Don't Miss!
- News Lok Sabha Election: ರಾಜಕೀಯ ಅಖಾಡದಲ್ಲಿ ನಕಲಿ ಅಭ್ಯರ್ಥಿಗಳ ಸೌಂಡ್ ಜೋರು: ಅಖಾಡದಲ್ಲಿ ನಕಲಿ ರಾಹುಲ್ ಗಾಂಧಿ, ಪಿಎಸ್ ಯಡಿಯೂರಪ್ಪ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
8 ದಿನದಲ್ಲೇ ಅಮೇಜಾನ್ಗೆ ಬಂದ ಯುವರತ್ನ: ಅಪ್ಪು ಫ್ಯಾನ್ಸ್ ಬೇಸರ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟಿಸಿರುವ ಯುವರತ್ನ ಸಿನಿಮಾಗೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೊರೊನಾ ಭೀತಿಯ ನಡುವೆಯೂ ರಾಜ್ಯದ ಬಹುತೇಕ ಚಿತ್ರಮಂದಿರಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಾಣ್ತಿದೆ. ಸಿನಿಮಾ ಬಿಡುಗಡೆಯಾಗಿ ಕೇವಲ ಏಂಟು ದಿನಗಳು ಕಳೆದಿದೆ. ಅಷ್ಟರಲ್ಲೇ ಯುವರತ್ನ ಚಿತ್ರವನ್ನು ಅಮೇಜಾನ್ ಪ್ರೈಮ್ ಪ್ರಸಾರ ಮಾಡುವುದಾಗಿ ಪ್ರಕಟಿಸಿದೆ.
ಕನ್ನಡ, ತೆಲುಗು ಜೊತೆಗೆ ತಮಿಳು ಮತ್ತು ಹಿಂದಿ ಭಾಷೆಯಲ್ಲಿ ಯುವರತ್ನ ಚಿತ್ರವನ್ನು ಅಮೇಜಾನ್ ಪ್ರೈಮ್ ಏಪ್ರಿಲ್ 9 ರಂದ ಪ್ರಸಾರ ಮಾಡುತ್ತಿದೆ. ಚಿತ್ರಕ್ಕೆ ಒಳ್ಳೆಯ ಟಾಕ್ ಇದ್ದರೂ ಇಷ್ಟು ಬೇಗ ಒಟಿಟಿಯಲ್ಲಿ ಪ್ರಸಾರ ಮಾಡ್ತಿರುವುದಕ್ಕೆ ಅಪ್ಪು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಮುಂದೆ ಓದಿ...
ಇಷ್ಟು ಬೇಗ ಬೇಡ
ಅಮೇಜಾನ್ ಪ್ರೈಮ್ನಲ್ಲಿ ಯುವರತ್ನ ಪ್ರಸಾರದ ಸುದ್ದಿ ತಿಳಿಯುತ್ತಿದ್ದಂತೆ ಪುನೀತ್ ಅಭಿಮಾನಿಗಳು ನಿರಾಸೆಯಾಗಿದ್ದಾರೆ. ''ರಾಜ್ಯಾದ್ಯಂತ ಒಳ್ಳೆಯ ಪ್ರದರ್ಶನ ಕಾಣ್ತಿದೆ. 50 ಪರ್ಸೆಂಟ್ ಜಾರಿಯಾಗಿದ್ದರೂ ಜನ ಸಿನಿಮಾ ನೋಡ್ತಾರೆ. 50 ದಿನ ಆದ್ಮೇಲೆ ಕೊಡಿ'' ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.
'ಕ್ಲಿಷ್ಟಕರ ಸನ್ನಿವೇಶ'ದ ಒತ್ತಡ: 'ಯುವರತ್ನ' ಸಿನಿಮಾ ಒಟಿಟಿಗೆ, ದಿನಾಂಕ ಪ್ರಕಟ
ಒಂದು ವಾರದಲ್ಲೇ ಅಗತ್ಯ ಏನಿತ್ತು?
