Don't Miss!
- News Lok Sabha Election 2024: ಬೆಂಗಳೂರು ಉತ್ತರದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ! ಶೋಭಾ ಎದುರು ‘ಕೈ’ ಅಸ್ತ್ರ ವರ್ಕೌಟ್ ಆಗುತ್ತಾ?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹರ ಜಾತ್ರೆಯಲ್ಲಿ ಪುನೀತ್ ರಾಜ್ಕುಮಾರ್: ಅಭಿಮಾನಿಗಳ ನೂಕು-ನುಗ್ಗಲು
ನಟ ಪುನೀತ್ ರಾಜ್ಕುಮಾರ್ ಅವರು ಇಂದು ದಾವಣಗೆರೆಯ ಪ್ರಸಿದ್ಧ ಹರಜಾತ್ರೆ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪುನೀತ್ ಅವರನ್ನು ನೋಡಲು ಜನಸಾಗರವೇ ಹರಿಬಂದಿತ್ತು.
ಶಾಸಕ, ನಿರ್ಮಾಪಕ ಮುನಿರತ್ನ ಅವರೊಟ್ಟಿಗೆ ಪುನೀತ್ ರಾಜ್ಕುಮಾರ್ ಅವರು ದಾವಣಗೆರೆಗೆ ತೆರಳಿದ್ದರು. ಪುನೀತ್ ಬರುತ್ತಿರುವ ವಿಷಯ ತಿಳಿದು ಕಾಲೇಜು ಯುವಕ-ಯುವತಿಯರು ನೂರಾರು ಮಂದಿ ಹೆಲಿಪ್ಯಾಡ್ಗೆ ಆಗಮಿಸಿದ್ದರು.
ಅಲ್ಲಿಂದ ಕಾರ್ಯಕ್ರಮಕ್ಕೆ ತೆರಳಿದ ಪುನೀತ್ ವಚನಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಾತ್ರೆ ಕಾರ್ಯಕ್ರಮಕ್ಕೆ ಆಗಮಿಸಿದ ಪುನೀತ್ ಅನ್ನು ನೋಡಲು ಭಾರಿ ನೂಕು-ನುಗ್ಗಲು ಉಂಟಾಯಿತು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯ್ತು.
Recommended Video
ಹರಿಹರ ಜಾತ್ರಾ ಕಾರ್ಯಕ್ರಮದಲ್ಲಿ ಹಲವಾರು ಮಂದಿ ರಾಜಕಾರಣಿಗಳು, ಸೆಲೆಬ್ರಿಟಿಗಳು ಭಾಗವಹಿಸಿದ್ದಾರೆ. ನಿನ್ನೆಯಷ್ಟೆ ಸಿಎಂ ಯಡಿಯೂರಪ್ಪ ಅವರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಲವು ಮಂದಿ ಸಚಿವರುಗಳ ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ನಟ ಪುನೀತ್ ರಾಜ್ಕುಮಾರ್ ಅವರು ಹೋದಲ್ಲೆಲ್ಲಾ ಅಭಿಮಾನಿಗಳು ಸುತ್ತುವರೆಯುವುದು ಮಾಮೂಲು. ಕೆಲವು ದಿನಗಳ ಹಿಂದೆ ಕುಮುಟಾಕ್ಕೆ ಮದುವೆಗೆ ಬಂದಿದ್ದ ಪುನೀತ್ ಅವರನ್ನು ನೋಡಲು ಸಾವಿರಾರು ಮಂದಿ ಮದುವೆ ಮಂಟಪದ ಮುಂದೆ ಜಮಾಯಿಸಿಬಿಟ್ಟಿದ್ದರು. ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಡಬೇಕಾಯ್ತು.