Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿರಡಿ ಸಾಯಿಬಾಬಾ ಮತ್ತು ಕೊಲ್ಲಾಪುರ ಮಹಾಲಕ್ಷ್ಮೀ ದರ್ಶನ ಪಡೆದ ಪುನೀತ್
ಕನ್ನಡ ನಟ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾ ಏಪ್ರಿಲ್ 1 ರಂದು ತೆರೆಗೆ ಬರಲಿದೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಯುವರತ್ನ ರಿಲೀಸ್ ಆಗಲಿದ್ದು, ಅದಕ್ಕೂ ಮುಂಚೆ ಭರ್ಜರಿ ಪ್ರಿ-ರಿಲೀಸ್ ಕಾರ್ಯಕ್ರಮ ನಡೆಯಲಿದೆ.
Recommended Video
ಯವರತ್ನ ಸಿನಿಮಾ ಬಿಡುಗಡೆ ಕೇವಲ 27 ದಿನಗಳು ಮಾತ್ರ ಬಾಕಿಯಿದ್ದು, ಕರ್ನಾಟಕ, ಆಂಧ್ರ-ತೆಲಂಗಾಣ ಹಾಗೂ ವಿದೇಶಗಳಲ್ಲಿ ವಿತರಣೆ ಹಕ್ಕು ಸೋಲ್ಡ್ ಆಗಿದೆ. ಖ್ಯಾತ ನಿರ್ಮಾಪಕರುಗಳು ಯುವರತ್ನ ಚಿತ್ರವನ್ನು ಎಲ್ಲ ಕಡೆಯೂ ರಿಲೀಸ್ ಮಾಡಲಿದ್ದಾರೆ.
ತೆಲುಗಿನ ಖ್ಯಾತ ನಿರ್ಮಾಪಕರ ಪಾಲಾಯ್ತು ಯುವರತ್ನ ವಿತರಣೆ ಹಕ್ಕು
ಈ ನಡುವೆ ನಟ ಪುನೀತ್ ರಾಜ್ ಕುಮಾರ್ ಕೊಲ್ಲಾಪುರದ ಅಂಬಾಬಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಮಹಾಲಕ್ಷ್ಮಿ ದೇವಿಯ ಆಶೀರ್ವಾದ ಪಡೆದುಕೊಂಡಿದ್ದಾರೆ. ಪುನೀತ್ ಜೊತೆ ನಿರ್ಮಾಪಕ ವಿಜಯ್ ಕಿರಗಂದೂರ್, ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಹ ಸಾಥ್ ನೀಡಿದ್ದಾರೆ.
ಈ ಫೋಟೋವನ್ನು ನಿರ್ಮಾಪಕ ವಿಜಯ್ ಕಿರಗಂದೂರ್ ಹಂಚಿಕೊಂಡಿದ್ದು, ''ಕೊಲ್ಲಾಪುರದ ಅಂಬಾಬಾಯಿ ದೇವಸ್ಥಾನಕ್ಕೆ ಪುನೀತ್ ರಾಜ್ ಕುಮಾರ್ ಮತ್ತು ಸಂತೋಷ್ ಆನಂದ್ ರಾಮ್ ಜೊತೆ ಭೇಟಿ ನೀಡಿ ಮಹಾಲಕ್ಷ್ಮಿ ಅಮ್ಮನವರ ಆಶೀರ್ವಾದ ಪಡೆದೆವು. 27 ದಿನಗಳಲ್ಲಿ ಥಿಯೇಟರ್ ಪರದೆ ಮೇಲೆ ನಿಮ್ಮನ್ನು ರಂಜಿಸಲು ಯುವರತ್ನ ಬರಲಿದ್ದಾನೆ....'' ಎಂದು ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಶಿರಿಡಿ ಭೇಟಿ ನೀಡಿ ಸಧ್ಗುರು ಸಾಯಿ ಬಾಬಾ ದರ್ಶನ ಸಹ ಪಡೆದುಕೊಂಡಿದ್ದಾರೆ.
ಎಸ್ ತಮನ್ ಸಂಗೀತ ನೀಡಿರುವ ಈ ಚಿತ್ರದಲ್ಲಿ ಧನಂಜಯ್, ವಸಿಷ್ಠ ಸಿಂಹ, ಸಯೇಶಾ ಸೈಗಲ್, ಶರತ್ ಕುಮಾರ್ ಸೇರಿದಂತೆ ಹಲವರು ನಟಿಸಿದ್ದಾರೆ.
ಯುವರತ್ನ ಸಿನಿಮಾದ ವಿತರಣೆ ಬಗ್ಗೆ ಮಾಹಿತಿ
- ವೈಜಾಕ್ನಲ್ಲಿ ವಾರಾಹಿ, ನಿಜಾಮ್ನಲ್ಲಿ ದಿಲ್ ರಾಜು ಅವರ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್, ನೆಲ್ಲೂರು ಜೆಪಿಆರ್ ಫಿಲಂಸ್, ಗುಂಟೂರು ಧನುಶ್ರೀ ಫಿಲಂಸ್, ಕೃಷ್ಣ ಅನ್ನಪೂರ್ಣ ಸ್ಟುಡಿಯೋಸ್ ಲಿಮಿಟೆಡ್, ಪಶ್ಚಿಮ ಗೋವಾದರಿ ಇಶ್ನಾ ಎಂಟರ್ಪ್ರೈಸಸ್ ಹಾಗೂ ಪೂರ್ವ ಗೋವಾದರಿ ಮಹಿಕಾ ಮೂವಿಸ್ ಸಂಸ್ಥೆ ಯುವರತ್ನ ಚಿತ್ರವನ್ನು ರಿಲೀಸ್ ಮಾಡಲಿದೆ.
- ಉತ್ತರ ಅಮೆರಿಕ ಹಾಗೂ ಕೆನೆಡಾ ದೇಶಗಳಲ್ಲಿ ವೀಕೆಂಡ್ ಸಿನಿಮಾ ಸಂಸ್ಥೆ ಪುನೀತ್ ಚಿತ್ರವನ್ನು ವಿತರಿಸುತ್ತಿದೆ.
- ಈ ಎರಡು ದೇಶಗಳನ್ನು ಬಿಟ್ಟು ಉಳಿದ ಕಡೆ ಎಪಿ ಇಂಟರ್ನ್ಯಾಷನಲ್ ಸಂಸ್ಥೆ ರಿಲೀಸ್ ಮಾಡುತ್ತಿದೆ.
- ಕರ್ನಾಟಕ ರಾಜ್ಯಾದ್ಯಂತ ಕಾರ್ತಿಕ್ ಗೌಡ ಅವರ ಕೆಆರ್ಜಿ ಸ್ಟುಡಿಯೋ ಯುವರತ್ನ ಚಿತ್ರವನ್ನು ರಿಲೀಸ್ ಮಾಡುತ್ತಿದೆ.