Don't Miss!
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ ರ 'ರಾಜಕುಮಾರ' ಚಿತ್ರದ ಬಗ್ಗೆ ಜಗ್ಗೇಶ್ ಹೇಳಿದ್ದೇನು?
ಪುನೀತ್ ರಾಜ್ ಕುಮಾರ್ ಮತ್ತು ದಕ್ಷಿಣ ಭಾರತದ ಖ್ಯಾತ ನಟಿ ಪ್ರಿಯಾ ಆನಂದ್ ಅವರು ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಸಿನಿಮಾ 'ರಾಜಕುಮಾರ' ಚಿತ್ರದ ಮುಹೂರ್ತ ಶುಕ್ರವಾರದಂದು (ಮಾರ್ಚ್ 11) ಸದ್ದಿಲ್ಲದೆ ನೆರವೇರಿದೆ ಅನ್ನೋದನ್ನ ನಾವೇ ನಿಮಗೆ ಹೇಳಿದ್ವಿ.[ಸದ್ದಿಲ್ಲದೆ ಮುಹೂರ್ತ ಆಚರಿಸಿಕೊಂಡ ಪುನೀತ್ ರ 'ರಾಜಕುಮಾರ']
ಇದೀಗ 'ರಾಜಕುಮಾರ' ಚಿತ್ರದ ಬಗ್ಗೆ ನವರಸ ನಾಯಕ ಜಗ್ಗೇಶ್ ಅವರು ಕಮೆಂಟ್ ಮಾಡಿದ್ದಾರೆ. 'ಈ ಚಿತ್ರದ ಕಥೆ ಕೇಳಿದೆ. ಪುನೀತ್ ಗೆ ಇನ್ನೊಂದು ಮೈಲಿಗಲ್ಲಾಗುತ್ತೆ ಈ ಚಿತ್ರ...ಅದರ ಒಂದು ಹಾಡು ಡೈರೆಕ್ಟರ್ ಬರೆದದ್ದು, ಈ ವರ್ಷಕ್ಕೆ ಚಿಂದಿ ಹಾಡು' ಎಂದು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಪವರ್ ಸ್ಟಾರ್ ಪುನೀತ್ ಅವರಿಗೆ ಶುಭ ಹಾರೈಸಿದ್ದಾರೆ.
ಈ ಚಿತ್ರದ ಕಥೆ ಕೇಳಿದೆ.ಪುನೀತ್ಗೆ ಇನ್ನೊಂದು ಮೈಲಿಗಲ್ಲಾಗುತ್ತೆ ಈ ಚಿತ್ರ..ಅದರ ಒಂದು ಹಾಡು ಡೈರೆಕ್ಟರ್ ಬರೆದದ್ದು ಈ ವರ್ಷಕ್ಕೆ ಚಿಂದಿಹಾಡು https://t.co/CvQ9GJspuq
— Actor ಜಗ್ಗೇಶ್ (@Jaggesh2) March 13, 2016
'ಮಿ.ಅಂಡ್ ಮಿಸಸ್ ರಾಮಾಚಾರಿ' ಸಿನಿಮಾ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರು ಆಕ್ಷನ್-ಕಟ್ ಹೇಳುತ್ತಿರುವ ಈ ಚಿತ್ರದ ಮೊದಲನೇ ಹಂತದ ಶೂಟಿಂಗ್ ನ್ಯೂಜಿಲ್ಯಾಂಡ್ ನಲ್ಲಿ ಎಪ್ರಿಲ್ 14 ರಿಂದ ಆರಂಭವಾಗಲಿದೆ. ಸುಮಾರು 2 ವಾರಗಳ ಕಾಲ ನ್ಯೂಜಿಲ್ಯಾಂಡ್ ಮತ್ತು ಆಸ್ಟ್ರೇಲಿಯಾಗಳಲ್ಲಿ 'ರಾಜಕುಮಾರ'ನ ಶೂಟಿಂಗ್ ನಡೆಯಲಿದೆ. ತದನಂತರ ಚಿತ್ರತಂಡ ಗೋವಾಕ್ಕೆ ಶಿಫ್ಟ್ ಆಗಲಿದೆ.['ರಾಜಕುಮಾರ'ನ ಜೊತೆ ಡ್ಯುಯೆಟ್ ಹಾಡೋ ರಾಣಿ ಯಾರು ಗೊತ್ತಾ?]
ಇನ್ನು ಜೂನ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಮತ್ತು ಜುಲೈ ತಿಂಗಳಿನಲ್ಲಿ ಮೈಸೂರಿನಲ್ಲಿ ಹಾಗೂ ಕೆಲವಾರು ದಿನ ವಾರಾಣಾಸಿಯಲ್ಲಿ ಚಿತ್ರದ ಶೂಟಿಂಗ್ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಒಟ್ನಲ್ಲಿ ಎಪ್ರಿಲ್ ತಿಂಗಳಿನಲ್ಲಿ ಶೂಟಿಂಗ್ ಆರಂಭಿಸಿ ಮುಂಬರುವ ಅಕ್ಟೋಬರ್ ತಿಂಗಳಿನಲ್ಲಿ ಚಿತ್ರೀಕರಣ ಕಂಪ್ಲೀಟ್ ಮಾಡಲು ನಿರ್ದೇಶಕ ಸಂತೋಷ್ ಆನಂದ್ ರಾಮ್ ಹಾಗು ಚಿತ್ರತಂಡದವರು ಯೋಜನೆ ಹಾಕಿಕೊಂಡಿದ್ದು, ಎಲ್ಲವೂ ಪ್ಲಾನ್ ಪ್ರಕಾರ ನಡೆದರೆ ಅಕ್ಟೋಬರ್ ತಿಂಗಳ ಕೊನೆಯಲ್ಲಿ ಶೂಟಿಂಗ್ ಕಂಪ್ಲೀಟ್ ಆಗಲಿದೆ.