Don't Miss!
- News Lok Sabha Election 2024: ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕನ್ನಡ ಮಾಣಿಕ್ಯ ಕಿಚ್ಚ': ಸುದೀಪ್ ಬಯೋಗ್ರಫಿ ಬಿಡುಗಡೆ ಮಾಡಿದ ಅಪ್ಪು
ಕಿಚ್ಚ ಸುದೀಪ್ ಅವರ ಬಯೋಗ್ರಫಿ ಪುಸ್ತಕವನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು (ಸೆಪ್ಟೆಂಬರ್ 2) ಲೋಕಾರ್ಪಣೆ ಮಾಡಿದ್ದಾರೆ. ಕಿಚ್ಚನ ಹುಟ್ಟುಹಬ್ಬದ ಪ್ರಯುಕ್ತ ಈ ಪುಸ್ತಕ ಬಿಡುಗಡೆ ಮಾಡುವುದಾಗಿ ಸಿನಿ ಪತ್ರಕರ್ತ ಶರಣು ಹುಲ್ಲೂರು ತಿಳಿಸಿದ್ದರು. ಅದರಂತೆಯೇ ಇಂದು ಪುನೀತ್ ನಿವಾಸದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದಿದೆ.
Recommended Video
ಈ ವೇಳೆ ನಟ ಪುನೀತ್ ರಾಜ್ ಕುಮಾರ್, ಪುಸ್ತಕ ರಚಿಸಿರುವ ಪತ್ರಕರ್ತ ಶರಣು ಹುಲ್ಲೂರು, ನಿರ್ಮಾಪಕ ಜಾಕ್ ಮಂಜು ಹಾಗೂ ಡಾ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಭಾಗಿಯಾಗಿದ್ದರು. ಮುಂದೆ ಓದಿ...
ಸುದೀಪ್ ಬಯೋಗ್ರಫಿ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ ಪುನೀತ್ ರಾಜ್ ಕುಮಾರ್
ಪುಸ್ತಕದ ಹೆಸರೇನು?
ಸುದೀಪ್ ಅವರ ಬಯೋಗ್ರಫಿಗೆ ''ಕನ್ನಡದ ಮಾಣಿಕ್ಯ ಕಿಚ್ಚ'' ಎಂದು ಹೆಸರಿಡಲಾಗಿದೆ. ಈ ಪುಸ್ತಕದ ಹೆಸರು ಏನಿರಬಹುದು ಎಂದು ಕಳೆದ ಮೂರ್ನಾಲ್ಕು ದಿನದಿಂದ ಕಿಚ್ಚನ ಅಭಿಮಾನಿಗಳ ತಲೆಯಲ್ಲಿ ಹುಳ ಬಿಟ್ಟಂತಾಗಿತ್ತು. ಅಂತಿಮವಾಗಿ ಹೆಸರು ಬಹಿರಂಗವಾಗಿದೆ.
ಪುನೀತ್ ರಾಜ್ ಕುಮಾರ್ ಏನಂದ್ರು?
ಕನ್ನಡ ಮಾಣಿಕ್ಯ ಕಿಚ್ಚ ಪುಸ್ತಕ ಬಿಡುಗಡೆ ಮಾಡಿದ ಪುನೀತ್ ರಾಜ್ ಕುಮಾರ್ ''ಸುದೀಪ್ ಅವರ ಕುರಿತು ಸಾಕಷ್ಟು ಮಾಹಿತಿ ಇದರಲ್ಲಿದೆ, ಅವರ ಬಾಲ್ಯದ ಫೋಟೋಗಳು, ಸಿನಿಮಾಗಳ ಬಗ್ಗೆ ಮಾಹಿತಿ, ಅವರ ತಂದೆಯ ಬಗ್ಗೆ ವಿವರ ಇದೆ. ಈ ಪುಸ್ತಕ ಅವರ ಅಭಿಮಾನಿಗಳಿಗೆ ಹಾಗೂ ಸಿನಿ ಅಭಿಮಾನಿಗಳಿಗೆ ಖುಷಿ ಕೊಡುತ್ತೆ. ಒಳ್ಳೆಯದಾಗಲಿ...'' ಎಂದು ಶುಭ ಕೋರಿದರು.
ಅಪರೂಪದ ಫೋಟೋ ಮತ್ತು ಸಂಗತಿ
ಶರಣು ಹುಲ್ಲೂರು ರಚಿಸಿರುವ ಈ ಪುಸ್ತಕದಲ್ಲಿ ಸುದೀಪ್ ಅವರ ಬಗ್ಗೆ ಗೊತ್ತಿಲ್ಲದ ಹಲವು ವಿಚಾರಗಳು ಹಾಗೂ ಇದಕ್ಕೂ ಮುಂಚೆ ಯಾರೂ ನೋಡಿರದ ಹಲವು ಅಪರೂಪದ ಫೋಟೋಗಳಿವೆ. ಸುದೀಪ್ ಅವರ ಸಿನಿಮಾ ಜರ್ನಿ, ಅವರ ಏಳು-ಬೀಳು ಮತ್ತು ವೈಯಕ್ತಿಕ ಜೀವನದ ಸಂಗತಿಗಳನ್ನು ಸಹ ಪುಸ್ತಕ ಒಳಗೊಂಡಿದೆ.
ಲೇಖಕರ ಬಗ್ಗೆ....
ಹಲವು ವರ್ಷಗಳಿಂದ ಪತ್ರಿಕೋದ್ಯಮದಲ್ಲಿರುವ ಶರಣು ಹುಲ್ಲೂರು ಹಲವು ಪುಸ್ತಕಗಳನ್ನು ಬರೆದಿದ್ದಾರೆ. ರೆಬೆಲ್ ಸ್ಟಾರ್ ಕುರಿತು 'ಅಂಬರೀಶ್' ಎಂಬ ಪುಸ್ತಕ ಬರೆದಿದ್ದರು. 'ಕೊರೋನಾ' ಹೆಸರಿನಲ್ಲು ಸಹ ಪುಸ್ತಕ ಬರೆದಿದ್ದರು. 'ಬದುಕು ಹ್ಯಾಕ್ ಆಗಿದೆ', 'ಸಿನಿ ಸಾಂಗತ್ಯ', 'ಜುಗಲ್ ಬಂದಿ ಕವಿತೆಗಳು' ಎಂಬ ಪುಸ್ತಕಗಳನ್ನು ಸಹ ಹುಲ್ಲೂರು ರಚಿಸಿದ್ದಾರೆ.