Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಡಗಿಗೆ ಆಸ್ಪತ್ರೆ ಅಭಿಯಾನಕ್ಕೆ ನಟ ಪುನೀತ್ ಸಾಥ್
ಕೊಡಗು ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆ ಬೇಕು ಎನ್ನುವ ಅಭಿಯಾನ ಕೆಲವು ದಿನಗಳ ಹಿಂದೆಯಿಂದ ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ. ಈ ಅಭಿಯಾನಕ್ಕೆ ಕನ್ನಡ ಚಿತ್ರರಂಗದ ನಟ, ನಟಿಯರು ಕೂಡ ಬೆಂಬಲ ಸೂಚಿಸಿದ್ದಾರೆ.
ಸದ್ಯ, ನಟ ಪುನೀತ್ ರಾಜ್ ಕುಮಾರ್ ಕೂಡ ಕೊಡಗು ಜನರ ಪರ ಧ್ವನಿ ಎತ್ತಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಈ ಅಭಿಮಾನಕ್ಕೆ ತಾವು ಕೈ ಜೋಡಿಸಿದ್ದಾರೆ.
'ಕೊಡಗಿಗೆ ಸುಸಜ್ಜಿತ ಆಸ್ಪತ್ರೆ ಬೇಕು' ಅಭಿಯಾನಕ್ಕೆ ಕಲಾವಿದರ ಬೆಂಬಲ
''ವೀರರ ನಾಡು ಕೊಡಗು ನಮ್ಮ ನಿಮ್ಮೆಲ್ಲರ ಹೆಮ್ಮೆ, ಕೊಡಗಿನ ಪ್ರಕೃತಿಗೆ ಮನಸೋತು ಪ್ರಪಂಚಾದ್ಯಂತ ಪ್ರವಾಸಿಗರು ಭೇಟಿ ನೀಡುತ್ತಾರೆ ಕೊಡಗಿನಲ್ಲಿ ಒಂದು ಉತ್ತಮ ಅತ್ಯಾಧುನಿಕ ಹೈಟೆಕ್ ಆಸ್ಪತ್ರೆಯಾಗಬೇಕೆಂದು ನನ್ನ ಮನವಿ.ಕೊಡಗಿನ ಜನತೆಗೆ ಹಾಗು ಪ್ರವಾಸಿಗರಿಗೆ ಒಂದು ಮೂಲ ಸೌಕರ್ಯ ಒದಗಿಸಿದಂತಾಗುತ್ತದೆ.'' ಎಂದು ಪುನೀತ್ ಮನವಿ ಮಾಡಿದ್ದಾರೆ.
ಕನ್ನಡ ನಟರಾದ ಶಿವರಾಜ್ ಕುಮಾರ್, ಸುದೀಪ್, ನಟಿ ರಶ್ಮಿಕಾ ಮಂದಣ್ಣ, ಹರ್ಷಿಕಾ ಪುಣಚ್ಛ ಹೀಗೆ ಸಾಕಷ್ಟು ತಾರೆಯರು ಕೊಡಗಿಗೆ ಕೊಡುಗುಗಾಗಿ ಆಸ್ಪತ್ರೆ ಅಭಿಯಾನದ ಬಗ್ಗೆ ಮಾತನಾಡಿದ್ದಾರೆ.
ಕೊಡಗುನಲ್ಲಿ ಒಳ್ಳೆಯ ಸುಸಜ್ಜಿತ ಆಸ್ಪತ್ರೆ ಇಲ್ಲ, ಇದರಿಂದ ಅಲ್ಲಿನ ಜನತೆಗೆ ತುಂಬ ತೊಂದರೆ ಆಗುತ್ತಿದೆ. ಎಷ್ಟೊ ಜನ ಇದರಿಂದ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆ ಭಾಗದ ಜನರು ಆಸ್ಪತ್ರೆಗೆಗಾಗಿ ಮನವಿ ಮಾಡುತ್ತಿದ್ದಾರೆ.