Just In
Don't Miss!
- News
ದೆಹಲಿ ಆವರಿಸಿದ ದಟ್ಟ ಮಂಜು; 50ಕ್ಕೂ ಹೆಚ್ಚು ವಿಮಾನಗಳು ವಿಳಂಬ
- Education
NIA Recruitment 2021: 15 ಡೆಪ್ಯುರಿಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಬೇಡಿಕೆ ಹೆಚ್ಚಿದಂತೆ ನಿಸ್ಸಾನ್ ಮ್ಯಾಗ್ನೈಟ್ ಕಾರಿನ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳ
- Finance
ತನ್ನ ಗೌಪ್ಯತೆ ನೀತಿ ಮತ್ತು ಸೇವಾ ನಿಯಮಗಳ ನವೀಕರಣವನ್ನು ಮುಂದೂಡಿದ ವಾಟ್ಸಾಪ್
- Sports
ಐಪಿಎಲ್ ಹರಾಜಿಗೆ ಅರ್ಜುನ್ ತೆಂಡೂಲ್ಕರ್ ಅರ್ಹ, ಎಂಐ ಆರಿಸುತ್ತಾ?
- Lifestyle
ಜ. 16ರಿಂದ ಭಾರತದಲ್ಲಿ ಕೋವಿಡ್ 19 ಲಸಿಕೆ: ಇದರ ಕುರಿತ ಪ್ರಮುಖ 10 ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶಿವಣ್ಣನ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಪುನೀತ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೆರೆ ಮೇಲೆ ಸಿಕ್ಕಾಪಟ್ಟೆ ಪವರ್ ಫುಲ್ ಆಗಿರ್ತಾರೆ. ಆದ್ರೆ, ನಿಜ ಜೀವನದಲ್ಲಿ ತುಂಬ ಸರಳ ಮತ್ತು ಸಜ್ಜನಿಕೆಯ ವ್ಯಕ್ತಿತ್ವ. ಇದು ಎಲ್ಲರಿಗೂ ಗೊತ್ತಿರುವ ಸಂಗತಿ.
ದೊಡ್ಡವರಿಗೆ ಗೌರವ ನೀಡುವುದು, ಸಣ್ಣವರಿಗೆ ಪ್ರೋತ್ಸಾಹ ನೀಡುವುದು ಪುನೀತ್ ರಾಜ್ ಕುಮಾರ್ ಅವರ ದೊಡ್ಡ ಗುಣ. ಸಹೋದರರಾದ ಶಿವಣ್ಣ, ರಾಘಣ್ಣ ಅವರಿಗೂ ಅಷ್ಟೇ ಗೌರವ ನೀಡ್ತಾರೆ ಪುನೀತ್. ಇದು ಪ್ರತಿಯೊಂದು ಸಲವೂ ಸಾಬೀತಾಗಿದೆ.
ಆದ್ರೆ, ಇಂದು ನಡೆದ ಸಿನಿಮಾ ಮುಹೂರ್ತ ಕಾರ್ಯಕ್ರಮವೊಂದರಲ್ಲಿ ಪುನೀತ್ ಮತ್ತು ಶಿವಣ್ಣ ಜೋಡಿ ವಿಶೇಷವಾಗಿ ಗಮನ ಸೆಳೆಯಿತು. ಪುನೀತ್ ರಾಜ್ ಕುಮಾರ್ ಬ್ಯಾನರ್ ನಲ್ಲಿ ತಯಾರಾಗುತ್ತಿರುವ ಚೊಚ್ಚಲ ಸಿನಿಮಾ 'ಕವಲುದಾರಿ' ಇಂದು ಸೆಟ್ಟೇರಿತು.
ಅಪ್ಪು ನಿರ್ಮಾಣದ ಮೊದಲ ಸಿನಿಮಾಗೆ ಕ್ಲಾಪ್ ಮಾಡಿದ ಶಿವಣ್ಣ
ಈ ಕಾರ್ಯಕ್ರಮಕ್ಕೆ ನಟ ಶಿವರಾಜ್ ಕುಮಾರ್ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮಕ್ಕೆ ಶಿವಣ್ಣ ಬರುತ್ತಿದ್ದಂತೆ, ಶಿವಣ್ಣನ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು ಪುನೀತ್ ರಾಜ್ ಕುಮಾರ್. ಇದು ನೋಡುಗರಿಗೆ ಅದ್ಭುತ ಕ್ಷಣ ಎನಿಸಿತು.
'ಕವಲುದಾರಿ' ಚಿತ್ರದ ಮುಹೂರ್ತ ಕಾರ್ಯಕ್ರಮಕ್ಕೆ ನಟ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್, ರಕ್ಷಿತ್ ಶೆಟ್ಟಿ, ಎಸ್.ಕೆ ಭಗವಾನ್, ರಾಕ್ ಲೈನ್ ವೆಂಕಟೇಶ್, ಅನಂತ್ ನಾಗ್ ಸೇರಿದಂತೆ ಹಲವರು ಕಲಾವಿದರು ಭಾಗಿಯಾಗಿದ್ದರು.