿಯಲ್ಲಿ ನಡೆದಿತ್ತು. ಈ ಕಾರ್ಯಕ್ರಮ ಪ್ರಸಾರ ಇದೇ ಭಾನುವಾರ ಜೀ ಕನ್ನಡ ವಾಹಿನಿಯಲ್ಲಿ ಆಗುತ್ತಿದೆ. ಆದರೆ, ಪುನೀತ್ ಅಭಿಮಾನಿಗಳು ಕಾರ್ಯಕ್ರಮದ ಪ್ರಸಾರದ ಸಮಯದ ಬಗ್ಗೆ ಬೇಸರಗೊಂಡಿದ್ದಾರೆ.
ಫೋಟೋಗಳು : ಅಪ್ಪುಗೆ ಆಶೀರ್ವಾದ ಮಾಡಿದ ಹುಬ್ಬಳ್ಳಿ ಮಂದಿ
ಸಂಕ್ರಾತಿ ಹಬ್ಬದ ವಿಶೇಷ ಇದೇ ಭಾನುವಾರ ಮಧ್ಯಾಹ್ನ 2 ಗಂಟೆಗೆ ಈ ಕಾರ್ಯಕ್ರಮ ಪ್ರಸಾರ ಆಗುತ್ತಿದೆ. ಕಾರ್ಯಕ್ರಮದ ಪ್ರೋಮೋ ಜೀ ಕನ್ನಡ ವಾಹಿನಿ ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಂಡಿದೆ. ಆದರೆ, ಕಾರ್ಯಕ್ರಮ ಪ್ರಸಾರದ ಸಮಯದ ಬಗ್ಗೆ ಅಪ್ಪು ಅಭಿಮಾನಿಗಳು ಬೇಸರವಾಗಿದ್ದು, ಅದನ್ನು ಬದಲಾಯಿಸಿ ಎಂದು ಮನವಿ ಮಾಡಿದ್ದಾರೆ.
ಕಾರ್ಯಕ್ರಮವನ್ನು ಭಾನುವಾರ ಮಧ್ಯಾಹ್ನ ಪ್ರಸಾರ ಮಾಡುವ ಬದಲು ಸಂಜೆ ಪ್ರಸಾರ ಮಾಡಿ ಎನ್ನುವುದು ಪುನೀತ್ ಅಭಿಮಾನಿಗಳ ಒತ್ತಾಯವಾಗಿದೆ. ಇದೊಂದು ದೊಡ್ಡ ಸಿನಿಮಾದ ದೊಡ್ಡ ಕಾರ್ಯಕ್ರಮವಾಗಿದ್ದು, ಎಲ್ಲ ಅಭಿಮಾನಿಗಳು ಇದನ್ನು ನೋಡಲು ಅನುಕೂಲ ಆಗುವಂತೆ ಪ್ರಸಾರದ ಸಮಯವನ್ನು ಬದಲಿಸಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ.
Requesting @ZeeKannada @vishvamukhi to telecast #Natasaarvabhowma audio launch program in evening time @PavanWadeyar @RocklineEnt pic.twitter.com/tG2HnRX8Si
— Puneeth Rajakumar FC (@TeamPuneeth) January 8, 2019
'ನಟ ಸಾರ್ವಭೌಮ' ಪುನೀತ್ ರಾಜ್ ಕುಮಾರ್, ರಚಿತಾ ರಾಮ್ ಹಾಗೂ ಅನುಪಮ ಪರಮೇಶ್ವರನ್ ನಟನೆಯ ಸಿನಿಮಾವಾಗಿದೆ. ಪವನ್ ಒಡೆಯರ್ ನಿರ್ದೇಶನ ಹಾಗೂ ರಾಕ್ ಲೈನ್ ವೆಂಕಟೇಶ್ ಚಿತ್ರದ ನಿರ್ಮಾಣ ಮಾಡಿದ್ದಾರೆ.