Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪವರ್ ಸ್ಟಾರ್ ಪುನೀತ್ ತಲೆಯಲ್ಲಿ ಹೀಗೊಂದು ಪ್ಲಾನ್.!
Recommended Video
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಈಗ ಬರೀ ನಟ ಮಾತ್ರ ಅಲ್ಲ. ಪಿ.ಆರ್.ಕೆ.ಪ್ರೊಡಕ್ಷನ್ಸ್ ಮೂಲಕ ಚಿತ್ರ ನಿರ್ಮಾಪಕ ಕೂಡ ಆಗಿದ್ದಾರೆ. ತಮ್ಮ ಬ್ಯಾನರ್ ನಲ್ಲಿ ಸದಭಿರುಚಿಯ ಸಿನಿಮಾಗಳನ್ನು ಮತ್ತು ಉತ್ತಮ ಪ್ರತಿಭೆಗಳನ್ನು ಹೊರತರಲು ಪುನೀತ್ ರಾಜ್ ಕುಮಾರ್ ಸಜ್ಜಾಗಿದ್ದಾರೆ.
ಈಗಾಗಲೇ ತಮ್ಮ ಪಿ.ಆರ್.ಕೆ.ಪ್ರೊಡಕ್ಷನ್ಸ್ ಬ್ಯಾನರ್ ನಡಿ 'ಕವಲುದಾರಿ' ಮತ್ತು 'ಮಾಯಾಬಜಾರ್' ಚಿತ್ರಗಳನ್ನು ಪುನೀತ್ ರಾಜ್ ಕುಮಾರ್ ನಿರ್ಮಿಸಿದ್ದಾರೆ. ಇದೀಗ ಪುನೀತ್ ತಲೆಯಲ್ಲಿ ಹೊಸ ಪ್ಲಾನ್ ಮೂಡಿದೆ. ಅದೇನಪ್ಪಾ ಅಂದ್ರೆ, ಒಂದು ಮಕ್ಕಳ ಸಿನಿಮಾ ನಿರ್ಮಾಣ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ ಅಪ್ಪು.
ಸ್ಯಾಂಡಲ್ ವುಡ್ ನ ಉತ್ತಮ ಸಿನಿಮಾಗಳ ಪರ ಧ್ವನಿ ಎತ್ತಿದ ಸ್ಟಾರ್ ನಟರು
'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು', 'ಒಂದಲ್ಲಾ ಎರಡಲ್ಲಾ' ಚಿತ್ರಗಳನ್ನು ನೋಡಿ ಮನಸಾರೆ ಇಷ್ಟಪಟ್ಟಿದ್ದ ಪುನೀತ್ ರಾಜ್ ಕುಮಾರ್, ತಮ್ಮ ಬ್ಯಾನರ್ ನಲ್ಲೂ ಉತ್ತಮ ಮಕ್ಕಳ ಚಿತ್ರಗಳನ್ನ ನಿರ್ಮಿಸಲು ಮನಸ್ಸು ಮಾಡಿದ್ದಾರೆ.
ಸ್ಟಾರ್ ನಟರು ಕಡಿಮೆ ಚಿತ್ರ ಮಾಡೋದರಿಂದ ಲಾಭಕ್ಕಿಂತ ನಷ್ಟ ಹೆಚ್ಚು!
ಹಾಗ್ನೋಡಿದ್ರೆ, ಅಪ್ಪು ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದವರು. 'ಭಾಗ್ಯವಂತ', 'ಬೆಟ್ಟದ ಹೂ' ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ ಅಪ್ಪು ಬಾಲನಟನಾಗಿ ರಾಷ್ಟ್ರ ಪ್ರಶಸ್ತಿ ಕೂಡ ಪಡೆದಿದ್ದಾರೆ. ಇದೀಗ ತಮ್ಮದೇ ಬ್ಯಾನರ್ ನಡಿ ಬಾಲ ಪ್ರತಿಭೆಗಳಿಗೆ ಚಾನ್ಸ್ ನೀಡಲು ಪುನೀತ್ ಮುಂದಾಗಿದ್ದಾರೆ.
ಒಂದೊಳ್ಳೆ ಕಥೆ ಸಿಕ್ಕರೆ, ಪಿ.ಆರ್.ಕೆ.ಪ್ರೊಡಕ್ಷನ್ಸ್ ಬ್ಯಾನರ್ ನಡಿ ಮಕ್ಕಳ ಚಿತ್ರ ಸೆಟ್ಟೇರುವುದು ಪಕ್ಕಾ.