Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರು ವಿಶ್ವವಿದ್ಯಾಲಯ ಬಿಕಾಂ ಪಠ್ಯದಲ್ಲಿ ಪವರ್ಸ್ಟಾರ್ ಪುನೀತ್ ರಾಜಕುಮಾರ್
ಕರ್ನಾಟಕ ರತ್ನ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿ ಒಂದು ವರ್ಷ ಆಗಿದೆ. ಅವರ ಜೀವಿತಾವಧಿಯಲ್ಲಿ ಅಪ್ಪು ಮಾಡಿದ ಸಮಾಜಮುಖಿ ಕೆಲಸಗಳು ಯಾರು ಮರೆಯುವಂತಿಲ್ಲ. ಇಂದಿಗೂ ಪುನೀತ್ ಒಳ್ಳೆ ಕೆಲಸಗಳನ್ನು ನೆನೆದು ಅವರ ಹಾದಿಯಲ್ಲಿಯೇ ಅಭಿಮಾನಿಗಳು ಸಾಗುತ್ತಿದ್ದಾರೆ.
ಪುನೀತ್ ರಾಜ್ಕುಮಾರ್ ಸಿನಿಮಾ ಬದುಕು ಎಷ್ಟು ರೋಚಕವಾಗಿದೆಯೋ, ಹಾಗೇ ತೆರೆಯ ಹಿಂದಿನ ಬದುಕು ಕೂಡ ಅಷ್ಟೇ ಮಾದರಿಯಾಗಿದೆ. ಹೀಗಾಗಿ ಅಪ್ಪು ಆತ್ಮಚರಿತ್ರೆಯನ್ನು ಪುಸ್ತಕರೂಪದಲ್ಲಿ ಪತ್ರಕರ್ತ ಶರಣು ಹುಲ್ಲೂರು ತಂದಿದ್ದರು. ಅದೇ ಪುಸ್ತಕ ಈಗ ಪಠ್ಯಪುಸ್ತಕವಾಗಿ ಬದಲಾಗಿದೆ.
"ಆ ದೇವತಾ ಮನುಷ್ಯನ ಬಗ್ಗೆ ಮಾತಾಡೋ ಯೋಗ್ಯತೆನೂ ಇಲ್ಲ" - ದುನಿಯಾ ವಿಜಯ್!
ಪುನೀತ್ ರಾಜಕುಮಾರ್ ಬದುಕನ್ನು ಪಠ್ಯಪುಸ್ತಕದಲ್ಲಿ ಅಳವಡಿಸಬೇಕು ಅನ್ನೋದು ಅಪ್ಪು ಅಭಿಮಾನಿಗಳ ಬಯಕೆಯಾಗಿತ್ತು. ಪವರ್ಸ್ಟಾರ್ ಅಭಿಮಾನಿಗಳು ರಾಜ್ಯ ಸರಕಾರಕ್ಕೆ ಪತ್ರವನ್ನೂ ಬರೆದಿದ್ದವು. ಅಲ್ಲದೆ ಉನ್ನತ ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಅಭಿಮಾನಿಗಳು ಮನವಿಯನ್ನೂ ಸಲ್ಲಿಸಿದ್ದರು.
ಬಿಕಾಂ ಸೆಮಿಸ್ಟರ್ನಲ್ಲಿ ಪುನೀತ್ ಪಠ್ಯ
ಈಗ ರಾಜ್ಯ ಸರ್ಕಾರ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದೆ. ಬೆಂಗಳೂರು ವಿಶ್ವವಿದ್ಯಾಲಯದ ಬಿಕಾಂ ಮೂರನೇ ಸೆಮಿಸ್ಟರ್ನ ಕನ್ನಡ ಭಾಷಾ ಪಠ್ಯದಲ್ಲಿ 'ವಾಣಿಜ್ಯ ಕನ್ನಡ 3' ರಲ್ಲಿ ಪುನೀತ್ ರಾಜ್ಕುಮಾರ್ ಅವರ ಜೀವನದ ಆಯ್ದ ಭಾಗವನ್ನು ಸಿಲಬಸ್ಗೆ ಅಳವಡಿಸಿಕೊಂಡಿದೆ.
'ಲೋಹಿತ್ ಎಂಬ ಮರಿಮುದ್ದ' ಪಠ್ಯ
ಪತ್ರಕರ್ತ ಡಾ.ಶರಣು ಹುಲ್ಲೂರು ಬರೆದ 'ನೀನೇ ರಾಜಕುಮಾರ್' ಕೃತಿಯ ಒಂದು ಅಧ್ಯಾಯವನ್ನು ಪಠ್ಯಪುಸ್ತಕವಾಗಿ ಅಳವಡಿಸಲಾಗಿದೆ. 'ಲೋಹಿತ್ ಎಂಬ ಮರಿಮುದ್ದ' ಭಾಗವನ್ನು ಬಿಕಾಂ ಮೂರನೇ ಸೆಮಿಸ್ಟರ್ನ ಪಠ್ಯದಲ್ಲಿ ಬಳಸಿಕೊಳ್ಳಲಾಗಿದೆ. ಇದು ಅಪ್ಪು ಅಭಿಮಾನಿಗಳ ಹರ್ಷವನ್ನು ಡಬಲ್ ಮಾಡಿದೆ.
ಪಠ್ಯ ಪುಸ್ತಕ ಸಂಪಾದಕ ಮಂಡಳಿ ನಿರ್ಧಾರ
ಬೆಂಗಳೂರು ವಿಶ್ವವಿದ್ಯಾಲಯ. ಡಾ.ಮುನಿಯಪ್ಪ ಈ ಪಠ್ಯಪುಸ್ತಕದ ಪ್ರಧಾನ ಸಂಪಾದಕರಾಗಿದ್ದು, ಡಾ.ಅಮರೇಂದ್ರ ಶೆಟ್ಟಿ, ಆರ್. ಡಾ.ಕ.ನಿಂ. ಹೊಯ್ಸಳಾದಿತ್ಯ, ಡಾ.ಶಿವರಾಜ ಬಿ.ಇ ಹಾಗೂ ಡಾ.ರಘುನಂದನ್ ಬಿ.ಆರ್ ಪಠ್ಯದ ಸಂಪಾದಕರಾಗಿದ್ದಾರೆ. ಈ ವರ್ಷದ ಬಿ.ಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯದಲ್ಲಿ ಪುನೀತ್ ಅವರ ಬಾಲ್ಯವನ್ನು ಅಳವಡಿಸಲಾಗಿದೆ.
'ನೀನೇ ರಾಜಕುಮಾರ' 4ನೇ ಆವೃತ್ತಿ
ಕೆಲವು ದಿನಗಳ ಹಿಂದಷ್ಟೇ ಶರಣು ಹುಲ್ಲೂರು ಬರೆದ 'ನೀನೇ ರಾಜಕುಮಾರ' ಪುಸ್ತಕದ ನಾಲ್ಕನೇ ಆವೃತ್ತಿಯನ್ನು ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. 2022ರಲ್ಲಿ ಕನ್ನಡದಲ್ಲಿ ಅತೀ ಹೆಚ್ಚು ಮಾರಾಟ ಕಂಡ ಬಯೋಗ್ರಫಿ ಹೆಗ್ಗಳಿಕೆಗೂ ಪಾತ್ರವಾಗಿದೆ. ಇದೀಗ ಪಠ್ಯಪುಸ್ತಕಕ್ಕೂ ಕೃತಿಯ ಆಯ್ದ ಭಾಗವನ್ನು ಅಳವಡಿಸಿಕೊಳ್ಳಲಾಗಿದೆ.