Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹರ ಜಾತ್ರೆಯಲ್ಲಿ ಪುನೀತ್ ರಾಜ್ಕುಮಾರ್: ಅಭಿಮಾನಿಗಳ ನೂಕು-ನುಗ್ಗಲು
ನಟ ಪುನೀತ್ ರಾಜ್ಕುಮಾರ್ ಅವರು ಇಂದು ದಾವಣಗೆರೆಯ ಪ್ರಸಿದ್ಧ ಹರಜಾತ್ರೆ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪುನೀತ್ ಅವರನ್ನು ನೋಡಲು ಜನಸಾಗರವೇ ಹರಿಬಂದಿತ್ತು.
ಶಾಸಕ, ನಿರ್ಮಾಪಕ ಮುನಿರತ್ನ ಅವರೊಟ್ಟಿಗೆ ಪುನೀತ್ ರಾಜ್ಕುಮಾರ್ ಅವರು ದಾವಣಗೆರೆಗೆ ತೆರಳಿದ್ದರು. ಪುನೀತ್ ಬರುತ್ತಿರುವ ವಿಷಯ ತಿಳಿದು ಕಾಲೇಜು ಯುವಕ-ಯುವತಿಯರು ನೂರಾರು ಮಂದಿ ಹೆಲಿಪ್ಯಾಡ್ಗೆ ಆಗಮಿಸಿದ್ದರು.
ಅಲ್ಲಿಂದ ಕಾರ್ಯಕ್ರಮಕ್ಕೆ ತೆರಳಿದ ಪುನೀತ್ ವಚನಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಾತ್ರೆ ಕಾರ್ಯಕ್ರಮಕ್ಕೆ ಆಗಮಿಸಿದ ಪುನೀತ್ ಅನ್ನು ನೋಡಲು ಭಾರಿ ನೂಕು-ನುಗ್ಗಲು ಉಂಟಾಯಿತು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯ್ತು.
Recommended Video
ಹರಿಹರ ಜಾತ್ರಾ ಕಾರ್ಯಕ್ರಮದಲ್ಲಿ ಹಲವಾರು ಮಂದಿ ರಾಜಕಾರಣಿಗಳು, ಸೆಲೆಬ್ರಿಟಿಗಳು ಭಾಗವಹಿಸಿದ್ದಾರೆ. ನಿನ್ನೆಯಷ್ಟೆ ಸಿಎಂ ಯಡಿಯೂರಪ್ಪ ಅವರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಲವು ಮಂದಿ ಸಚಿವರುಗಳ ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ನಟ ಪುನೀತ್ ರಾಜ್ಕುಮಾರ್ ಅವರು ಹೋದಲ್ಲೆಲ್ಲಾ ಅಭಿಮಾನಿಗಳು ಸುತ್ತುವರೆಯುವುದು ಮಾಮೂಲು. ಕೆಲವು ದಿನಗಳ ಹಿಂದೆ ಕುಮುಟಾಕ್ಕೆ ಮದುವೆಗೆ ಬಂದಿದ್ದ ಪುನೀತ್ ಅವರನ್ನು ನೋಡಲು ಸಾವಿರಾರು ಮಂದಿ ಮದುವೆ ಮಂಟಪದ ಮುಂದೆ ಜಮಾಯಿಸಿಬಿಟ್ಟಿದ್ದರು. ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಡಬೇಕಾಯ್ತು.