Don't Miss!
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- News ಮಹಾರಾಜರು ಬೆಂಗಳೂರು ಅರಮನೆ ಮೈದಾನ ಜಾಗ ಬಿಟ್ಟು ಕೊಡುವಂತೆ ಎಎಪಿ ಆಗ್ರಹ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಜನಿಪುತ್ರ ಪ್ರದರ್ಶನ ತಡೆಯನ್ನ ವಿರೋಧಿಸಿ ಅಭಿಮಾನಿಗಳ ಹೋರಾಟ
ಪವರ್ಸ್ಟಾರ್ ಪುನೀತ್ ರಾಜ್ ಕುಮಾರ್ ಸಿನಿಮಾರಂಗಕ್ಕೆ ಎಂಟ್ರಿಕೊಟ್ಟ ನಂತರ ಹೆಚ್ಚು ವಿವಾದಕ್ಕೆ ಸಿಲುಕಿಕೊಳ್ಳದ ನಾಯಕನಟ. ತಾನಾಯ್ತು ತನ್ನ ಕೆಲಸ ಆಯಿತು ಅಂತಿದ್ದ ಪವರ್ ಸ್ಟಾರ್ ಅಭಿನಯದ ಸಿನಿಮಾ ಸದ್ಯ ವಿವಾದದಲ್ಲಿ ಸಿಲುಕಿರೋದು ಗೊತ್ತಿರೋ ವಿಚಾರ. ಮೂರು ದಿನಗಳ ಹಿಂದೆಯಷ್ಟೇ ಬಿಡುಗಡೆಯಾದ ಅಂಜನಿಪುತ್ರ ಸಿನಿಮಾದಲ್ಲಿ ವಕೀಲರನ್ನ ಅವಹೇಳನ ಮಾಡಲಾಗಿದೆ ಎಂದು ವಕೀಲರೊಬ್ಬರು ಕೋರ್ಟ್ ಮೆಟ್ಟಿಲೇರಿ ಸಿನಿಮಾ ಪ್ರದರ್ಶನಕ್ಕೆ ಅಡ್ಡಿ ತಂದಿದ್ದರು.
ಅಂಜನಿಪುತ್ರ ಚಿತ್ರವನ್ನ ವಿತರಣೆ ಮಾಡುತ್ತಿರುವ ನಿರ್ಮಾಪಕ ಜಾಕ್ ಮಂಜು ಸಿನಿಮಾ ಯಾವುದೇ ತೊಂದರೆ ಇಲ್ಲದೆ ಪ್ರದರ್ಶನವಾಗಲಿದೆ ಎಂದು ತಿಳಿಸಿದ್ದಾರೆ. ಸುಮಾರು 400ಕ್ಕೂ ಹೆಚ್ಚು ಚಿತ್ರ ಮಂದಿರದಲ್ಲಿ ಅಂಜನಿಪುತ್ರ ಸಿನಿಮಾ ಪ್ರದರ್ಶನವಾಗುತ್ತಿದೆ.
ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿರುವ ಚಿತ್ರಕ್ಕೆ ಸ್ಟೇ ತಂದಿರುವ ಹಿನ್ನಲೆಯಲ್ಲಿ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಚಿತ್ರಮಂದಿರದ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಬೆಂಗಳೂರಿನ ಟೋಲ್ ಗೇಟ್ ಬಳಿ ಇರುವ ಪ್ರಸನ್ನ ಹಾಗೂ ಕೆ ಜಿ ರಸ್ತೆಯಲ್ಲಿರುವ ತ್ರಿವೇಣಿ ಥಿಯೇಟರ್ ಬಳಿ ಕಪ್ಪು ಪಟ್ಟಿ ಧರಿಸಿ ವಕೀಲರ ಈ ನೀತಿಯನ್ನ ವಿರೋಧಿಸಲಿದ್ದಾರೆ.