Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರಮಂದಿರಕ್ಕೆ 'ಯುವರತ್ನ' ಅದ್ದೂರಿ ಎಂಟ್ರಿ; ಅಪ್ಪು ನೋಡಲು ಮುಗಿಬಿದ್ದ ಅಭಿಮಾನಿಗಳು
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾ ಇಂದು (ಏಪ್ರಿಲ್ 1) ಅದ್ದೂರಿಯಾಗಿ ತೆರೆಗೆ ಬಂದಿದೆ. ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಯುವರತ್ನ ಬಿಡುಗಡೆಯಾಗಿದ್ದು, ಈಗಾಗಲೇ ಮೊದಲ ಶೋ ಪ್ರಾರಂಭವಾಗಿದೆ.
Recommended Video
ಯುವರತ್ನ ನೋಡಲು ಅಭಿಮಾನಿಗಳು ಬೆಳ್ಳಂಬೆಳಗ್ಗೆ ಚಿತ್ರಮಂದಿರದ ಮುಂದೆ ಜಮಾಯಿಸಿದ್ದರು. ಬೆಂಗಳೂರಿನ ಅನೇಕ ಚಿತ್ರಮಂದಿರಗಳಲ್ಲಿ ಬೆಳಗ್ಗೆ 6 ಗಂಟೆಯಿಂದನೇ ಶೋ ಪ್ರಾರಂಭವಾಗಿದ್ದು, ಅಭಿಮಾನಿಗಳು ಮುಗಿಬಿದ್ದು ಸಿನಿಮಾ ವೀಕ್ಷಿಸುತ್ತಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸುವ ಮೂಲಕ ಯುವರತ್ನನನ್ನು ಸ್ವಾಗತಿಸಿದ್ದಾರೆ.
ಬಾಳೆ ಎಲೆ ಮುಂದೆ ವಿಮರ್ಶಕ, ವೇದಾಂತಿ ಆದ ಪುನೀತ್ ರಾಜ್ಕುಮಾರ್
ಕಳೆದ 2 ವರ್ಷಗಳಿಂದ ಅಪ್ಪು ನೋಡಲು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಯುವರತ್ನ ಮೂಲಕ ಭರ್ಜರಿ ಟ್ರೀಟ್ ನೀಡಿದ್ದಾರೆ. ರಾಬರ್ಟ್ ಸಿನಿಮಾ ಬಳಿಕ ದೊಡ್ಡ ಮಟ್ಟದಲ್ಲಿ ತೆರೆಗೆ ಬರುತ್ತಿರುವ ಸಿನಿಮಾ ಯುವರತ್ನ. ಕರ್ನಾಟಕದಲ್ಲಿ ಸುಮಾರು 400ರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಯುವರತ್ನ ಬಿಡುಗಡೆಯಾಗಿದೆ.
ಇನ್ನು ಆಂಧ್ರ ಮತ್ತು ತೆಲಂಗಾಣದಲ್ಲೂ ಹೆಚ್ಚು ಅಂದರೆ 200ರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ವಿದೇಶದಲ್ಲೂ ಯುವರತ್ನ ಅಬ್ಬರ ಶುರುವಾಗಿದೆ. ಕಳೆದ ಒಂದು ವಾರದಿಂದ ಎಲ್ಲಿ ನೋಡಿದ್ರು ಯುವರತ್ನ ಪೋಸ್ಟರ್ ಮತ್ತು ಬ್ಯಾನರ್ ಗಳೇ ಕಾಣಿಸುತ್ತಿವೆ. ಚಿತ್ರಮಂದಿರದ ತುಂಬೆಲ್ಲಾ ಪವರ್ ಸ್ಟಾರ್ ಕಟೌಟ್ ಗಳೇ ರಾರಾಜಿಸುತ್ತಿವೆ.
ಅಂದಹಾಗೆ ಇವತ್ತಿನ ಫಸ್ಟ್ ಶೋ ಟಿಕೆಟ್ ಸೋಲ್ಡ್ ಔಟ್ ಆಗಿದ್ದು, ಅನೇಕರು ಟಿಕೆಟ್ ಸಿಗದೆ ಪದಾಡುತ್ತಿದ್ದಾರೆ. ಯುವರತ್ನ ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಮೂಡಿಬಂದಿರುವ ಸಿನಿಮಾ. ಧನಂಜಯ್ ವಿಲನ್ ಆಗಿ ಅಬ್ಬರಿಸಿದ್ದಾರೆ. ನಟಿ ಸಾಯೇಶಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಚಿತ್ರಕ್ಕೆ ಬಂಡವಾಳ ಹೂಡಿದೆ.