Don't Miss!
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Automobiles ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಗಂಧದ ಗುಡಿ' ಪ್ರಿ-ರಿಲೀಸ್ ಈವೆಂಟ್ ಬರೋ ಗೆಸ್ಟ್ ಯಾರು? ಇಲ್ಲಿದೆ ಕಂಪ್ಲೀಟ್ ಲಿಸ್ಟ್!
'ಗಂಧದ ಗುಡಿ' ಪ್ರಿ-ರಿಲೀಸ್ ಈವೆಂಟ್ಗೆ ದಿನಗಣನೆ ಶುರುವಾಗಿದೆ. ಇನ್ನೊಂದು ವಾರ ಅಷ್ಟೇ ಅದ್ಧೂರಿಯಾಗಿ 'ಗಂಧದ ಗುಡಿ' ಸಿನಿಮಾ ಪ್ರಿ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಅಪ್ಪು ಅಭಿನಯದ ಕೊನೆಯ ಸಿನಿಮಾವನ್ನು ಸಂಭ್ರಮಮಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.
ಪುನೀತ್ ರಾಜ್ಕುಮಾರ್ ಕರಿಯರ್ನ ಸ್ಪೆಷಲ್ ಸಿನಿಮಾ ಆಗಿರುವ ಕಾರಣಕ್ಕೆ ಪ್ರಿ-ರಿಲೀಸ್ ಕಾರ್ಯಕ್ರಮ ಜೋರಾಗಿ ನಡೆಯಲಿದೆ. ಅಭಿಮಾನಿಗಳು ಕೂಡ ಈ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ.
ಅಕ್ಟೋಬರ್ 21ಕ್ಕೆ ಪ್ರಿ-ರಿಲೀಸ್ ಈವೆಂಟ್ ನಡೆಯುತ್ತಿದೆ. ಈಗಾಗಲೇ ದಕ್ಷಿಣ ಭಾರತದ ಚಿತ್ರರಂಗದ ಗಣ್ಯರುಗೆ ಆಹ್ವಾನ ನೀಡಲಾಗಿದೆ. ಈ ಅದ್ಧೂರಿ ಕಾರ್ಯಕ್ರಮಕ್ಕೆ ಆಗಮಿಸಲಿರುವ ಗೆಸ್ಟ್ ಲಿಸ್ಟ್ ಅನ್ನು ಅಭಿಮಾನಿಗಳೇ ರಿಲೀಸ್ ಮಾಡಿದ್ದಾರೆ.
ಕಮಲ್ ಹಾಸನ್ ಸೂರ್ಯ ಫಿಕ್ಸ್
ದಕ್ಷಿಣ ಭಾರತದ ನಾಲ್ಕೂ ಚಿತ್ರರಂಗಕ್ಕೂ 'ಗಂಧದ ಗುಡಿ' ಪ್ರಿ-ರಿಲೀಸ್ ಈವೆಂಟ್ಗೆ ಆಹ್ವಾನ ನೀಡಲಾಗಿದೆ. ಸದ್ಯ ಈ ಕಾರ್ಯಕ್ರಮಕ್ಕೆ ಯಾರು ಬರಬಹುದು? ಅನ್ನೋ ಲಿಸ್ಟ್ ಹೊರಬಿದ್ದಿದೆ. ಅಪ್ಪು ಅಭಿಮಾನಿಗಳು ಅವರೆಲ್ಲರಿಗೂ ಸ್ವಾಗತ ಕೋರಿದ್ದಾರೆ. ಸದ್ಯ ಯುನಿವರ್ಸಲ್ ಸ್ಟಾರ್ ಕಮಲ್ ಹಾಸನ್ ಬರೋದು ಕನ್ಫರ್ಮ್ ಆಗಿದೆ. ಹಾಗೇ ಸೂರ್ಯ ಕೂಡ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಪುನೀತ್ ಫ್ಯಾನ್ಸ್ ಶುಭ ಕೋರಿದ್ದಾರೆ.
