Don't Miss!
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- News Subrahmanya Dhareshwara: ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಬ್ಬಿಂಗ್ ಬಗ್ಗೆ ಪುನೀತ್ ರಾಜ್ ಕುಮಾರ್ ಹೇಳಿದ್ದೇನು?
ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಡಬ್ಬಿಂಗ್ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅವರು ಡಾ.ರಾಜ್ ಕುಮಾರ್ ವೇದಿಕೆಯಲ್ಲಿ ಮಾತನಾಡುತ್ತಿದ್ದರು. ಡಬ್ಬಿಂಗ್ ಯಾಕೆ ಬೇಡ ಎಂಬುದನ್ನು ಅವರು ಬಹಳ ಸಂಯಮದಿಂದ ಹೇಳಿದರು. ಓವರ್ ಟು ಪುನೀತ್ ರಾಜ್ ಕುಮಾರ್...
"ನಾವು ಯಾರನ್ನೂ ದ್ವೇಷಿಸುತ್ತಿಲ್ಲ. ಯಾವ ಭಾಷೆಯನ್ನೂ ದ್ವೇಷಿಸುತ್ತಿಲ್ಲ. ನಮಗೆ ಎಲ್ಲರೂ ಬೇಕು. ಏಕೆಂದರೆ ಚಿತ್ರರಂಗ ಎಂದರೆ ಒಂದು ಕುಟುಂಬ ಇದ್ದಂತೆ. ಕಲಾವಿದರು ಇಲ್ಲಿರಬಹುದು, ತಮಿಳುನಾಡಿನಲ್ಲಿರಬಹುದು ಎಲ್ಲಿ ಬೇಕಾದರೂ ಇರಬಹುದು. ಇದು ಒಂದು ಕುಟುಂಬ.
ಆದರೆ ಐವತ್ತಾರು ವರ್ಷಗಳಿಂದ ಇಲ್ಲದೆ ಇರುವುದು ಈ ಹೊತ್ತು ಯಾಕೆ? ಅದನನ್ನು ನಾವೇ ಕೂತುಕೊಂಡು ಪರಿಹರಿಸಿಕೊಳ್ಳಬೇಕಾಗಿತ್ತು. ಆದರೆ ಅದು ಮಿತಿಮೀರಿಬಿಟ್ಟಿದೆ. ಅದಕ್ಕಾಗಿಯೇ ನಿಮ್ಮ ಮುಂದೆ ಬಂದಿದ್ದೀವಿ. ಚಿತ್ರರಂಗಕ್ಕೆ ಡಬ್ಬಿಂಗ್ ನಿಂದ ಎಫೆಕ್ಟ್ ಆಗುತ್ತಾ ಆಗಲ್ವಾ ಎಂಬುದು ನನಗೆ ಗೊತ್ತಿಲ್ಲ.[ಡಬ್ಬಿಂಗ್ ಗೆ ಅಂಕುಶ ಹಾಕಲು ಪ್ರಾದೇಶಿಕ ಪಕ್ಷದ ಅಗತ್ಯವಿದೆ]
ಆದರೆ ನಮ್ಮನ್ನು ನಂಬಿ, ಸಾರಿ ನಿಮ್ಮನ್ನು ನಂಬಿ, ನಮ್ಮನ್ನು ಯಾಕೆ ನಂಬ್ತಾರೆ ನಿಮ್ಮನ್ನು ನಂಬಿ ಸಾಕಷ್ಟು ಸಿನಿಮಾಗಳ ಕೆಲಸ ನಡೆಯುತ್ತದೆ. ಅದು ದೊಡ್ಡದಿರಬಹುದು, ಚಿಕ್ಕದಿರಬಹುದು. ವಿಶೇಷವಾಗಿ ಟಿವಿ ಮಾಧ್ಯಮದವರು. ಕಿರುತೆರೆಯಲ್ಲಿ ಸಾವಿರಾರು ಜನ ಕೆಲಸ ಮಾಡ್ತಾರೆ. ಈ ಕೆಲಸದಲ್ಲಿ ಹತ್ತು ಪರ್ಸೆಂಟ್ ಕಡಿಮೆಯಾದರೂ ಅವರ ಜೀವನ ಕಷ್ಟವಾಗುತ್ತದೆ.
ಅಷ್ಟು ಜನ ಕೆಲಸ ಕಳೆದುಕೊಳ್ಳುವುದು ಬಿಡುವುದು ನಿಮ್ಮ ಕೈಯಲ್ಲಿದೆ. ದಯವಿಟ್ಟು ನಮ್ಮ ಕೈಬಿಡಬೇಡಿ. ಇದು ಹೋರಾಟ ಅಲ್ಲ. ಬೇರೆ ಭಾಷೆ ಮೇಲೆ ನನಗೆ ಯಾವತ್ತೂ ದ್ವೇಷವಿಲ್ಲ. ಎಲ್ಲಾ ಭಾಷೆಯಲ್ಲಿ, ಎಲ್ಲಾ ಚಿತ್ರರಂಗಗಳಲ್ಲಿ ನನಗೆ ಸ್ನೇಹಿತರಿದ್ದಾರೆ. ಭಾಷೆಯ ಮೇಲೆ ಯಾವತ್ತೂ ತಪ್ಪಾಗಿ ಮಾತನಾಡಿಲ್ಲ. ನಮಗೆ ಯಾವತ್ತೂ ಸಹಾಯ, ಬೆಂಬಲ ಬೇಕು. ಎಲ್ಲಕ್ಕಿಂತಲೂ ಹೆಚ್ಚಾಗಿ ನಿಮ್ಮ ಸಹಾಯ ಬೇಕು". (ಒನ್ಇಂಡಿಯಾ ಕನ್ನಡ)