Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪವರ್ ಸ್ಟಾರ್ ಪುನೀತ್ ತಲೆಯಲ್ಲಿ ಹೀಗೊಂದು ಪ್ಲಾನ್.!
Recommended Video
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಈಗ ಬರೀ ನಟ ಮಾತ್ರ ಅಲ್ಲ. ಪಿ.ಆರ್.ಕೆ.ಪ್ರೊಡಕ್ಷನ್ಸ್ ಮೂಲಕ ಚಿತ್ರ ನಿರ್ಮಾಪಕ ಕೂಡ ಆಗಿದ್ದಾರೆ. ತಮ್ಮ ಬ್ಯಾನರ್ ನಲ್ಲಿ ಸದಭಿರುಚಿಯ ಸಿನಿಮಾಗಳನ್ನು ಮತ್ತು ಉತ್ತಮ ಪ್ರತಿಭೆಗಳನ್ನು ಹೊರತರಲು ಪುನೀತ್ ರಾಜ್ ಕುಮಾರ್ ಸಜ್ಜಾಗಿದ್ದಾರೆ.
ಈಗಾಗಲೇ ತಮ್ಮ ಪಿ.ಆರ್.ಕೆ.ಪ್ರೊಡಕ್ಷನ್ಸ್ ಬ್ಯಾನರ್ ನಡಿ 'ಕವಲುದಾರಿ' ಮತ್ತು 'ಮಾಯಾಬಜಾರ್' ಚಿತ್ರಗಳನ್ನು ಪುನೀತ್ ರಾಜ್ ಕುಮಾರ್ ನಿರ್ಮಿಸಿದ್ದಾರೆ. ಇದೀಗ ಪುನೀತ್ ತಲೆಯಲ್ಲಿ ಹೊಸ ಪ್ಲಾನ್ ಮೂಡಿದೆ. ಅದೇನಪ್ಪಾ ಅಂದ್ರೆ, ಒಂದು ಮಕ್ಕಳ ಸಿನಿಮಾ ನಿರ್ಮಾಣ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ ಅಪ್ಪು.
ಸ್ಯಾಂಡಲ್ ವುಡ್ ನ ಉತ್ತಮ ಸಿನಿಮಾಗಳ ಪರ ಧ್ವನಿ ಎತ್ತಿದ ಸ್ಟಾರ್ ನಟರು
'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು', 'ಒಂದಲ್ಲಾ ಎರಡಲ್ಲಾ' ಚಿತ್ರಗಳನ್ನು ನೋಡಿ ಮನಸಾರೆ ಇಷ್ಟಪಟ್ಟಿದ್ದ ಪುನೀತ್ ರಾಜ್ ಕುಮಾರ್, ತಮ್ಮ ಬ್ಯಾನರ್ ನಲ್ಲೂ ಉತ್ತಮ ಮಕ್ಕಳ ಚಿತ್ರಗಳನ್ನ ನಿರ್ಮಿಸಲು ಮನಸ್ಸು ಮಾಡಿದ್ದಾರೆ.
ಸ್ಟಾರ್ ನಟರು ಕಡಿಮೆ ಚಿತ್ರ ಮಾಡೋದರಿಂದ ಲಾಭಕ್ಕಿಂತ ನಷ್ಟ ಹೆಚ್ಚು!
ಹಾಗ್ನೋಡಿದ್ರೆ, ಅಪ್ಪು ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದವರು. 'ಭಾಗ್ಯವಂತ', 'ಬೆಟ್ಟದ ಹೂ' ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ ಅಪ್ಪು ಬಾಲನಟನಾಗಿ ರಾಷ್ಟ್ರ ಪ್ರಶಸ್ತಿ ಕೂಡ ಪಡೆದಿದ್ದಾರೆ. ಇದೀಗ ತಮ್ಮದೇ ಬ್ಯಾನರ್ ನಡಿ ಬಾಲ ಪ್ರತಿಭೆಗಳಿಗೆ ಚಾನ್ಸ್ ನೀಡಲು ಪುನೀತ್ ಮುಂದಾಗಿದ್ದಾರೆ.
ಒಂದೊಳ್ಳೆ ಕಥೆ ಸಿಕ್ಕರೆ, ಪಿ.ಆರ್.ಕೆ.ಪ್ರೊಡಕ್ಷನ್ಸ್ ಬ್ಯಾನರ್ ನಡಿ ಮಕ್ಕಳ ಚಿತ್ರ ಸೆಟ್ಟೇರುವುದು ಪಕ್ಕಾ.