Don't Miss!
- News ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ? ಡಿ ಕೆ ಶಿವಕುಮಾರ್ ಹೇಳಿದ್ದೇನು?
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಂಧದಗುಡಿ ಬಿಡುಗಡೆಗೆ ಅಭಿಮಾನಿ ದೇವರುಗಳ ಪ್ಲಾನ್; ಮುಖ್ಯ ಚಿತ್ರಮಂದಿರದ ಎದುರು 3 ಪ್ರಮುಖ ಕಟ್ಔಟ್
ಪುನೀತ್ ರಾಜ್ ಕುಮಾರ್ ಅಭಿನಯದ ಅಂತಿಮ ಚಿತ್ರವಾದ ಗಂಧದಗುಡಿ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ನಿರೀಕ್ಷೆಗಿಂತ ಹೆಚ್ಚಾಗಿ ಪುನೀತ್ ರಾಜ್ ಕುಮಾರ್ ಅವರನ್ನು ಕೊನೆಯ ಬಾರಿಗೆ ಬೆಳ್ಳಿ ತೆರೆ ಮೇಲೆ ನೋಡಲು ಇರುವ ಅಂತಿಮ ಅವಕಾಶ ಇದಾಗಿದೆ. ಪುನೀತ್ ರಾಜ್ ಕುಮಾರ್ ಹಾಗೂ ಅಮೋಘವರ್ಷ ಕರ್ನಾಟಕದ ಕಾಡುಮೇಡುಗಳಲ್ಲಿ ಅಲೆದು ಕರ್ನಾಟಕದ ವನ್ಯ ಸಂಪತ್ತಿನ ಕುರಿತು ಚಿತ್ರೀಕರಿಸಲಾಗಿರುವ ಡಾಕ್ಯುಮೆಂಟರಿ ಇದಾಗಿದ್ದು, ನಮ್ಮ ಮಣ್ಣಿನ ವಿಚಾರವನ್ನು ತೆರೆದಿಡಲಿದೆ. ಈ ಚಿತ್ರಕ್ಕೆ ಗಂಧದ ಗುಡಿ ಎಂದು ಹೆಸರು ಇಡಲಾಗಿದ್ದು, ಇದೇ ಶೀರ್ಷಿಕೆಯಡಿಯಲ್ಲಿ ಈಗಾಗಲೇ ರಾಜ್ ಕುಮಾರ್ ಹಾಗೂ ಶಿವರಾಜ್ ಕುಮಾರ್ ಚಿತ್ರಗಳನ್ನು ಮಾಡಿದ್ದು, ಇದೀಗ ಅಪ್ಪು ಕೂಡ ಈ ಟೈಟಲ್ ಅಡಿಯಲ್ಲಿ ಚಿತ್ರ ಮಾಡಿರುವುದು ವಿಶೇಷವಾಗಿದೆ.
ಇನ್ನು ಗಂಧದಗುಡಿ ಬಿಡುಗಡೆಗೆ ಇನ್ನೂ ತಿಂಗಳಿಗಿಂತ ಹೆಚ್ಚು ದಿನ ಬಾಕಿ ಇರುವಾಗಲೇ ಅಪ್ಪು ಅಭಿಮಾನಿಗಳು ಗಂಧದಗುಡಿ ಹಬ್ಬ ಎಂಬ ಹೆಸರಿನಲ್ಲಿ ಈಗಾಗಲೇ ಸಂಭ್ರಮಾಚರಣೆಯನ್ನು ಆಚರಿಸಿದ್ದು, ಭಾನುವಾರದಂದು ಅಪ್ಪು ಪೋಸ್ಟರ್ಗೆ ಮಂಗಳಾರತಿ ಮಾಡಿ, ಹಾಲಿನ ಅಭಿಷೇಕ ಮಾಡಿ ಜೈಕಾರ ಕೂಗಿ ಸಂಭ್ರಮಿಸಿದ್ದರು. ಇದೀಗ ಅಪ್ಪು ಫ್ಯಾನ್ಸ್ ಮತ್ತೊಂದು ತೀರ್ಮಾನವನ್ನು ತೆಗೆದುಕೊಂಡಿದ್ದು ಗಂಧದಗುಡಿ ಬಿಡುಗಡೆಗೆ ಚಿತ್ರ ಬಿಡುಗಡೆಯಾಗಲಿರುವ ಕೆಜಿ ರಸ್ತೆಯ ಪ್ರಮುಖ ಚಿತ್ರಮಂದಿರದ ಎದುರು ರಾಜ್ ಕುಮಾರ್, ಶಿವರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಈ ಮೂವರು ನಟರ ಕಟ್ ಔಟ್ ನಿಲ್ಲಿಸಲು ಯೋಜನೆ ರೂಪಿಸಲಾಗಿದೆ. ಮೂವರೂ ಸಹ ಗಂಧದಗುಡಿ ಶೀರ್ಷಿಕೆ ಅಡಿಯಲ್ಲಿ ಚಿತ್ರ ಮಾಡಿರುವ ಕಾರಣ ಈ ಚಿತ್ರದ ಕಟ್ ಔಟ್ ಗಳನ್ನೇ ನಿಲ್ಲಿಸುವ ಸಾಧ್ಯತೆಗಳು ಹೆಚ್ಚಿವೆ.