Don't Miss!
- Technology ಬಹುನಿರೀಕ್ಷಿತ ರಿಯಲ್ಮಿ ನಾರ್ಜೋ 70 ಪ್ರೊ 5G ಲಾಂಚ್!..ಇಯರ್ಬಡ್ಸ್ ಉಚಿತ!
- News ಜಗದೀಶ್ ಶೆಟ್ಟರ್ಗೆ ಬೆಳಗಾವಿ ಸ್ಪರ್ಧೆ ಮತ್ತಷ್ಟು ಜಟೀಲ: ಗೋಬ್ಯಾಕ್ ಅಭಿಯಾನ ಯಶಸ್ವಿ ಆಯ್ತಾ?
- Automobiles ನಟ ವಿಜಯ್ ನೋಡಲು ಬಂದ ಜನಸಾಗರ: ಅಭಿಮಾನಿಗಳಿಂದ ನಟನ ಕಾರಿಗೆ ಹಾನಿ!
- Sports IPL ಬಿಡಿ, WPLನಲ್ಲಿ ಆರ್ಸಿಬಿಗೆ ಗೆದ್ದ ಮೊತ್ತಕ್ಕೂ ಸಮವಿಲ್ಲ PSL ವಿಜೇತರಿಗೆ ಸಿಕ್ಕ ಬಹುಮಾನ
- Lifestyle ಕೆಜಿಎಫ್ ಎಲ್ ಡೊರಾಡೊ ಕಥೆ ಕೇಳಿದ್ದೀರಾ? ಇದು ಸಮುದ್ರದಲ್ಲಿ ಮುಳುಗಿದ ಎಲ್ ಡೊರಾಡೊ ಹಡಗಿನ ಕಥೆ..!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಡ್ಯ ಚುನಾವಣಾ ಪ್ರಚಾರದ ಬಗ್ಗೆ ನಿರ್ಧಾರ ತಿಳಿಸಿದ ಪವರ್ ಸ್ಟಾರ್
Recommended Video
ನಟ ಪುನೀತ್ ರಾಜ್ ಕುಮಾರ್ ಮಂಡ್ಯ ಚುನಾವಣೆಯ ಬಗ್ಗೆ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ''ನನಗೂ, ರಾಜಕಾರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂಬುದು ನಿಮಗೆ ತಿಳಿದಿರುವ ವಿಚಾರ'' ಎನ್ನುವ ಮೂಲಕ ಅಪ್ಪು ಚುನಾವಣೆಗೆ ಬಗ್ಗೆ ತಮ್ಮ ನಿಲುವನ್ನು ತಿಳಿಸಿದ್ದಾರೆ.
ಮಂಡ್ಯದಲ್ಲಿ ನಟಿ ಸುಮಲತಾ ಪರ ಪ್ರಚಾರಕ್ಕೆ ನಟ ದರ್ಶನ್ ಹಾಗೂ ಯಶ್ ಜೊತೆಯಾಗಿದ್ದರೆ. ಪುನೀತ್ ಕೂಡ ಈ ಪ್ರಚಾರದಲ್ಲಿ ಭಾಗಿಯಾಗುತ್ತಾರೆ ಎನ್ನುವ ಸುದ್ದಿ ಇತ್ತು. ಆದರೆ, ಇಂತಹ ಎಲ್ಲ ಉಹಾಪೋಹಗಳಿಗೆ ಪವರ್ ಸ್ಟಾರ್ ತೆರೆ ಎಳೆದಿದ್ದಾರೆ.
''ನಾವೇನು ಪಾಕಿಸ್ತಾನದಿಂದ ಬಂದಿಲ್ಲ'' : ಟೀಕೆಗಳಿಗೆ ಅಣ್ತಮ್ಮ ಯಶ್ ತಿರುಗೇಟು!
''ಗೌರವಾನ್ವಿತ ದೇವೇಗೌಡರ ಕುಟುಂಬ ಹಾಗೂ ಅಂಬರೀಶ್ ಅವರ ಕುಟುಂಬ ನಮ್ಮ ಕುಟುಂಬದ ಹಾಗೆ, ಇಬ್ಬರು ನಮ್ಮ ಹಿತೈಷಿಗಳೇ, ಇಬ್ಬರಿಗೂ ಒಳ್ಳೆದಾಗಲಿ. ಆ ಭಗವಂತ ನಿಮಗೆ ಜನ ಸೇವೆ ಮಾಡುವ ಶಕ್ತಿ ಇನ್ನಷ್ಟು ಕೊಡಲಿ ಎಂದು ಪ್ರಾರ್ಥಿಸುತ್ತ ನನ್ನ ಹೆಸರನ್ನು ಚುನಾವಣೆಗೆ ಹಾಗೂ ರಾಜಕಾರಣಕ್ಕೆ ಸಂಬಂಧಿಸಬೇಡಿ ಎಂದು ಎಲ್ಲರನ್ನು ವಿನಂತಿಸಿಕೊಳ್ಳುತ್ತೇನೆ.'' ಎಂದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
An important information to all of you 👍 pic.twitter.com/a6fIMWyPBF
— Puneeth Rajkumar (@PuneethRajkumar) March 20, 2019
ಈ ಮೂಲಕ ಪುನೀತ್ ರಾಜ್ ಕುಮಾರ್ ಯಾವುದೇ ರಾಜಕೀಯ ಪಕ್ಷಕ್ಕೆ ಅಥವಾ ಅಭ್ಯರ್ಥಿಗಳಿಗೆ ಚುನಾವಣಾ ಪ್ರಚಾರ ಮಾಡುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ.