Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟಾಲಿವುಡ್ ನಟ ರಾಣಾ ದಗ್ಗುಬಾಟಿ ಕಚೇರಿಯಲ್ಲಿ ಅಪ್ಪು ಪುತ್ಥಳಿ
ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ಎಂದೂ ತುಂಬಲಾರದ ನಷ್ಟ. ಪುನೀತ್ ರಾಜ್ಕುಮಾರ್ ನಮ್ಮನ್ನಗಲಿ ಒಂದು ವರ್ಷ ಸಮೀಪಿಸುತ್ತಿದ್ದು, ಜನರಿಗೆ ಅವರ ಮೇಲಿನ ಪ್ರೀತಿ ಕಿಂಚಿತ್ತೂ ಕಡಿಮೆಯಾಗಿಲ್ಲ. ಪ್ರತಿನಿತ್ಯ ಸಾವಿರಾರು ಅಭಿಮಾನಿಗಳು ಪುನೀತ್ ರಾಜ್ಕುಮಾರ್ ಅವರ ಸಮಾಧಿ ಸ್ಥಳಕ್ಕೆ ಭೇಟಿ ನಮನ ಸಲ್ಲಿಸುತ್ತಿರುತ್ತಾರೆ.
ಕೇವಲ ನಟನೆಯಿಂದ ಮಾತ್ರವಲ್ಲ, ಪುನೀತ್ ರಾಜ್ಕುಮಾರ್ ತಮ್ಮ ಸಾಮಾಜಿಕ ಕಳಕಳಿ, ಸಮಾಜ ಸೇವೆಯ ಮೂಲಕ ಕನ್ನಡಿಗರ ಮನದಲ್ಲಿ ಶಾಶ್ವತ ಸ್ಥಾನ ಪಡೆದುಕೊಂಡಿದ್ದಾರೆ. ಅಪ್ಪು ಅಗಲಿಕೆ ನೋವಿನಿಂದ ಹೊರಬಾರದ ಅಭಿಮಾನಿಗಳು ಅವರ ಹೆಸರಿನಲ್ಲಿ ಅನೇಕ ಸಾಮಾಜಿಕ ಕೆಲಸಗಳನ್ನು ಮಾಡುತ್ತಿದ್ದಾರೆ. ಅಲ್ಲದೆ ಪುನೀತ್ ರಾಜ್ಕುಮಾರ್ ಅವರ ಸವಿ ನೆನಪಿಗಾಗಿ ಅನೇಕ ಕಡೆಗಳಲ್ಲಿ ಅಪ್ಪು ಪುತ್ಥಳಿಕೆಗಳನ್ನು ಅನಾವರಣಗೊಳಿಸಲಾಗಿದೆ.
ಭಾರತೀಯ ಚಿತ್ರರಂಗದಲ್ಲಿ ಅಪ್ಪು ಹೆಸರು ಅಮರವಾಗಿದ್ದು, ಸ್ಯಾಂಡಲ್ವುಡ್ ನಟ,ನಟಿಯರು ಮಾತ್ರವಲ್ಲದೆ ಇತರ ಭಾಷೆಯ ಸಿನಿಮಾ ತಾರೆಯರೊಂದಿಗೆ ಕೂಡ ಪುನೀತ್ ರಾಜ್ಕುಮಾರ್ ಉತ್ತಮ ಬಾಂಧವ್ಯ ಹೊಂದಿದ್ದರು. ಅಪ್ಪು ಅಗಲಿದ ಮೇಲೆ ಅನೇಕ ಇತರ ಭಾಷೆಯ ಸೆಲೆಬ್ರೆಟಿಗಳು ಆಗಾಗ ಅವರೊಂದಿಗಿನ ನೆನಪುಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಅಪ್ಪು ಸ್ನೇಹ ಅಮರ ಎನ್ನುವುದಕ್ಕೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ.
