Don't Miss!
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಜನಿಪುತ್ರ ಪ್ರದರ್ಶನ ತಡೆಯನ್ನ ವಿರೋಧಿಸಿ ಅಭಿಮಾನಿಗಳ ಹೋರಾಟ
ಪವರ್ಸ್ಟಾರ್ ಪುನೀತ್ ರಾಜ್ ಕುಮಾರ್ ಸಿನಿಮಾರಂಗಕ್ಕೆ ಎಂಟ್ರಿಕೊಟ್ಟ ನಂತರ ಹೆಚ್ಚು ವಿವಾದಕ್ಕೆ ಸಿಲುಕಿಕೊಳ್ಳದ ನಾಯಕನಟ. ತಾನಾಯ್ತು ತನ್ನ ಕೆಲಸ ಆಯಿತು ಅಂತಿದ್ದ ಪವರ್ ಸ್ಟಾರ್ ಅಭಿನಯದ ಸಿನಿಮಾ ಸದ್ಯ ವಿವಾದದಲ್ಲಿ ಸಿಲುಕಿರೋದು ಗೊತ್ತಿರೋ ವಿಚಾರ. ಮೂರು ದಿನಗಳ ಹಿಂದೆಯಷ್ಟೇ ಬಿಡುಗಡೆಯಾದ ಅಂಜನಿಪುತ್ರ ಸಿನಿಮಾದಲ್ಲಿ ವಕೀಲರನ್ನ ಅವಹೇಳನ ಮಾಡಲಾಗಿದೆ ಎಂದು ವಕೀಲರೊಬ್ಬರು ಕೋರ್ಟ್ ಮೆಟ್ಟಿಲೇರಿ ಸಿನಿಮಾ ಪ್ರದರ್ಶನಕ್ಕೆ ಅಡ್ಡಿ ತಂದಿದ್ದರು.
ಅಂಜನಿಪುತ್ರ ಚಿತ್ರವನ್ನ ವಿತರಣೆ ಮಾಡುತ್ತಿರುವ ನಿರ್ಮಾಪಕ ಜಾಕ್ ಮಂಜು ಸಿನಿಮಾ ಯಾವುದೇ ತೊಂದರೆ ಇಲ್ಲದೆ ಪ್ರದರ್ಶನವಾಗಲಿದೆ ಎಂದು ತಿಳಿಸಿದ್ದಾರೆ. ಸುಮಾರು 400ಕ್ಕೂ ಹೆಚ್ಚು ಚಿತ್ರ ಮಂದಿರದಲ್ಲಿ ಅಂಜನಿಪುತ್ರ ಸಿನಿಮಾ ಪ್ರದರ್ಶನವಾಗುತ್ತಿದೆ.
ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿರುವ ಚಿತ್ರಕ್ಕೆ ಸ್ಟೇ ತಂದಿರುವ ಹಿನ್ನಲೆಯಲ್ಲಿ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಚಿತ್ರಮಂದಿರದ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಬೆಂಗಳೂರಿನ ಟೋಲ್ ಗೇಟ್ ಬಳಿ ಇರುವ ಪ್ರಸನ್ನ ಹಾಗೂ ಕೆ ಜಿ ರಸ್ತೆಯಲ್ಲಿರುವ ತ್ರಿವೇಣಿ ಥಿಯೇಟರ್ ಬಳಿ ಕಪ್ಪು ಪಟ್ಟಿ ಧರಿಸಿ ವಕೀಲರ ಈ ನೀತಿಯನ್ನ ವಿರೋಧಿಸಲಿದ್ದಾರೆ.