Don't Miss!
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- Automobiles ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೊಂದು ಚಿತ್ರಕ್ಕೆ ತಯಾರಿ ನಡೆಸಿದ್ದಾರೆ ಜೇಕಬ್, ಅಪ್ಪು
ಕನ್ನಡದ ಯುವರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಿನಿಮಾಗಳಲ್ಲಿ ಏನಾದರೊಂದು ಸ್ಪೆಷಾಲಿಟಿ ಇದ್ದೆ ಇರುತ್ತೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಚಿಕ್ಕವರಿಂದ ಹಿಡಿದು ದೊಡ್ಡವರ ವರೆಗೂ ಪುನೀತ್ ಸಿನಿಮಾಗಳನ್ನ ಇಷ್ಟ ಪಟ್ಟು ನೋಡುತ್ತಾರೆ. ಸಾಲು ಸಾಲು ಹಿಟ್ ಚಿತ್ರಗಳನ್ನ ನೀಡಿ ಪ್ರೇಕ್ಷಕರನ್ನು ರಂಜಿಸುತ್ತಿರುವ ಅಪ್ಪು ಕೈ ಯಲ್ಲಿ ಈಗಲು ಸಾಕಷ್ಟು ಪ್ರಾಜೆಕ್ಟ್ಗಳಿದ್ದು, ಒಂದಾದ ಮೇಲೊಂದರಂತೆ ಶೂಟಿಂಗ್ ಕಂಪ್ಲೀಟ್ ಮಾಡುತ್ತಿದ್ದಾರೆ. ಈಗ ಬಂದಿರುವ ಸುದ್ದಿ ಪ್ರಕಾರ ಅಪ್ಪು ಮತ್ತೊಂದು ಚಿತ್ರದ ಕಥೆ ಕೇಳಿ ಫೈನಲ್ ಮಾಡಿದ್ದಾರಂತೆ.
ಅಪ್ಪು ಕೈಯಲ್ಲಿ ವರ್ಷಪೂರ್ತಿ ಮಾಡುವಷ್ಟು ಸಿನಿಮಾ ಇದ್ದರೂ ಒಳ್ಳೆ ಕಥೆ ಬಂದರೆ ಅದನ್ನ ತಿರಸ್ಕರಿಸೋದಿಲ್ಲ. ಸಮಯ ಎಷ್ಟೇ ಆಗಲಿ ಸಿನಿಮಾ ಮಾಡೋಣ ಎಂದು ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿರ್ತಾರೆ. ಸದ್ಯ ಈಗ ನಿರ್ದೇಶಕ ಜೇಕಬ್ ವರ್ಗೀಸ್ ಚಿತ್ರದಲ್ಲಿ ನಟಿಸಲು ಅಪ್ಪು ಓಕೆ ಎಂದಿದ್ದಾರೆ ಅನ್ನೋ ಸುದ್ದಿ ಹರಿದಾಡ್ತಿದೆ. ಅಲ್ಲದೇ ಈ ಚಿತ್ರ ಅಪ್ಪು ಅವರ ಪಿಆರ್ಕೆ ಬ್ಯಾನರ್ನಲ್ಲೆ ಬರಲಿದ್ದು, ಚಿತ್ರದ ಟೈಟಲ್ ಆದಷ್ಟು ಬೇಗ ರಿಲೀಸ್ ಆಗಲಿದೆ ಎನ್ನಲಾಗುತ್ತಿದೆ.
