Don't Miss!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Technology AI Camera: ಎಐ ಕ್ಯಾಮೆರಾ ಆಯ್ಕೆ ಇರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳಿವು! ಬೆಲೆ ಎಷ್ಟು ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
1 ರೂಪಾಯಿ ತೆಗೆದುಕೊಳ್ಳದೆ 'BMTC'ಗೆ ರಾಯಬಾರಿಯಾದ ಪುನೀತ್
Recommended Video
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಯಾವುದೇ ದುಡ್ಡು ತೆಗೆದುಕೊಳ್ಳದೆ ನಂದಿನಿ ಹಾಲಿಗೆ ರಾಯಬಾರಿಯಾಗಿದ್ದರು. ಇದೀಗ ರಾಜ್ಯ ಸರ್ಕಾರದ ಮತ್ತೊಂದು ಯೋಜನೆಗೆ ಹಣ ಪಡೆಯದೆ ಪುನೀತ್ ಬ್ರಾಂಡ್ ಅಂಬಾಸಿಟರ್ ಆಗಿದ್ದಾರೆ.
ಬಿಎಂಟಿಸಿ (Bangalore Metropolitan Transport Corporation) ಸಂಸ್ಥೆಯ ಹೊಸ ರಾಯಬಾರಿಯಾಗಿ ಪುನೀತ್ ರಾಜ್ ಕುಮಾರ್ ಆಯ್ಕೆ ಆಗಿದ್ದಾರೆ. ಬಿಎಂಟಿಸಿ ಸಂಸ್ಥೆ ಪುನೀತ್ ರನ್ನು ಸಂಪರ್ಕ ಮಾಡಿದ್ದು, ಖುಷಿಯಿಂದ ಒಪ್ಪಿಕೊಂಡಿದ್ದಾರೆ. ಅಲ್ಲದೆ, ಇದಕ್ಕೆ ಅವರು ಯಾವುದೇ ಹಣವನ್ನು ತೆಗೆದುಕೊಂಡಿಲ್ಲ.
ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ಪುನೀತ್ ರಾಜ್ ಕುಮಾರ್ ವರ್ಕೌಟ್ ವಿಡಿಯೋ
ಈ ವಿಷಯವನ್ನು ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪುನೀತ್ ರನ್ನು ನಂದೀಶ್ ರೆಡ್ಡಿ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ ಶಿಖಾ, ಬಿಎಂಟಿಸಿ ಭದ್ರತೆ ಮತ್ತು ಜಾಗೃತಿ ನಿರ್ದೇಶಕ ಅನುಪಮ ಅಗರ್ ವಾಲ್ ಭೇಟಿ ಮಾಡಿದ್ದಾರೆ. ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ದೃಷ್ಟಿಯಿಂದ ಪುನೀತ್ ಈ ಪ್ರಾಜೆಕ್ಟ್ ಗೆ ಓಕೆ ಹೇಳಿದ್ದಾರೆ.
ಅಂದಹಾಗೆ, ವರನಟ ಡಾ ರಾಜ್ ಕುಮಾರ್ ನಂದಿನಿ ಹಾಲಿಗೆ ಯಾವುದೇ ಹಣ ಪಡೆಯದೆ ರಾಯಬಾರಿ ಆಗಿದ್ದರು. ಅದನ್ನೇ ಮುಂದುವರೆಸಿದ ಪುನೀತ್ ನಂದಿನಿ ಪ್ರಾಜೆಕ್ಟ್ ಗೆ ಹಣ ಪಡೆಯಲಿಲ್ಲ. ಇದೀಗ ಬಿಎಂಟಿಸಿ ಯಿಂದ ಕೂಡ ದುಡ್ಡು ಪಡೆದಿಲ್ಲ.
ಕನ್ನಡ ಇಂಡಸ್ಟ್ರಿಯಲ್ಲಿ ಈ ವರ್ಷ ಸೌಂಡ್ ಮಾಡಿದ ಟಾಪ್ ಡೈಲಾಗ್ ಯಾವುದು?
ಉಳಿದಂತೆ, ನಟ ಪುನೀತ್ ರಾಜ್ ಕುಮಾರ್ ಸದ್ಯ 'ಯುವರತ್ನ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದ 2020ಕ್ಕೆ ಬಿಡುಗಡೆ ಆಗಲಿದೆ.