Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನವೆಂಬರ್ಗೆ ಆಗಮಿಸಲಿದ್ದಾರೆ 'ಗಂಧದ ಗುಡಿ'ಯ 'ರಾಜಕುಮಾರ'
ಪುನೀತ್ ರಾಜ್ಕುಮಾರ್ ಅಗಲಿಕೆಯಿಂದ ಕನ್ನಡ ಚಿತ್ರರಂಗ ಇನ್ನೂ ಚೇತರಿಸಿಕೊಂಡಿಲ್ಲ. ಅಪ್ಪು ಅಭಿಮಾನಿಗಳ ಮನದಲ್ಲಿ ಇನ್ನೂ ಸೂತಕದ ಛಾಯೆ ಹಸಿಯಾಗಿದೆ.
ಅಪ್ಪು ಅಗಲಿಕೆಯ ಬಳಿಕ ಅವರ ಸಿನಿಮಾಗಳ ಮೂಲಕ ಅವರನ್ನು ಮತ್ತೆ ಕಣ್ತುಂಬಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಪುನೀತ್ ರಾಜ್ಕುಮಾರ್ ಅಗಲಿಕೆಯ ಬಳಿಕ ಬಿಡುಗಡೆ ಆದ 'ಜೇಮ್ಸ್' ಸಿನಿಮಾವನ್ನು ಲಕ್ಷಾಂತರ ಮಂದಿ ವೀಕ್ಷಿಸಿದ್ದು ಇದಕ್ಕೆ ಉದಾಹರಣೆ.
ಪುನೀತ್ ಕೊನೆಯ ಸಿನಿಮಾ 'ಜೇಮ್ಸ್' ನಿರ್ಮಾಪಕ ಆಸ್ಪತ್ರೆಗೆ ದಾಖಲು: ಹೇಗಿದೆ ಸ್ಥಿತಿ?
'ಜೇಮ್ಸ್' ಸಿನಿಮಾದ ಬಳಿಕ ಮತ್ತೊಮ್ಮೆ ಪುನೀತ್ ರಾಜ್ಕುಮಾರ್ ಅವರನ್ನು ತೆರೆಯ ಮೇಲೆ ಯಾವಾಗ ನೋಡುವೆಯೋ ಎಂದು ಕಾದಿದ್ದ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಇದೀಗ ಹೊರಬಿದ್ದಿದೆ.
ಪುನೀತ್ ರಾಜ್ಕುಮಾರ್ ನಿರ್ಮಾಣ ಮಾಡಿ, ತಾವು ತಾವಾಗಿಯೇ ಕಾಣಿಸಿಕೊಂಡಿರುವ 'ಗಂಧದ ಗುಡಿ' ಡಾಕ್ಯುಸಿನಿಮಾ ನವೆಂಬರ್ನಲ್ಲಿ ತೆರೆಗೆ ಬರಲಿದೆ.
ಹಲವು ಉತ್ತಮ ಹವ್ಯಾಸಗಳನ್ನು ಹೊಂದಿದ್ದ ಪುನೀತ್ ರಾಜ್ಕುಮಾರ್ಗೆ ಪ್ರವಾಸದ ಹವ್ಯಾಸವೂ ಇತ್ತು. ಕರ್ನಾಟಕದ ಪರಿಸರ ಸಂಪತ್ತಿನ ಬಗ್ಗೆಯೂ ಗೌರವವೂ ಇದ್ದ ಪುನೀತ್, ರಾಜ್ಯದ ಪ್ರಕೃತಿ ಸಂಪತ್ತನ್ನು, ರಾಜ್ಯದ ನೈಸರ್ಗಿಕ ಭಿನ್ನತೆಯನ್ನು ಪರಿಚಯಿಸುವ ದೃಷ್ಟಿಯಿಂದ ರಾಜ್ಯದ ಹಲವು ಪ್ರದೇಶಗಳನ್ನು ಅಡ್ಡಾಡಿ ಡಾಕ್ಯುಸಿನಿಮಾ ಮಾಡಿದ್ದು, ಅದಕ್ಕೆ 'ಗಂಧದ ಗುಡಿ' ಎಂದು ಹೆಸರಿಟ್ಟಿದ್ದಾರೆ.
ಈ ಡಾಕ್ಯು ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು ಭಾರಿ ವೈರಲ್ ಆಗಿದೆ. ಕರ್ನಾಟಕದ ಸಿನಿಮಾ ತಾರೆಯರು ಸೇರಿದಂತೆ ನೆರೆ ರಾಜ್ಯದ ತಾರೆಯರು, ಅಭಿಮಾನಿಗಳು, ಪ್ರಕೃತಿ ಪ್ರೇಮಿಗಳು ಈ ಡಾಕ್ಯುಸಿನಿಮಾದ ಬಿಡುಗಡೆಗೆ ಕಾತರರಾಗಿ ಕಾಯುತ್ತಿದ್ದಾರೆ.