'ಸಿನಿಮಾ ರಿಲೀಸ್ ಆಗಿ ಎರಡು ವಾರ ಪೂರ್ಣಗೊಂಡಿಲ್ಲ. ಅಷ್ಟು ಬೇಗ ಒಟಿಟಿಯಲ್ಲಿ ಪ್ರಸಾರ ಮಾಡುವ ಅಗತ್ಯ ಏನಿತ್ತು' ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ಏಪ್ರಿಲ್ 1 ರಂದು ಯುವರತ್ನ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಿತ್ತು.
ನಿಜಕ್ಕೂ ಬೇಸರ
'ಕೋವಿಡ್ ಕಾರಣದಿಂದ ಕ್ಲಿಷ್ಟಕರ ಪರಿಸ್ಥಿತಿಯಲ್ಲಿದ್ದೇವೆ. ಹಾಗಾಗಿ ಯುವರತ್ನ ಚಿತ್ರವನ್ನು ಒಟಿಟಿಯಲ್ಲಿ ಇಷ್ಟು ಬೇಗ ಪ್ರಸಾರ ಮಾಡಲಾಗುತ್ತಿದೆ. ಜನರು ಕೂಡ ಥಿಯೇಟರ್ಗೆ ಬರೋಕೆ ಆಗ್ತಿಲ್ಲ, ಒಟಿಟಿಯಲ್ಲಿ ರಿಲೀಸ್ ಮಾಡಿ ಎಂದು ಮನವಿ ಮಾಡಿದ್ದಾರೆ, ಹಾಗಾಗಿ, ಇಷ್ಟು ಬೇಗ ಒಟಿಟಿಗೆ ಬರಬೇಕಾಯಿತು' ಎಂದು ನಿರ್ದೇಶಕ ಸಂತೋಷ್ ಆನಂದ್ ರಾಮ್ ಸ್ಪಷ್ಟನೆ ನೀಡಿದ್ದಾರೆ. ಆದರೂ ಚಿತ್ರತಂಡ ನಿರ್ಧಾರದಿಂದ ಕೆಲವು ಅಭಿಮಾನಿಗಳು ನಿರಾಸೆಯಾಗಿದ್ದಾರೆ.
ಇದು ಸೂಕ್ತ ನಿರ್ಧಾರವಲ್ಲ
'ಪ್ರೇಕ್ಷಕರು ಚಿತ್ರವನ್ನು ಸಿನಿಮಾ ಹಾಲ್ನಲ್ಲಿ ನೋಡಿಯೇ ಎಂಜಾಯ್ ಮಾಡುತ್ತಿದ್ದಾರೆ. ಹೀಗಿರುವಾಗ ಒಟಿಟಿಯಲ್ಲಿ ಪ್ರಸಾರ ಮಾಡುವುದು ಸೂಕ್ತ ನಿರ್ಧಾರವಲ್ಲ' ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Recommended Video
ವಕೀಲ್ ಸಾಬ್ ರಿಲೀಸ್ ಏಕೆ?
''ಕೋವಿಡ್ ಕ್ಲಿಷ್ಟಕರ ಪರಿಸ್ಥಿತಿ ಎಂದು ಹೇಳುವುದಾದರೇ ತೆಲುಗು ಸಿನಿಮಾ ವಕೀಲ್ ಸಾಬ್ ಚಿತ್ರವನ್ನು ಚಿತ್ರಮಂದಿರದಲ್ಲಿ ಬಿಡುಗಡೆ ಮಾಡುತ್ತಿರುವುದೇಕೆ? ಆ ಚಿತ್ರವನ್ನು ಒಟಿಟಿಗೆ ಕೊಡಬಹುದಿತ್ತು ಅಲ್ಲವೇ. ಈ ಲಾಜಿಕ್ ಯುವರತ್ನ ಚಿತ್ರಕ್ಕೆ ಏಕೆ?'' ಎಂದು ನೆಟ್ಟಿಗನೊಬ್ಬ ಪ್ರಶ್ನಿಸಿದ್ದಾರೆ.