Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಉಳಿಸಿ, ಬೆಳೆಸಲು ಅಪ್ಪು ಅವರಿಂದ ಚಿನ್ನದ ಕೊಡುಗೆ
ಎಲ್ಲವೂ ಇಂಗ್ಲೀಷ್ ಮಯ ಆಗುತ್ತಿರುವ ಈಗಿನ ಕಾಲದಲ್ಲಿ ಕನ್ನಡ ಮಾತನಾಡುವವರ ಸಂಖ್ಯೆ ಕಮ್ಮಿಯಾಗುತ್ತಿದೆ. ಹೀಗಾಗಿ ಕನ್ನಡವನ್ನ ಉಳಿಸಬೇಕು, ಕನ್ನಡವನ್ನ ಬೆಳೆಸಬೇಕು ಅನ್ನುವ ನಿಟ್ಟಿನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೊಸ ಯೋಜನೆ ಹಾಕಿಕೊಂಡಿದ್ದಾರೆ.
ಪೋಸ್ಟ್ ಗ್ರ್ಯಾಡ್ಜ್ಯುಯೇಷನ್ (ಸ್ನಾತಕ್ಕೋತ್ತರ ಪದವಿ) ನಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕಗಳು ಗಳಿಸುವ ವಿದ್ಯಾರ್ಥಿಗಳಿಗೆ ತಮ್ಮ ಟ್ರಸ್ಟ್ ಮುಖಾಂತರ ಡಾ.ರಾಜ್ ಕುಮಾರ್ ಹೆಸರಲ್ಲಿ ಚಿನ್ನದ ಪದಕ ನೀಡುವುದಾಗಿ ಅಣ್ಣಾವ್ರ ಮಗ ಅಪ್ಪು ಘೋಷಿಸಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ ಶತಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ತಯಾರಾಗಿರುವ ವಿಶೇಷ ಹಾಡಿನ ಅನಾವರಣ ಸಮಾರಂಭದಲ್ಲಿ ಭಾಗವಹಿಸಿದ ಪುನೀತ್ ರಾಜ್ ಕುಮಾರ್, ಅರ್ಹ ಪ್ರತಿಭಾವಂತ ಕನ್ನಡ ವಿದ್ಯಾರ್ಥಿಗಳಿಗೆ ಗೋಲ್ಡ್ ಮೆಡಲ್ ನೀಡಿ ಗೌರವಿಸುವುದಾಗಿ ಹೇಳಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸದಾ ಪ್ರೋತ್ಸಾಹ ನೀಡುವ ಅಪ್ಪು, ಮೊನ್ನೆಯಷ್ಟೇ 'ಚಕ್ರವ್ಯೂಹ' ಶೂಟಿಂಗ್ ನಿಮಿತ್ತ ಮಂಡ್ಯಕ್ಕೆ ತೆರಳಿದ್ದಾಗ ಅಲ್ಲಿನ ಶಾಲೆಯೊಂದಕ್ಕೆ ಭೇಟಿ ನೀಡಿ ಧನ ಸಹಾಯ ಕೂಡ ಮಾಡಿ ಬಂದಿದ್ದಾರೆ. [ಹೆಚ್ಚುದಿನ ಬದುಕುಳಿಯದ ಇಬ್ಬರ ಜೊತೆ ಮಗುವಾದ ಪುನೀತ್]
ಕೇವಲ ಸಿನಿಮಾ ಅಂತ ಬಣ್ಣದ ಪ್ರಪಂಚದಲ್ಲಿ ಮಾತ್ರ ಬಿಜಿ ಇರದೆ ಸಮಾಜಮುಖಿ ಕೆಲಸಗಳಲ್ಲೂ ಭಾಗಿಯಾಗುತ್ತಿರುವ ಪುನೀತ್ ರಾಜ್ ಕುಮಾರ್ ಗೆ ಒಂದು ಸಲಾಂ ಹಾಕಲೇಬೇಕು. ಏನಂತೀರಿ..?