Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೋಕಾಕ್ ಚಳುವಳಿ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಹೇಗಿದ್ರು?
1980ರ ಸಮಯಕ್ಕೆ ಕರ್ನಾಟಕದಲ್ಲಿ ಭಾಷೆಗಾಗಿ ಅತಿ ದೊಡ್ಡ ಕ್ರಾಂತಿ ನಡೆದಿತ್ತು. ಕನ್ನಡ ಭಾಷೆಯನ್ನ ಕಡ್ಡಾಯ ಮಾಡಬೇಕೆಂದು ಸಾಹಿತಿಗಳು, ಕನ್ನಡ ಅಭಿಮಾನಿಗಳು ಬೀದಿಗಿಳಿದಿದ್ದರು. ಇದು ಗೋಕಾಕ್ ಚಳವಳಿ ಎಂಬ ಹೆಸರಿನಲ್ಲಿ ಐತಿಹಾಸಿಕ ಹೋರಾಟವಾಗಿ ಉಳಿದುಕೊಂಡಿದೆ. ಈ ಹೋರಾಟಕ್ಕೆ ಡಾ.ರಾಜ್ ಎಂಬ ಶಕ್ತಿ ಕೈಜೋಡಿಸಿದ್ದರು. ಅಣ್ಣಾವ್ರ ಪ್ರವೇಶದ ಬಳಿಕ ಈ ಹೋರಾಟ ಸ್ವರೂಪವೇ ಬದಲಾಗಿತ್ತು.
ಗೋಕಾಕ್ ಚಳವಳಿಯ ಅಪರೂಪದ ಫೋಟೋವೊಂದನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
'ಗೋಕಾಕ್ ಚಳವಳಿ' ವೇಳೆ ಕನ್ನಡಿಗರಿಗಾಗಿ ಪತ್ರ ಬರೆದಿದ್ದ ಡಾ.ರಾಜ್
ಗೋಕಾಕ್ ಹೋರಾಟ ನಡೆದ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಇನ್ನು ನಾಯಕನಟ ಆಗಿರಲಿಲ್ಲ. ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಸಹ ನಾಯಕ ನಟರಾಗಿರಲಿಲ್ಲ.
ಆದರೂ, ತಂದೆಯ ಜೊತೆ ಮಕ್ಕಳು ಸಹ ಹೋರಾಟದಲ್ಲಿ ಕಾಣಿಸಿಕೊಂಡಿದ್ದರು. ಈ ಫೋಟೋವನ್ನು ಪುನೀತ್ ಹಂಚಿಕೊಂಡಿದ್ದಾರೆ.
ಗೋಕಾಕ್ ಹೋರಾಟ ನಡೆದ ವೇಳೆ ಡಾ ರಾಜ್ ಕುಮಾರ್ ಅವರ ಜೊತೆ ಶಿವಣ್ಣ, ರಾಘಣ್ಣ, ಪುನೀತ್ ರಾಜ್ ಕುಮಾರ್ ವೇದಿಕೆಯಲ್ಲಿ ಕಾಣಿಸಿಕೊಂಡಿರುವ ಫೋಟೋವೊಂದು ಗಮನ ಸೆಳೆಯುತ್ತಿದೆ.
ಈ ಫೋಟೋ ಕಂಡು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಗೋಕಾಕ್ ಹೋರಾಟದಲ್ಲಿ ಅಣ್ಣಾವ್ರ ಮಕ್ಕಳು ಕಾಣಿಸಿಕೊಂಡಿದ್ದ ಫೋಟೋಗಳು ಎಲ್ಲಿಯೂ ಬಹಿರಂಗವಾಗಿರಲಿಲ್ಲ. ಐದು ದಶಕದ ನಂತರ ಈ ಫೋಟೋ ಲಭ್ಯವಾಗಿರುವುದು ಸರ್ಪ್ರೈಸ್ ನೀಡಿದೆ.