Don't Miss!
- News ನೇಹಾ ಕೊಲೆ ಕೇಸ್ ಸಿಐಡಿಗೆ ಹಸ್ತಾಂತರ: ಇಂದು ಫಯಾಜ್ ವಶಕ್ಕೆ ಸಾಧ್ಯತೆ
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Finance April 24 Gold Rate: ಚಿನ್ನದ ಬೆಲೆ ಇಳಿಕೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Technology Infinix: ನಾಳೆ ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಫೋನ್ ಖರೀದಿಗೆ ಲಭ್ಯ..108ಎಂಪಿ ಕ್ಯಾಮೆರಾ!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾ.ರಾಜ್ ಜೊತೆ ದಿಲೀಪ್ ಕುಮಾರ್; ಅಪರೂಪದ ಫೋಟೋ ಶೇರ್ ಮಾಡಿ ಪುನೀತ್ ಸಂತಾಪ
ಬಾಲಿವುಡ್ನ ಖ್ಯಾತ ನಟ, ಟ್ರ್ಯಾಜಿಡಿ ಕಿಂಗ್ ಎಂದೇ ಪ್ರಸಿದ್ಧಿ ಪಡೆದಿದ್ದ ನಟ ದಿಲೀಪ್ ಇನ್ನು ನೆನಪು ಮಾತ್ರ. ಇಂದು (ಜುಲೈ 7) ಬೆಳಗ್ಗೆ ಮುಂಬೈ ಹಿಂದೂಜಾ ಆಸ್ಪತ್ರೆಯಲ್ಲಿ ದಿಲೀಪ್ ಕುಮಾರ್ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ದಿಲೀಪ್ ಪದೇ ಪದೇ ಆಸ್ಪತ್ರೆಗೆ ದಾಖಲಾಗುತ್ತಿದ್ದು. ಇಂದು ಚಿಕಿತ್ಸೆ ಫಲಕಾರಿಯಾಗದೆ ದಿಲೀಪ್ ಕುಮಾರ್ ಕೊನೆಯುಸಿರೆಳೆದರು.
ಪ್ರಸಿದ್ಧ ನಟನ ನಿಧನಕ್ಕೆ ಇಡೀ ಬಾಲಿವುಡ್ ಕಂಬನಿ ಮಿಡಿದಿದೆ. 'ದುರಂತ ನಾಯಕ' ಎಂದೇ ಖ್ಯಾತಿ ಗಳಿಸಿಕೊಂಡಿರುವ ದಿಲೀಪ್ ಕುಮಾರ್ಗೆ ಅಗಲಿಕೆಗೆ ಬಾಲಿವುಡ್ ಮಾತ್ರವಲ್ಲದೆ ದಕ್ಷಿಣ ಚಿತ್ರರಂಗದ ಪ್ರಮುಖರು ಸಂತಾಪ ಸೂಚಿಸಿದ್ದಾರೆ. ಕನ್ನಡದ ನಟ ಪವರ್ ಸ್ಟಾರ್ ಪುನೀತ್ ರಾಜ್ ರಾಜ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.
ದಿಗ್ಗಜ ನಟ ದಿಲೀಪ್ ಕುಮಾರ್ ಅಗಲಿಕೆಗೆ ಸಂತಾಪ ಸೂಚಿಸಿದ ಸಿನಿತಾರೆಯರು
ಡಾ.ರಾಜ್ ಕುಮಾರ್ ಮತ್ತು ದಿಲೀಪ್ ಕುಮಾರ್ ಇಬ್ಬರೂ ಒಟ್ಟಿಗೆ ಇರುವ ಅಪರೂಪದ ಫೋಟೋವನ್ನು ಪುನೀತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. "ಎರಡು ವಿಶೇಷ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಅಪ್ಪಾಜಿ ಮತ್ತು ದಿಲೀಪ್ ಕುಮಾರ್ ಇಬ್ಬರೂ ಪರಸ್ಪರ ಆತ್ಮೀಯರಾಗಿದ್ದರು. ಅಪ್ಪಾಜಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸುವ ಸಂದರ್ಭದಲ್ಲಿ ಅವರನ್ನು ಭೇಟಿಯಾಗಿದ್ದು ನನಗೆ ನೆನಪಿದೆ. ಭಾರತೀಯ ಸಿನಿಮಾರಂಗಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ" ಎಂದು ಬರೆದುಕೊಂಡಿದ್ದಾರೆ.
Recommended Video
ಇನ್ನು ಕಿಚ್ಚ ಸುದೀಪ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. ''ಸಾರ್ವಕಾಲಿಕ ಶ್ರೇಷ್ಠ ನಟ, ಅದ್ಭುತ ವಾಗ್ಮಿ ಮತ್ತು ಸರಳತೆಯ ಸಾಮ್ರಾಟ್ ಎಂದು ಜಗತ್ತು ದಿಲೀಪ್ ಕುಮಾರ್ರನ್ನು ಶ್ಲಾಘಿಸಿತ್ತು. ಅನೇಕ ತಲೆಮಾರಿಗೆ ಅವರು ಸ್ಫೂರ್ತಿಯಾಗಿ ಉಳಿಯಲಿದ್ದಾರೆ. ಲೆಜೆಂಡ್ಗಳು ಶಾಶ್ವತವಾಗಿ ಇರ್ತಾರೆ'' ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.