Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ ಅಂತಿಮ ದರ್ಶನ ಎಲ್ಲಿ? ಯಾವಾಗ?
ನಟ ಪುನೀತ್ ರಾಜ್ಕುಮಾರ್ ಬಾರದ ಲೋಕಕ್ಕೆ ತೆರಳಿದ್ದಾರೆ. ಅರಗಿಸಿಕೊಳ್ಳಲು ಸಾಧ್ಯವಾಗದಿದ್ದರು, ಇಹಲೋಕ ತ್ಯಜಿಸಿದ್ದಾರೆ ಪುನೀತ್. ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿದ್ರು, ನಟಿಸಲು ಬಾಕಿ ಇದ್ದ ಸಿನಿಮಾಗಳ ಪಟ್ಟಿಯೇ ಇದ್ದವು, ಹೆಚ್ಚಾಗಿ ದೇವರಂತೆ ಕಾಣುತ್ತಿದ್ದ ಅಭಿಮಾನಿಗಳು ಮತ್ತು ಕುಟುಂಬ ಸದಸ್ಯರನ್ನು ಪುನೀತ್ ಅಗಲಿದ್ದಾರೆ. ಜಿಮ್ನಲ್ಲಿ ವರ್ಕ್ಔಟ್ ಮಾಡುವಾಗ ಲಘು ಹೃದಯಾಘಾತ ಸಂಭವಿಸಿದೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರು ಕೂಡ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸುಮಾರು 11.30ಕ್ಕೆ ವಿಧಿವಶರಾಗಿದ್ದಾರೆ.
ವಿಕ್ರಂ ಆಸ್ಪತ್ರೆಯಿಂದ ಪುನೀತ್ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ನಗರದ ಕಂಠೀರವ ಸ್ಟೇಡಿಯಂನಲ್ಲಿ ಇಂದು ಸಂಜೆಯಿಂದಲೇ ಇರಿಸಲಾಗುತ್ತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ. ಇಂದು ಸಂಜೆಯಿಂದ ನಾಳೆ ಸಂಜೆಯವರೆಗೂ ಪುನೀತ್ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಿದ್ದು, ಕುಟುಂಬದವರ ಇಚ್ಛೆಯಂತೆ ಅಂತಿಮ ಸಂಸ್ಕಾರದ ಸಿದ್ದತೆ ನಡೆಸಲಾಗುತ್ತೆ. ನಾಳೆ ಸಂಜೆ ಅಥವಾ ಭಾನುವಾರ ಬೆಳಗ್ಗೆ ಸಮಯ ನಿಗದಿ ಮಾಡಿಕೊಂಡು ಅಂತಿಮ ವಿಧಿ ವಿಧಾನ ಮಾಡುವ ಬಗ್ಗೆ ಚಿಂತಿಸಲಾಗುತ್ತಿದೆ.
ಹಾಗೇ ಯಾವ ಜಾಗದಲ್ಲಿ ಅಂತಿಮ ಸಂಸ್ಕಾರ ಮಾಡಬೇಕು ಎಂಬ ಬಗ್ಗೆ ಕುಟುಂಬ ಸದಸ್ಯರ ಅಭಿಪ್ರಾಯ ಕೇಳಿ ಅವರಿಚ್ಛೆಯಂತೆ ನಡೆಸಿಕೊಡಲು ಸರ್ಕಾರ ಕೂಡ ಮುಂದಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಗಳು ಪುನೀತ್ ಈ ಅಕಾಲಿಕ ಮರಣಕ್ಕೆ ಕಂಬನಿ ಮಿಡಿಯುತ್ತಿದ್ದು, ಅಂತಿಮ ದರ್ಶನಕ್ಕಾಗಿ ಕಾದುಕುಳಿತ್ತಿದ್ದಾರೆ. ಹೀಗಾಗಿ ಅಭಿಮಾನಿಗಳೆಲ್ಲರಿಗೂ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಸಧ್ಯ ಪುನೀತ್ ಅವರ ಪಾರ್ಥೀವ ಶರೀರವನ್ನು ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಆಂಬುಲೆನ್ಸ್ ಮುಖಾಂತರ ತೆಗೆದುಕೊಂಡು ಹೋಗಲಾಗಿದ್ದು, ಮನೆಯಲ್ಲಿ ಮಾಡುವ ಒಂದಷ್ಟು ಶಾಸ್ತ್ರಗಳು ನೆರವೇರಲಿದೆ. ಮನೆಯ ಬಳಿ ಸಾಕಷ್ಟು ಅಭಿಮಾನಿಗಳು ನೆರೆದಿದ್ದು, ಅಪ್ಪುವನ್ನು ನೆನೆದು ಕಣ್ಣೀರು ಹಾಕುತ್ತಿದ್ದಾರೆ. ಯಾವುದೇ ತರಹ ಅಹಿತಕರ ಘಟನೆಗಳು ಆಗದಂತೆ ನೋಡಿಕೊಳ್ಳಲು ಪೋಲಿಸ್ ಭದ್ರತಾಪಡೆ ಮುಂದಾಗಿದೆ.