ಟಾಲಿವುಡ್ ನಟ ರಾಣಾ ದಗ್ಗುಬಾಟಿ ತಮ್ಮ ಹಾಗೂ ಪುನೀತ್ ರಾಜ್ಕುಮಾರ್ ಅವರ ಸ್ನೇಹದ ಬಗ್ಗೆ ವಿಶೇಷ ವಿಚಾರವೊಂದನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ರಾಣಾ ದಗ್ಗುಬಾಟಿ ಅವರ ಕಚೇರಿಯಲ್ಲಿ ಅಪ್ಪು ಪುತ್ಥಳಿಕೆಯನ್ನು ಇರಿಸಲಾಗಿದೆ. ಈ ಸಂತೋಷದ ವಿಷಯವನ್ನು ರಾಣಾ ದಗ್ಗುಬಾಟಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
Lucky Man OTT : 'ಲಕ್ಕಿಮ್ಯಾನ್' ಓಟಿಟಿ ರಿಲೀಸ್ ಡೇಟ್ ಫಿಕ್ಸ್: ಎಲ್ಲಿ ಯಾವಾಗ ಅಪ್ಪು ಕೊನೆ ಸಿನಿಮಾ ಸ್ಟ್ರೀಮಿಂಗ್?
ತಮ್ಮ ಕಚೇರಿಯಲ್ಲಿರುವ ಪುನೀತ್ ರಾಜ್ಕುಮಾರ್ ಪುತ್ಥಳಿಕೆ ಫೋಟೋ ಶೇರ್ ಮಾಡಿರುವ ರಾಣಾ ದಗ್ಗುಬಾಟಿ, ತುಂಬ ಸುಂದರವಾದ ಸ್ಮರಣಿಕೆ ಇಂದು ನನ್ನ ಕಚೇರಿಗೆ ಬಂತು. ಮಿಸ್ ಯೂ ನನ್ನ ಗೆಳೆಯ ಪುನೀತ್ ರಾಜ್ಕುಮಾರ್ ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ರಾಣಾ ದಗ್ಗುಬಾಟಿ ಟ್ವೀಟ್ಗೆ ಲಕ್ಷಾಂತರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ಅನೇಕರು ಈ ಪೋಸ್ಟ್ ಅನ್ನು ಶೇರ್ ಮಾಡಿದ್ದಾರೆ.
ಇನ್ನು ಪುನೀತ್ ರಾಜ್ಕುಮಾರ್ ಅಗಲಿಕೆಯ ಬಳಿಕವೂ ಅವರು ಅಭಿನಯದ ಜೇಮ್ಸ್ ಹಾಗೂ ಲಕ್ಕಿ ಮ್ಯಾನ್ ಚಿತ್ರಗಳು ತೆರೆಕಂಡಿದ್ದು, ತೆರೆ ಮೇಲೆ ಅಪ್ಪು ನೋಡಿ ಅಭಿಮಾನಿಗಳು ಕಣ್ಣೀರಿಟ್ಟಿದ್ದರು. ಇದೀಗ ಮತ್ತೊಮ್ಮೆ ಪುನೀತ್ ರಾಜ್ಕುಮಾರ್ ಅವರನ್ನು ಬೆಳ್ಳಿ ತೆರೆ ಮೇಲೆ ನೋಡಿ ಕಣ್ತುಂಬಿಕೊಳ್ಳುವ ಕ್ಷಣಗಳು ಸಮೀಪಿಸುತ್ತಿದೆ. ಪುನೀತ್ ರಾಜ್ಕುಮಾರ್ ತಾವೇ ಸ್ವತಃ ಮುತುವರ್ಜಿ ವಹಿಸಿ ಮಾಡಿರುವ ಗಂಧದ ಗುಡಿ ಡಾಕ್ಯುಮೆಂಟರಿ ತೆರೆ ಕಾಣಲು ಸಜ್ಜಾಗಿದೆ.
'ಹಾಯ್ ಎಲ್ರಿಗೂ, ನಾನು ಫೇಸ್ಬುಕ್ಗೆ ಬರ್ತಾ ಇದೀನಿ'; ಅಪ್ಪು ವಿಡಿಯೊ ವೈರಲ್
ಇದೇ ಅಕ್ಟೋಬರ್ 9ರಂದು ಗಂಧದ ಗುಡಿ ಡಾಕ್ಯುಮೆಂಟರಿಯ ಟ್ರೈಲರ್ ಪಿಆರ್ಕೆ ಆಡಿಯೋಸ್ ಯುಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಲಿದೆ. ಬಳಿಕ ಈ ತಿಂಗಳ ಅಂತ್ಯದಲ್ಲಿ ಗಂಧದ ಗುಡಿ ಡಾಕ್ಯುಮೆಂಟರಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ಕೊನೆಯ ಬಾರಿ ಪುನೀತ್ ರಾಜ್ಕುಮಾರ್ ಅವರನ್ನು ಬೆಳ್ಳಿ ತೆರೆ ಮೇಲೆ ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ.