Don't Miss!
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- News Bengaluru Peripheral Ring Road: 73 ಕಿಲೋ ಮೀಟರ್ ಯೋಜನೆಗೆ ಬಿಡ್ ಮಾಡಿದ್ದು ಕೇವಲ ಒಂದೇ ಕಂಪನಿ .!-ವೆಚ್ಚ ಎಷ್ಟು?
- Lifestyle ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- Automobiles ಭರ್ಜರಿ ಮೈಲೇಜ್, ಬಹುಬೇಡಿಕೆಯ ಮಾರುತಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್
- Sports ಜೆರ್ಸಿ ನಂ.18, ವಿರಾಟ್ ಕೊಹ್ಲಿ ಜೊತೆಗಿನ ಹೋಲಿಕೆ ಬಗ್ಗೆ ಸ್ಮೃತಿ ಮಂಧಾನ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾರ್ವಜನಿಕರಿಗೆ ರಿಷಿ ಚಿತ್ರದಲ್ಲಿ ಅಪ್ಪು ಹಾಡು ಕೇಳುವ ಸುವರ್ಣಾವಕಾಶ
'ಕವಲುದಾರಿ' ಚಿತ್ರದ ಬಳಿಕ ನಟ ರಿಷಿ 'ಸಾರ್ವಜನಿಕರಿಗೆ ಸುವರ್ಣಾವಕಾಶ' ಎಂಬ ಮನರಂಜನಾತ್ಮಕ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಟೀಸರ್ ಈಗಾಗಲೇ ರಿಲೀಸ್ ಆಗಿದ್ದು, ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆ.
ಇದೀಗ, ಸಾರ್ವಜನಿಕರಿಗೆ ಸುವರ್ಣಾವಕಾಶ ಚಿತ್ರಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾಥ್ ನೀಡಿದ್ದಾರೆ. ಚಿತ್ರದ ಒಂದು ಹಾಡಿಗೆ ಅಪ್ಪು ಧ್ವನಿಗೂಡಿಸಿದ್ದಾರೆ. ಈ ಸುದ್ದಿಯನ್ನ ಸ್ವತಃ ರಿಷಿ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಸದ್ಯದಲ್ಲೇ ಈ ಹಾಡುನ್ನ ಕೇಳುವ ಅವಕಾಶ ಸಿಗಲಿದೆ ಎಂದಷ್ಟೆ ಸುಳಿವು ಬಿಟ್ಟುಕೊಟ್ಟಿರುವ ಚಿತ್ರತಂಡ ದಿನಾಂಕ ಪ್ರಕಟಿಸಿಲ್ಲ. ಮಿಧುನು ಮುಕುಂದನ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.
ತಮಿಳಿನಲ್ಲಿ 'ಕವಲುದಾರಿ' ರೀಮೇಕ್: ಅಪ್ಪ ಮತ್ತು ಮಗನೇ ಹೀರೋಗಳು
ಅನೂಪ್ ರಾಮಸ್ವಾಮಿ ಕಶ್ಯಪ್ ಅವರು ಈ ಚಿತ್ರವನ್ನ ನಿರ್ದೇಶನ ಮಾಡುತ್ತಿದ್ದು, ದೇವರಾಜ್ ಆರ್, ಪ್ರಶಾಂತ್ ರೆಡ್ಡಿ, ಜನಾರ್ಧನ್ ಚಿಕ್ಕಣ್ಣ ಬಂಡವಾಳ ಹಾಕಿದ್ದಾರೆ.
ರಿಷಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರದಲ್ಲಿ ಧನ್ಯಾ ನಾಯಕಿಯಾಗಿ ನಟಿಸಿದ್ದಾರೆ. ಸಿದ್ದು ಮೂಲಿಮನಿ, ದತ್ತಣ್ಣ, ರಂಗಾಯಣ ರಘು, ಶೀನು, ಮಿತ್ರ ಸೇರಿದಂತೆ ಹಲವು ನಟಿಸಿದ್ದಾರೆ.
ಈ ಹಿಂದೆ ಪುನೀತ್ ರಾಜ್ ಕುಮಾರ್ ನಿರ್ಮಾಣದ ಕವಲುದಾರಿ ಚಿತ್ರದಲ್ಲಿ ರಿಷಿ ನಟಿಸಿದ್ದರು. ಬಹುಶಃ ಪಿ.ಆರ್.ಕೆ ಬ್ಯಾನರ್ ನಲ್ಲಿ ಇನ್ನೊಂದು ಸಿನಿಮಾ ಮಾಡುವ ಆಸೆ ಇದೆ ರಿಷಿ ಹೇಳಿಕೊಂಡಿದ್ದರು.