Don't Miss!
- News Everest Fish Curry Masala: ಎವರೆಸ್ಟ್ ಫಿಶ್ ಕರಿ ಮಸಾಲೆ ಬ್ಯಾನ್: ಕಾರಣ ಇಲ್ಲಿದೆ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ ನಿಜ ವ್ಯಕ್ತಿತ್ವ ಏನು ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ
Recommended Video
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತುಂಬಾ ಸರಳ ವ್ಯಕ್ತಿ. ಸಿನಿಮಾದಲ್ಲಿ ಎಷ್ಟು ಶ್ರೀಮಂತ ಪಾತ್ರಗಳನ್ನ ಮಾಡಿದ್ರು, ತೆರೆ ಹಿಂದೆ ಅವರು ಸಿಂಪಲ್. ಇದು ಹಲವು ಭಾರಿ ಸಾಬೀತಾಗಿದೆ. ಇದಕ್ಕೆ ತಾಜಾ ಉದಾಹರಣೆ 'ನಟಸಾರ್ವಭೌಮ' ಚಿತ್ರದ ಶೂಟಿಂಗ್ ಸೆಟ್ ನಲ್ಲಿ ಸಿಕ್ಕಿದೆ.
'ನಟಸಾರ್ವಭೌಮ' ಸಿನಿಮಾದ ಹಾಡೊಂದರ ಚಿತ್ರೀಕರಣದ ವೇಳೆ ನದಿಯಲ್ಲಿ ಶೂಟಿಂಗ್ ನಡೆದಿದೆ. ಈ ವೇಳೆ ದೋಣೆಯಲ್ಲಿ ಕೂತು ನದಿಯಲ್ಲಿ ಒಂದು ರೌಂಡ್ ಹೊಡೆದ ಅಪ್ಪು ಖುದ್ದು ತಾವೇ ದೋಣಿ ಮುನ್ನಡೆಸಿದ್ದಾರೆ.
ಶಿವಣ್ಣನ ನಂತರ 'ರಾಜಣ್ಣನ ಮಗ'ನಿಗೆ ಸಾಥ್ ನೀಡಿದ ಪುನೀತ್
ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪುನೀತ್ ಜೊತೆ ದೋಣಿಯಲ್ಲಿ ಯಕ್ಷಗಾನ ಗೆಟಪ್ ನಲ್ಲಿರುವ ಕಲಾವಿದರು ಕೂಡ ಕಾಣಿಸಿಕೊಂಡಿದ್ದಾರೆ.
ಪುನೀತ್ ಕಡೆಯಿಂದ ಬಂದ ಸುದ್ದಿ ಕೇಳಿ ದೀಪಾವಳಿ ಆಚರಿಸ್ತಾರಂತೆ ಸುದೀಪ್
ಪವನ್ ಒಡೆಯರ್ ನಿರ್ದೇಶನದ 'ನಟಸಾರ್ವಭೌಮ' ಸಿನಿಮಾದ ಚಿತ್ರೀಕರಣ ಈಗಾಗಲೇ ಮುಕ್ತಾಯವಾಗಿದೆ. ರಾಕ್ ಲೈನ್ ವೆಂಕಟೇಶ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದು, ರಚಿತಾ ರಾಮ್ ಮತ್ತು ಅನುಪಮ ಪರಮೇಶ್ವರನ್ ನಾಯಕಿಯರಾಗಿ ಅಭಿನಯಿಸಿದ್ದಾರೆ.
ಡಿಸೆಂಬರ್ ತಿಂಗಳಲ್ಲಿ ಟೀಸರ್ ಬಿಡುಗಡೆಯಾಗುವ ಸಾಧ್ಯತೆ ಇದ್ದು, ಜನವರಿಯಲ್ಲಿ ಸಿನಿಮಾ ತೆರೆಗೆ ಬರಲಿದೆ ಎನ್ನಲಾಗಿದೆ.