Don't Miss!
- News Bengaluru Heat: ಏ.25 ರಂದು ನಗರದಲ್ಲಿ ಅತ್ಯಧಿಕ ತಾಪಮಾನ: 12 ವರ್ಷಗಳ ದಾಖಲೆ ಉಡೀಸ್
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಅಶ್ವಥ್ ಮನೆಗೆ ಬಂದ ಪುನೀತ್: ಅಪ್ಪು ಬಗ್ಗೆ ಅಶ್ವಥ್ ಪುತ್ರ ಹೇಳಿದ್ದೇನು?
Recommended Video
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಯುವರತ್ನ ಸಿನಿಮಾದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಮೈಸೂರಿನಲ್ಲಿ ಈ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಬಿಡುವು ಮಾಡಿಕೊಂಡ ಅಪ್ಪ ಹಿರಿಯ ನಟ ಕೆ.ಎಸ್ ಅಶ್ವಥ್ ಅವರ ಮನೆಗೆ ಭೇಟಿ ನೀಡಿದ್ದಾರೆ.
ಮೈಸೂರಿನಲ್ಲಿರುವ ಅಶ್ವಥ್ ಅವರ ಮನೆಗೆ ಬಂದ ಪುನೀತ್ ಅವರನ್ನ ಶಂಕರ್ ಅಶ್ವಥ್ ಅವರು ಬರಮಾಡಿಕೊಂಡಿದ್ದಾರೆ. ಮನೆಯವರನ್ನ ಪುನೀತ್ ಅವರಿಗೆ ಪರಿಚಯ ಮಾಡಿಸಿಕೊಟ್ಟು ಜೊತೆಯಲ್ಲಿ ಫೋಟೋ ಕೂಡ ತೆಗೆಸಿಕೊಂಡಿದ್ದಾರೆ.
ದರ್ಶನ್-ಪುನೀತ್ ಈಗ ಹೊಸ 'ದಿಗ್ಗಜರು': ಯಾವ ವಿಷ್ಯಕ್ಕೆ?
ಇನ್ನು ಈ ಬಗ್ಗೆ ಫೇಸ್ ಬುಕ್ ಬಲ್ಲಿ ಬರೆದುಕೊಂಡಿರುವ ಶಂಕರ್ ಅಶ್ವಥ್ ಅವರು ''ಇದು ನಾ ಕಂಡ ಸತ್ಯ - ತಂದೆ ಮಹಾರಾಜ ಮಗ ರಾಜಕುಮಾರ, ಡಾ.ರಾಜ್ ರಲ್ಲಿ ಇದ್ದ ಅತಿ ದೊಡ್ಡ ಶಕ್ತಿ ಎಂದರೆ ವಿನಯ ತಾಳ್ಮೆ ಸಹನೆ ಸೈರಣೆ ವಿಶಾಲತೆ ಬಹುಶಃ ಅದು ಅವರ ಹುಟ್ಟಿನಿಂದಲೇ ಬಂದಿರಬಹುದು ಎಂದು ನಾನು ಹೇಳುತ್ತಿರುವುದಲ್ಲಾ ಇದು ನನ್ನ ತಂದೆ ನನಗೆ ಹೇಳಿದ್ದು. ಒಬ್ಬ ಮಹಾರಾಜನಿಗೆ ಇರಬೇಕಾದ ಗುಣಗಳು. ಅದೇ ಅಂಶ ಅವರ ವಂಶದ ಕುಡಿಯಲ್ಲೂ ಕಾಣಬಹುದು'' ಎಂದಿದ್ದಾರೆ.
ಅಂದು ರಾಜಣ್ಣ - ಅಶ್ವಥ್, ಇಂದು ಪುನೀತ್ - ಶಂಕರ್ ಅಶ್ವಥ್
''ನನ್ನ ತಂದೆ ಅಪ್ಪು ಸಾರ್ ಜೊತೆಯಲ್ಲಿ ಮೊದಲನೆಯ ಬಾರಿಗೆ ನಟಿಸುವ ಸಂದರ್ಭದಲ್ಲಿ"ಈ ಮಗುವಿಗೆ ಅಣ್ಣಾ ಅವರ ಎಲ್ಲಾ ಅಂಶಗಳು ಇದೆ ಮುಂದೆ ಇನ್ನೊಬ್ಬ ರಾಜಕುಮಾರ ಆಗುತ್ತಾನೆ" ಎಂದು ಹೇಳಿದ್ದರು ಅದು ಇಂದು ಅಪ್ಪು ಸಾರ್ ನಿರೂಪಿಸಿದರು'' ಎಂದು ಮೆಚ್ಚಿಕೊಂಡಿದ್ದಾರೆ.
ಅಂದ್ಹಾಗೆ, ಶಂಕರ್ ಅಶ್ವಥ್ ಅವರು ಯುವರತ್ನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಾಜಕುಮಾರ ಸಿನಿಮಾದ ಬಳಿಕ ಸಂತೋಷ್ ಆನಂದ್ ರಾಮ್ ಈ ಚಿತ್ರವನ್ನ ನಿರ್ದೇಶನ ಮಾಡುತ್ತಿದ್ದು, ಸಯೀಶಾ ಸೈಗಲ್ ನಾಯಕಿಯಾಗಿ ನಟಿಸಿದ್ದಾರೆ.