Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಂಧದಗುಡಿ ಬಿಡುಗಡೆಗೆ ಅಭಿಮಾನಿ ದೇವರುಗಳ ಪ್ಲಾನ್; ಮುಖ್ಯ ಚಿತ್ರಮಂದಿರದ ಎದುರು 3 ಪ್ರಮುಖ ಕಟ್ಔಟ್
ಪುನೀತ್ ರಾಜ್ ಕುಮಾರ್ ಅಭಿನಯದ ಅಂತಿಮ ಚಿತ್ರವಾದ ಗಂಧದಗುಡಿ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ನಿರೀಕ್ಷೆಗಿಂತ ಹೆಚ್ಚಾಗಿ ಪುನೀತ್ ರಾಜ್ ಕುಮಾರ್ ಅವರನ್ನು ಕೊನೆಯ ಬಾರಿಗೆ ಬೆಳ್ಳಿ ತೆರೆ ಮೇಲೆ ನೋಡಲು ಇರುವ ಅಂತಿಮ ಅವಕಾಶ ಇದಾಗಿದೆ. ಪುನೀತ್ ರಾಜ್ ಕುಮಾರ್ ಹಾಗೂ ಅಮೋಘವರ್ಷ ಕರ್ನಾಟಕದ ಕಾಡುಮೇಡುಗಳಲ್ಲಿ ಅಲೆದು ಕರ್ನಾಟಕದ ವನ್ಯ ಸಂಪತ್ತಿನ ಕುರಿತು ಚಿತ್ರೀಕರಿಸಲಾಗಿರುವ ಡಾಕ್ಯುಮೆಂಟರಿ ಇದಾಗಿದ್ದು, ನಮ್ಮ ಮಣ್ಣಿನ ವಿಚಾರವನ್ನು ತೆರೆದಿಡಲಿದೆ. ಈ ಚಿತ್ರಕ್ಕೆ ಗಂಧದ ಗುಡಿ ಎಂದು ಹೆಸರು ಇಡಲಾಗಿದ್ದು, ಇದೇ ಶೀರ್ಷಿಕೆಯಡಿಯಲ್ಲಿ ಈಗಾಗಲೇ ರಾಜ್ ಕುಮಾರ್ ಹಾಗೂ ಶಿವರಾಜ್ ಕುಮಾರ್ ಚಿತ್ರಗಳನ್ನು ಮಾಡಿದ್ದು, ಇದೀಗ ಅಪ್ಪು ಕೂಡ ಈ ಟೈಟಲ್ ಅಡಿಯಲ್ಲಿ ಚಿತ್ರ ಮಾಡಿರುವುದು ವಿಶೇಷವಾಗಿದೆ.
ಇನ್ನು ಗಂಧದಗುಡಿ ಬಿಡುಗಡೆಗೆ ಇನ್ನೂ ತಿಂಗಳಿಗಿಂತ ಹೆಚ್ಚು ದಿನ ಬಾಕಿ ಇರುವಾಗಲೇ ಅಪ್ಪು ಅಭಿಮಾನಿಗಳು ಗಂಧದಗುಡಿ ಹಬ್ಬ ಎಂಬ ಹೆಸರಿನಲ್ಲಿ ಈಗಾಗಲೇ ಸಂಭ್ರಮಾಚರಣೆಯನ್ನು ಆಚರಿಸಿದ್ದು, ಭಾನುವಾರದಂದು ಅಪ್ಪು ಪೋಸ್ಟರ್ಗೆ ಮಂಗಳಾರತಿ ಮಾಡಿ, ಹಾಲಿನ ಅಭಿಷೇಕ ಮಾಡಿ ಜೈಕಾರ ಕೂಗಿ ಸಂಭ್ರಮಿಸಿದ್ದರು. ಇದೀಗ ಅಪ್ಪು ಫ್ಯಾನ್ಸ್ ಮತ್ತೊಂದು ತೀರ್ಮಾನವನ್ನು ತೆಗೆದುಕೊಂಡಿದ್ದು ಗಂಧದಗುಡಿ ಬಿಡುಗಡೆಗೆ ಚಿತ್ರ ಬಿಡುಗಡೆಯಾಗಲಿರುವ ಕೆಜಿ ರಸ್ತೆಯ ಪ್ರಮುಖ ಚಿತ್ರಮಂದಿರದ ಎದುರು ರಾಜ್ ಕುಮಾರ್, ಶಿವರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಈ ಮೂವರು ನಟರ ಕಟ್ ಔಟ್ ನಿಲ್ಲಿಸಲು ಯೋಜನೆ ರೂಪಿಸಲಾಗಿದೆ. ಮೂವರೂ ಸಹ ಗಂಧದಗುಡಿ ಶೀರ್ಷಿಕೆ ಅಡಿಯಲ್ಲಿ ಚಿತ್ರ ಮಾಡಿರುವ ಕಾರಣ ಈ ಚಿತ್ರದ ಕಟ್ ಔಟ್ ಗಳನ್ನೇ ನಿಲ್ಲಿಸುವ ಸಾಧ್ಯತೆಗಳು ಹೆಚ್ಚಿವೆ.