ರಾಣಾ-ಪ್ರಭುದೇವ ಆಗಮನ
ಟಾಲಿವುಡ್ ಸ್ಟಾರ್ಗಳೊಂದಿಗೆ ಪವರ್ಸ್ಟಾರ್ಗೆ ಉತ್ತಮ ಬಾಂಧವ್ಯವಿತ್ತು. ಎಲ್ಲರೊಂದಿಗೂ ಸ್ನೇಹ ಭಾವದಿಂದ ಅಪ್ಪುಗಾಗಿ ಟಾಲಿವುಡ್ ಬಲ್ಲಾಳ ದೇವ ರಾಣಾ ದಗ್ಗುಬಾಟಿ ಆಗಮಿಸುತ್ತಿದ್ದಾರೆ. ಹಾಗೇ ಭಾರತದ ಮೈಕಲ್ ಜಾಕ್ಸನ್ ಪ್ರಭುದೇವ ಕೂಡ 'ಗಂಧದ ಗುಡಿ' ಪ್ರಿ-ರಿಲೀಸ್ ಈವೆಂಟ್ನ ಪ್ರಮುಖ ಅತಿಥಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಆಕ್ಟೋಬರ್ 21ರಂದು ವೇದಿಕೆ ಮೇಲೆ ತಾರೆಯರ ಸಮಾಗಮವೇ ಆಗಲಿದೆ.
ಬರ್ತಾರಾ ದರ್ಶನ್ -ಸುದೀಪ್?
ಸ್ಯಾಂಡಲ್ವುಡ್ನ ಇಬ್ಬರು ಸೂಪರ್ಸ್ಟಾರ್ಗಳು ಒಂದೇ ವೇದಿಕೆ ಏರುತ್ತಾರಾ? ಅನ್ನೋದೇ ದೊಡ್ಡ ಕುತೂಹಲ. ದರ್ಶನ್ ಹಾಗೂ ಸುದೀಪ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಳ್ಳದೆ ಹಲವು ವರ್ಷಗಳೇ ಕಳೆದಿವೆ. ಈಗ ಪುನೀತ್ ರಾಜ್ಕುಮಾರ್ಗಾಗಿ ಇಬ್ಬರೂ ಒಂದೇ ವೇದಿಕೆ ಏರುತ್ತಾರಾ? ಅನ್ನೋದು ಯಕ್ಷ ಪ್ರಶ್ನೆಯಾಗಿಯೇ ಉಳಿದಿದೆ. ಆದರೆ, ಅಪ್ಪು ಅಭಿಮಾನಿಗಳು ಕಿಚ್ಚ ಸುದೀಪ್ ಹಾಗೂ ದರ್ಶನ್ ಇಬ್ಬರಿಗೂ ಸ್ವಾಗತವನ್ನು ಕೋರಿದ್ದಾರೆ.
ಯಶ್ ಮುಖ್ಯ ಅತಿಥಿ
ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ ಯಶ್ ಈ ಕಾರ್ಯಕ್ರಮ ಪ್ರಮುಖ ಆಕರ್ಷಣೆ ಎನ್ನಲಾಗುತ್ತಿದೆ. 'ಕೆಜಿಎಫ್ 2' ತನ್ನದೇ ಅಭಿಮಾನಿ ಬಳಗವನ್ನು ಹೊಂದಿರೋ ಯಶ್ ಕೂಡ ಗಣ್ಯರೊಂದಿಗೆ ವೇದಿಕೆ ಹಂಚಿಕೊಳ್ಳಿದ್ದಾರೆ. ತಮ್ಮ ಮುಂದಿನ ಸಿನಿಮಾದಿಂದ ಬಿಡುವು ಮಾಡಿಕೊಂಡು 'ಗಂಧದ ಗುಡಿ' ಪ್ರಿ-ರಿಲೀಸ್ ಈವೆಂಟ್ಗೆ ಅತಿಥಿಯಾಗಿ ಆಗಮಿಸುತ್ತಿದ್ದಾರೆ ಎನ್ನುತ್ತಿವೆ ಮೂಲಗಳು.
ಸ್ಯಾಂಡಲ್ವುಡ್ ಸ್ಟಾರ್ ಯಾರು?
ಇತ್ತ ಕನ್ನಡ ಚಿತ್ರರಂಗದಿಂದ ಡಾಲಿ ಧನಂಜಯ್, ಡಾರ್ಲಿಂಗ್ ಕೃಷ್ಣ, ಸಾಧು ಕೋಕಿಲಾ, ಧ್ರುವಾ ಸರ್ಜಾ ಸೇರಿದಂತೆ ಗಣ್ಯಾತೀ ಗಣ್ಯರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಲಕ್ಷಾಂತರ ಅಭಿಮಾನಿಗಳು ಸೇರುತ್ತಿರುವ ಹಿನ್ನೆಲೆಯಲ್ಲಿ ದೊಡ್ಡ ತಾರಾಬಳಗವೇ ಸೇರಲಿದ್ದು, ಎಲ್ಲರಿಗೂ ಅಪ್ಪು ಫ್ಯಾನ್ಸ್ 'ಪುನೀತ್ ಪರ್ವ' ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.