ಪುನೀತ್ ರಾಜ್ಕುಮಾರ್ ಹಾಗೂ ಅಮೋಘವರ್ಷ ಇಬ್ಬರು ರಾಜ್ಯದ ಹಲವು ಮೂಲೆಗಳನ್ನು ಸುತ್ತಿ ಈ ಡಾಕ್ಯುಸಿನಿಮಾ ಚಿತ್ರೀಕರಣ ಮಾಡಿದ್ದಾರೆ. ಈ ಡಾಕ್ಯುಸಿನಿಮಾಕ್ಕೆ ಪಿಆರ್ಕೆ ಬಂಡವಾಳ ಹೂಡಿದ್ದು, ಸಿನಿಮಾವನ್ನು ಅವರೇ ಬಿಡುಗಡೆ ಮಾಡಲಿದ್ದಾರೆ.
ಪುನೀತ್ ಅಗಲಿಕೆಯ ಬಳಿಕವೂ ಈ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ದೊಡ್ಡ ಮಟ್ಟದಲ್ಲಿ ಈ ಡಾಕ್ಯುಸಿನಿಮಾವನ್ನು ಬಿಡುಗಡೆ ಮಾಡಲು ಪಿಆರ್ಕೆಯ ಪ್ರಸ್ತುತ ಮಾಲಕಿ, ನಿರ್ವಾಹಕಿ, ಪುನೀತ್ ಮಡದಿ ಅಶ್ವಿನಿ ಪುನೀತ್ ರಾಜ್ಕುಮಾರ್ ನಿರ್ಧರಿಸಿದ್ದು, ನವೆಂಬರ್ನಲ್ಲಿ ಸಿನಿಮಾ ಬಿಡುಗಡೆ ಮಾಡುವುದಾಗಿ ಘೋಷಿಸಲಾಗಿದೆ. ಕನ್ನಡ ರಾಜ್ಯೋತ್ಸವದ ದಿನದಂದೇ ಸಿನಿಮಾ ತೆರೆಗೆ ಬಂದರೂ ಅಚ್ಚರಿ ಇಲ್ಲ.
ಪುನೀತ್ ರಾಜ್ಕುಮಾರ್ ನಿಧನವಾಗುವ ಮುನ್ನ ನಟಿಸಿದ್ದ ಇನ್ನೊಂದು ಸಿನಿಮಾ ಸಹ ತೆರೆಗೆ ಬರಬೇಕಿದೆ ಅದುವೇ ಡಾರ್ಲಿಂಗ್ ಕೃಷ್ಣ ನಟಿಸಿರುವ 'ಲಕ್ಕಿ ಮ್ಯಾನ್' ತಮಿಳಿನ 'ಓ ಮೈ ಕಡವುಲೇ' ಸಿನಿಮಾದ ರೀಮೇಕ್ ಆಗಿರುವ ಈ ಸಿನಿಮಾದಲ್ಲಿ ಪುನೀತ್ ರಾಜ್ಕುಮಾರ್ ದೇವರ ಪಾತ್ರದಲ್ಲಿ ನಟಿಸಿದ್ದಾರೆ.
-
ರಾಜ್ಕುಮಾರ್ಗೆ ಇಂಗ್ಲಿಷ್ ಬರಲ್ಲ ಅಂತ ಆಡಿಕೊಳ್ತಿದ್ರು: ಆಂಗ್ಲ ಭಾಷೆ ಕಲಿಯಲು ವರದಪ್ಪ ಮಾಡಿದ್ದ ವ್ಯವಸ್ಥೆ ಏನು?
-
ಕಲರ್ಫುಲ್ ಲೈಟು.. ಡಿಂಪಲ್ ಸ್ಮೈಲು.. 'ಸಂಜು ವೆಡ್ಸ್ ಗೀತಾ 2' ಒಂದು ಹಾಡಿನ ಸೆಟ್ಟಿಗೆ ಬರೋಬ್ಬರಿ ₹50 ಲಕ್ಷ!
-
ಉಯ್ಯಾಲೆ ಚಿತ್ರದಲ್ಲಿನ ಆ ಸನ್ನಿವೇಶ ಬೇಡ ಎಂದಿದ್ದೇಕೆ ಡಾ.ರಾಜ್ ? ನಿರ್ದೇಶಕರ ಜೊತೆ ಭಿನ್ನಾಭಿಪ್ರಾಯಕ್ಕೆ ಕಾರಣವೇನು ?