Don't Miss!
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಹದಾಯಿ ಹೋರಾಟದ ಬಂದ್' ಬಗ್ಗೆ ಪುನೀತ್ ಕೊಟ್ಟ ಹೇಳಿಕೆ
Recommended Video
ಮಹದಾಯಿ ನೀರಿನ ಹೋರಾಟಕ್ಕಾಗಿ ನಾಳೆ ಕರ್ನಾಟಕ ಬಂದ್ ಮಾಡುವ ಬಗ್ಗೆ ನಟ ಪುನೀತ್ ರಾಜ್ ಕುಮಾರ್ ಮಾತನಾಡಿದ್ದಾರೆ. ಪುನೀತ್ ರಾಜ್ ಕುಮಾರ್ ನಿರ್ಮಾಣದ ಎರಡನೇ ಸಿನಿಮಾದ ಮುಹೂರ್ತ ಇಂದು ಕಂಠಿರವ ಸ್ಟೂಡಿಯೋದಲ್ಲಿ ನಡೆದಿದ್ದು ಈ ವೇಳೆ ಪುನೀತ್ ಮಹದಾಯಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
''ನಾವು ಕನ್ನಡಿಗರೆ, ಈ ಹೋರಾಟಕ್ಕೆ ನಮ್ಮ ಬೆಂಬಲ ಯಾವಾಗಲೂ ಇರುತ್ತದೆ. ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ಸಿಗುವಂತಾಗಲಿ''. ಎಂದು ಪುನೀತ್ ರಾಜ್ ಕುಮಾರ್ ಹೇಳಿದ್ದಾರೆ. ಈ ಹಿಂದೆಯೇ ಆದ ಮಹದಾಯಿ ಮತ್ತು ಕಾವೇರಿ ವಿಚಾರದ ಹೋರಾಟಗಳಲ್ಲಿ ಪುನೀತ್ ರಾಜ್ ಕುಮಾರ್ ಭಾಗಿಯಾಗಿದ್ದರು.
ಪುನೀತ್ ನಿರ್ಮಾಣದ ಎರಡನೇ ಚಿತ್ರಕ್ಕೆ ಟೈಟಲ್ ಫಿಕ್ಸ್
ಪುನೀತ್ ನಿರ್ಮಾಣದ ಎರಡನೇ ಚಿತ್ರ 'ಮಯಾ ಬಜಾರ್' ಸಿನಿಮಾದ ಮುಹೂರ್ತ ಇಂದು ನೆರವೇರಿದೆ. 'ಕವಲು ದಾರಿ' ಸಿನಿಮಾದ ನಂತರ ಅಪ್ಪು ಬಂಡವಾಳ ಹಾಕುತ್ತಿರುವ ಸಿನಿಮಾ ಇದಾಗಿದೆ. 'ಮಯಾ ಬಜಾರ್' ಚಿತ್ರದಲ್ಲಿ 'ಒಂದು ಮೊಟ್ಟೆಯ ಕಥೆ' ಖ್ಯಾತಿಯ ರಾಜ್ ಬಿ ಶೆಟ್ಟಿ, ಪ್ರಕಾಶ್ ರಾಜ್, ವಸಿಷ್ಟ, ಅಚ್ಚುತ್ ಕುಮಾರ್, ಸುಧಾರಾಣಿ, ಚೈತ್ರ ರಾವ್ ನಟಿಸಿದ್ದಾರೆ.
ರಾಧಾಕೃಷ್ಣ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಮಿಧುನ್ ಮುಕುಂದನ್ ಸಂಗೀತ ನೀಡಿದ್ದಾರೆ. ಪಿ.ಆರ್.ಕೆ ಬ್ಯಾನರ್ ನಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. 'ಮಯಾ ಬಜಾರ್' ಟೈಟಲ್ ಟೀಸರ್ ಕೂಡ ಇಂದು ರಿಲೀಸ್ ಆಗಿದೆ.