ದಿವಂಗತ ಪುತ್ರನ ಫೋಟೋ ಜೊತೆ 'ಯುವರತ್ನ' ಚಿತ್ರ ವೀಕ್ಷಿಸಿದ ಕುಟುಂಬ ನೋಡಿ ಮನಸ್ಸು ಭಾರವಾಯಿತು: ಪುನೀತ್

ಮೃತಪಟ್ಟ ಮಗನ ಫೊಟೋ ಇಟ್ಟುಕೊಂಡು ಪೋಷಕರು 'ಯುವರತ್ನ' ಸಿನಿಮಾ ನೋಡಿದ ಭಾವುಕ ಘಟನೆ ಬಗ್ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ದೃಶ್ಯ ನೋಡಿ ಮನಸ್ಸು ತುಂಬಾ ಭಾರವಾಯಿತು ಎಂದು ಅಪ್ಪು ಟ್ವೀಟ್ ಮಾಡಿದ್ದಾರೆ.

Recommended Video

ಮನಸ್ಸು ಭಾರವಾಯಿತು ಎಂದು ಟ್ವೀಟ್ ಮಾಡಿದ ಅಪ್ಪು | Puneeth Rajumar | Filmibeat Kannada

ಮೈಸೂರಿನ ಡಿ ಆರ್ ಸಿ‌ ಮಲ್ಟಿಫ್ಲೆಕ್ಸ್‌ನಲ್ಲಿ ಪೋಷಕರು ಮೃತ ಮಗನ ಭಾವಚಿತ್ರದೊಂದಿಗೆ ಸಿನಿಮಾ ನೋಡಿದ ಭಾವುಕ ಘಟನೆ ನಡೆದಿದೆ. ಮೈಸೂರಿನ ನಿವಾಸಿ‌ ಮುರಳಿಧರ್ ಎಂಬುವವರ ಪುತ್ರ ಹರಿಕೃಷ್ಣನ್ ಕಳೆದ ಮೂರು ತಿಂಗಳ ಹಿಂದಷ್ಟೇ ಈಜಲು ಹೋಗಿ ನೀರಲ್ಲಿ ಮುಳುಗಿ ಸಾವನಪ್ಪಿದ್ದ.

ಪುಟ್ಟ ಹುಡುಗ ಹರಿಕೃಷ್ಣನ್ ಪುನೀತ್ ರಾಜ್ ಕುಮಾರ್ ಅಪ್ಪಟ ಅಭಿಮಾನಿ. ಅಷ್ಟೇ ಅಲ್ಲದೆ, ಆತ ಯುವರತ್ನ ಸಿನಿಮಾ ನೋಡಬೇಕೆಂದು ಆಸೆ ಪಟ್ಟಿದ್ದ. ಈ ಕಾರಣದಿಂದ, ಮಗನ ಆಸೆಯಂತೆ ಪೋಷಕರು ಆತನ ಫೋಟೋದೊಂದಿಗೆ 'ಯುವರತ್ನ' ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಜತೆಗೆ ‌ತಮ್ಮಿಂದ ದೂರವಾಗಿರೋ ಮಗನಿಗೂ ಒಂದು ಟಿಕೆಟ್ ತೆಗೆದುಕೊಂಡು, ಅಪ್ಪ-ಅಮ್ಮ, ಹಿರಿಯ ಮಗನ ಜೊತೆ ಸಿನಿಮಾ ವೀಕ್ಷಣೆ ಮಾಡಿದ್ದಾರೆ.

Puneeth Rajkumar reaction to Parents watched Yuvarathnaa movie with demised son photo

ಈ ಬಗ್ಗೆ ಪುನೀತ್ ಟ್ವೀಟ್ ಮಾಡಿದ್ದು, 'ಮೈಸೂರಿನ ಮುರಳಿಧರ್ ಹಾಗು ಕುಟುಂಬದವರು ಅವರ ದಿವಂಗತ ಪುತ್ರ ಹರಿಕೃಷ್ಣನ್ ಫೋಟೋ ಜೊತೆಗೆ ಯುವರತ್ನ ಸಿನಿಮಾ ನೋಡಿರುವ ದೃಶ್ಯಗಳನ್ನು ನೋಡಿ ನನ್ನ ಮನಸ್ಸು ಭಾರವಾಯಿತು. ಬಾಲಕ ಹರಿಕೃಷ್ಣನ್ ಆತ್ಮಕ್ಕೆ ಶಾಂತಿ ಸಿಗಲಿ' ಎಂದಿದ್ದಾರೆ.

Puneeth Rajkumar reaction to Parents watched Yuvarathnaa movie with demised son photo

ಯುವರತ್ನ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಫ್ಯಾಮಿಲಿ ಆಡಿಯನ್ಸ್ ಸಿನಿಮಾ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಸಿನಿಮಾ ಸಕ್ಸಸ್ ಆಗುತ್ತಿದ್ದಂತೆ ಪವರ್ ಸ್ಟಾರ್ ಯುವರತ್ನ ತಂಡದ ಜೊತೆಗೆ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಜೊತೆಗೆ ನವರಸನಾಯಕ ಜಗ್ಗೇಶ್ ಕೂಡ ಯುವರತ್ನ ತಂಡಕ್ಕೆ ಸಾಥ್ ನೀಡಿದ್ದಾರೆ.

More from Filmibeat

English summary
Puneeth Rajkumar reaction to Parents watched Yuvarathnaa movie with demised son photo in Theatre.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X