Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫೋಟೋ ವೈರಲ್: ದಾಂಡೇಲಿ ಹಳ್ಳಿಯಲ್ಲಿ ಭೋಜನ ಸವಿದ ಪುನೀತ್ ಸರಳತೆಗೆ ಅಭಿಮಾನಿಗಳು ಫಿದಾ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟನಾಗಿ ಗುರುತಿಸಿಕೊಂಡರೂ ಸರಳತೆಯನ್ನು ಮರೆತಿಲ್ಲ. ಪವರ್ ಸ್ಟಾರ್ ಸರಳತೆಗೆ ಅಭಿಮಾನಿಗಳು ಸಹ ಫಿದಾ ಆಗಿದ್ದಾರೆ. ಇತ್ತೀಚಿಗೆ ಚಿತ್ರೀಕರಣದ ಸಮಯದಲ್ಲಿ ಅಭಿಮಾನಿಯ ಮನೆಯಲ್ಲಿ ಪುನೀತ್ ಭೋಜನ ಸವಿಯುತ್ತಿರುವ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಮನೆಯ ಅಂಗಳದಲ್ಲಿ ಬಾಳೆ ಎಲೆ ಊಟ ಮಾಡುತ್ತಿರುವ ಫೋಟೋಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹೌದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾದ ಚಿತ್ರೀಕರಣ ದಾಂಡೇಲಿಯಲ್ಲಿ ನಡೆದಿತ್ತು. ದಾಂಡೇಲಿಯ ಗುಡ್ಡಗಾಡು ಪ್ರದೇಶದಲ್ಲಿ ಚಿತ್ರೀಕರಣ ಮಾಡಿದ್ದ ಸಿನಿಮಾತಂಡ ಬಳಿಕ ಅಲ್ಲೇ ಅಭಿಮಾನಿಯೊಬ್ಬರ ಮನೆಯಲ್ಲಿ ಊಟ ಸವಿದಿದ್ದಾರೆ.
ಗಂಗಾವತಿ ಸರ್ಕಾರಿ ಶಾಲೆ ಅಭಿವೃದ್ಧಿಗೆ ಆರ್ಥಿಕ ನೆರವು ನೀಡಿದ ಪುನೀತ್ ರಾಜ್ ಕುಮಾರ್
ಮನೆಯ ಅಂಗಳದಲ್ಲಿ ಕುಳಿತು ಪುನೀತ್ ಮತ್ತು ತಂಡ ಊಟ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಾಮಾನ್ಯ ವ್ಯಕ್ತಿಯಂತೆ ಎಲ್ಲರ ಜೊತೆ ಕುಳಿತು ಊಟ ಮಾಡುತ್ತಿರುವ ಪುನೀತ್ ಸರಳತೆಯನ್ನು ಅಭಿಮಾನಿಗಳು ಹಾಡಿಹೊಗಳುತ್ತಿದ್ದಾರೆ.
ಅಂದಹಾಗೆ ಪುನೀತ್ ಸದ್ಯ ಯುವರತ್ನ ಸಿನಿಮಾದ ಚಿತ್ರೀಕರಣ ಮುಗಿಸಿ ಜೇಮ್ಸ್ ಸಿನಿಮಾದಲ್ಲಿ ನಿರತರಾಗಿದ್ದಾರೆ. ಜೇಮ್ಸ್ ಸಿನಿಮಾ ಚಿತ್ರೀಕರಣಕ್ಕಾಗಿ ಪುನೀತ್ ಸುಮಾರು 15 ದಿನಗಳ ಕಾಲ ಉತ್ತರ ಕರ್ನಾಟಕದಲ್ಲಿ ಬೀಡುಬಿಟ್ಟಿದ್ದರು. ಪುನೀತ್ ನೋಡಲು ಅಭಿಮಾನಿಗಳ ದಂಡೆ ಹರಿದು ಬರುತ್ತಿತ್ತು.
Recommended Video
ಅಭಿಮಾನಿಗಳನ್ನು ಪ್ರೀತಿಯಿಂದ ಮಾತನಾಡಿಸಿ, ಸೆಲ್ಫಿ ಕ್ಲಿಕ್ಕಿಸಿಕೊಂಡು ಅಭಿಮಾನಿಗಳ ಮೊಗದಲ್ಲಿ ಸಂತಸ ಮೂಡಿಸುತ್ತಿದ್ದರು. ಚಿತ್ರೀಕರಣದ ನಡುವೆಯೂ ಪುನೀತ್ ಉತ್ತರ ಕರ್ನಾಟಕದ ಕೆಲವು ಪ್ರಸಿದ್ಧ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.