2010ರಲ್ಲಿ ಬಂದ ಪೃಥ್ವಿ ಸಿನಿಮಾದ ಮೂಲಕ ಒಂದಾಗಿದ್ದ ನಿರ್ದೇಶಕ ಜೇಕಬ್ ವರ್ಗೀಸ್ ಮತ್ತು ಅಪ್ಪು ಕಾಂಬಿನೇಷನ್ ಮ್ಯಾಜಿಕ್ ಮಾಡಿತ್ತು. ಚಿತ್ರದಲ್ಲಿ ಅಪ್ಪುಗೆ ಪಾರ್ವತಿ ಮೆನನ್ ಜೋಡಿಯಾಗಿ ಅಭಿನಯಿಸಿದ್ದರು. ಐಎಎಸ್ ಆಫೀಸರ್ ಆಗಿ ಅನ್ಯಾಯದ ವಿರುದ್ಧ ಹೋರಾಡುವ ಪಾತ್ರದಲ್ಲಿ ಅಪ್ಪು ಅಭಿನಯಿಸಿ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದ್ದರು. ಹಾಡುಗಳು ಕೂಡ ಜನ ಮೆಚ್ಚುಗೆ ಪಡೆದಿತ್ತು. 2010 ರಲ್ಲಿ ಈ ರೀತಿಯ ಸಿನಿಮಾ ಕೊಟ್ಟಿದ್ದ ಜೇಕಬ್ ಇದೀಗ ಮತ್ತೊಂದು ಹೊಸ ಬಗೆಯ ಕಥೆಯನ್ನ ಅಪ್ಪು ಮುಂದೆ ಇಟ್ಟಿದ್ದಾರೆ. ಈ ಕಥೆ ಕೇಳಿ ಪುನೀತ್ ರಾಜ್ ಕುಮಾರ್ ಕೂಡ ಇಷ್ಟ ಪಟ್ಟಿದ್ದು ಒಪ್ಪಿಕೊಂಡಿರೋ ಸಿನಿಮಾಗಳು ಮುಗಿದ ನಂತರ ಈ ಪ್ರಾಜೆಕ್ಟ್ ಕೈಗೆತ್ತಿಕೊಳ್ಳೋಣ ಎಂದಿದ್ದಾರಂತೆ.
ಹೀಗಾಗಿ ಚಿತ್ರತಂಡ ಕಲಾವಿದರ ಆಯ್ಕೆ ಮತ್ತು ತಾಂತ್ರಿಕ ತಂಡಗಳನ್ನ ಒಟ್ಟು ಮಾಡುತ್ತಿದ್ದು 2022 ಫೆಬ್ರವರಿಯಲ್ಲಿ ಈ ಹೊಸ ಸಿನಿಮಾ ಸೆಟ್ಟೆರಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕೂ ಮುಂಚೆ ಅಪ್ಪು ಚೇತನ್ ಕುಮಾರ್ ನಿರ್ದೇಶನದ ಜೇಮ್ಸ್, ಇದಾದ ಬಳಿಕ ಪವನ್ ಕುಮಾರ್ ನಿರ್ದೇಶನದ ದ್ವಿತ್ವ, ಹಾಗೇ ನಿರ್ದೇಶಕ ದಿನಕರ್ ತೂಗುದೀಪ ಮತ್ತು ಸಂತೋಷ್ ಆನಂದ್ ರಾಮ್ ಹಾಗೂ ಎಸ್ ಕೃಷ್ಣ ಸಿನಿಮಾಗಳು ಮುಗಿಸಿದ ನಂತರದಲ್ಲಿ ಜೇಕಬ್ ವರ್ಗೀಸ್ ಮತ್ತು ಅಪ್ಪು ಸಿನಿಮಾ ಸೆಟ್ಟೇರಲಿದೆ.
ಕನ್ನಡಕ್ಕೆ ಚಂಬಲ್, ಸವಾರಿ 2, ಪೃಥ್ವಿ ಯಂತ ಹಿಟ್ ಸಿನಿಮಾ ಕೊಟ್ಟ ನಿರ್ದೇಶಕ ಜೇಕಬ್ ವರ್ಗೀಸ್ ಮತ್ತೊಂದು ಪ್ರಯೋಗಕ್ಕೆ ಮುಂದಾಗಿದ್ದು, ಸಿನಿಮಾ ಯಾವ ಜಾನರ್ನಲ್ಲಿ ಬರುತ್ತೆ, ಬೇರೆ ಯಾರೆಲ್ಲ ಕಲಾವಿದರು ಚಿತ್ರದಲ್ಲಿ ಇರುತ್ತಾರೆ ಎಂಬೆಲ್ಲ ಪ್ರಶ್ನೆಗಳಿಗೆ ಇನ್ನಷ್ಟೆ ಉತ್ತರಸಿಗಬೇಕಿದ್ದು, ಚಿತ್ರ ಸೆಟ್ಟೆರುವವರೆಗೂ ಕಾಯಲೇಬೇಕು.