Don't Miss!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Technology AI Camera: ಎಐ ಕ್ಯಾಮೆರಾ ಆಯ್ಕೆ ಇರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳಿವು! ಬೆಲೆ ಎಷ್ಟು ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣನ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಪುನೀತ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೆರೆ ಮೇಲೆ ಸಿಕ್ಕಾಪಟ್ಟೆ ಪವರ್ ಫುಲ್ ಆಗಿರ್ತಾರೆ. ಆದ್ರೆ, ನಿಜ ಜೀವನದಲ್ಲಿ ತುಂಬ ಸರಳ ಮತ್ತು ಸಜ್ಜನಿಕೆಯ ವ್ಯಕ್ತಿತ್ವ. ಇದು ಎಲ್ಲರಿಗೂ ಗೊತ್ತಿರುವ ಸಂಗತಿ.
ದೊಡ್ಡವರಿಗೆ ಗೌರವ ನೀಡುವುದು, ಸಣ್ಣವರಿಗೆ ಪ್ರೋತ್ಸಾಹ ನೀಡುವುದು ಪುನೀತ್ ರಾಜ್ ಕುಮಾರ್ ಅವರ ದೊಡ್ಡ ಗುಣ. ಸಹೋದರರಾದ ಶಿವಣ್ಣ, ರಾಘಣ್ಣ ಅವರಿಗೂ ಅಷ್ಟೇ ಗೌರವ ನೀಡ್ತಾರೆ ಪುನೀತ್. ಇದು ಪ್ರತಿಯೊಂದು ಸಲವೂ ಸಾಬೀತಾಗಿದೆ.
ಆದ್ರೆ, ಇಂದು ನಡೆದ ಸಿನಿಮಾ ಮುಹೂರ್ತ ಕಾರ್ಯಕ್ರಮವೊಂದರಲ್ಲಿ ಪುನೀತ್ ಮತ್ತು ಶಿವಣ್ಣ ಜೋಡಿ ವಿಶೇಷವಾಗಿ ಗಮನ ಸೆಳೆಯಿತು. ಪುನೀತ್ ರಾಜ್ ಕುಮಾರ್ ಬ್ಯಾನರ್ ನಲ್ಲಿ ತಯಾರಾಗುತ್ತಿರುವ ಚೊಚ್ಚಲ ಸಿನಿಮಾ 'ಕವಲುದಾರಿ' ಇಂದು ಸೆಟ್ಟೇರಿತು.
ಅಪ್ಪು ನಿರ್ಮಾಣದ ಮೊದಲ ಸಿನಿಮಾಗೆ ಕ್ಲಾಪ್ ಮಾಡಿದ ಶಿವಣ್ಣ
ಈ ಕಾರ್ಯಕ್ರಮಕ್ಕೆ ನಟ ಶಿವರಾಜ್ ಕುಮಾರ್ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮಕ್ಕೆ ಶಿವಣ್ಣ ಬರುತ್ತಿದ್ದಂತೆ, ಶಿವಣ್ಣನ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು ಪುನೀತ್ ರಾಜ್ ಕುಮಾರ್. ಇದು ನೋಡುಗರಿಗೆ ಅದ್ಭುತ ಕ್ಷಣ ಎನಿಸಿತು.
'ಕವಲುದಾರಿ' ಚಿತ್ರದ ಮುಹೂರ್ತ ಕಾರ್ಯಕ್ರಮಕ್ಕೆ ನಟ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್, ರಕ್ಷಿತ್ ಶೆಟ್ಟಿ, ಎಸ್.ಕೆ ಭಗವಾನ್, ರಾಕ್ ಲೈನ್ ವೆಂಕಟೇಶ್, ಅನಂತ್ ನಾಗ್ ಸೇರಿದಂತೆ ಹಲವರು ಕಲಾವಿದರು ಭಾಗಿಯಾಗಿದ್ದರು.