Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮನೆಗೆ ಭೇಟಿ ಕೊಟ್ಟ ಪುನೀತ್ ರಾಜ್ಕುಮಾರ್ ಗೆ ಗದೆ ಕೊಟ್ಟ ಸಚಿವ
ನಟ ಪುನೀತ್ ರಾಜ್ಕುಮಾರ್ ಅವರು ಇಂದು (ಮಂಗಳವಾರ) ಅರಣ್ಯ ಸಚಿವ ಆನಂದ್ ಸಿಂಗ್ ಅವರ ಹೊಸಪೇಟೆಯ ನಿವಾಸಕ್ಕೆ ಭೇಟಿ ನೀಡಿದರು.
ಪುನೀತ್ ಅವರನ್ನು ಆದರದಿಂದ ಸ್ವಾಗತಿಸಿದ ಸಚಿವ ಆನಂದ್ ಸಿಂಗ್, ಪುನೀತ್ ರಾಜ್ಕುಮಾರ್ ಅವರಿಗೆ ಶಾಲು ಹೊದಿಸಿ, ಬೆಳ್ಳಿ ಗದೆ ನೀಡಿ ಸನ್ಮಾನಿಸಿದರು.
'ಜೇಮ್ಸ್' ಸಿನಿಮಾಗೆ ನಾಯಕಿ ಫಿಕ್ಸ್: ಮತ್ತೆ ಒಂದಾದ 'ರಾಜಕುಮಾರ' ಜೋಡಿ
ಸಚಿವರ ಕುಟುಂಬದೊಂದಿಗೆ ಪುನೀತ್ ರಾಜ್ಕುಮಾರ್ ಉಪಹಾರ ಸೇವಿಸಿದರು. ಈ ಸಮಯ ಸಾರಿಗೆ ಸಚಿವ ಲಕ್ಷ್ಮಣ ಸವಧಿ ಸಹ ಹಾಜರಿದ್ದರು. ಅವರು ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆಂದು ಹೊಸಪೇಟೆಗೆ ಬಂದಿದ್ದರು.
ಹೊಸಪೇಟೆ ಸುತ್ತ-ಮುತ್ತ ಚಿತ್ರೀಕರಣ
ಜೇಮ್ಸ್ ಸಿನಿಮಾದ ಚಿತ್ರೀಕರಣಕ್ಕೆಂದು ಒಂದು ವಾರದಿಂದಲೂ ಬಳ್ಳಾರಿ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿದ್ದಾರೆ ನಟ ಪುನೀತ್ ರಾಜ್ಕುಮಾರ್. ಸಿನಿಮಾದ ಚಿತ್ರೀಕರಣವು ಹೊಸಪೇಟೆ, ಗಂಗಾವತಿ, ಕಮಲಾಪುರ, ಹಂಪಿ ಗಳಲ್ಲಿ ನಡೆಯುತ್ತಿದೆ.
ತುಂಗಭದ್ರಾ ಡ್ಯಾಂ ಗೆ ಭೇಟಿ ನೀಡಿದ್ದ ಪುನೀತ್
ಕೆಲವು ದಿನಗಳ ಹಿಂದೆಯಷ್ಟೆ ಪುನೀತ್ ರಾಜ್ಕುಮಾರ್ ಅವರು ಗೆಳೆಯರೊಂದಿಗೆ ಸೇರಿ ಹೊಸಪೇಟೆಯ ತುಂಗಭದ್ರಾ ಅಣೆಕಟ್ಟೆಗೆ ಭೇಟಿ ನೀಡಿದ್ದರು. ಪುನೀತ್, ಟಿಬಿ ಡ್ಯಾಂ ಗೆ ಭೇಟಿ ನೀಡಿದ್ದ ವಿಡಿಯೋ ವೈರಲ್ ಆಗಿತ್ತು.
'ಜೇಮ್ಸ್' ಚಿತ್ರೀಕರಣ ವೇಳೆ ಪುನೀತ್ ರಾಜ್ ಕುಮಾರ್ ಕೈಮುಗಿದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದೇನು?
ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು
ಹೊಸಪೇಟೆ ಸಮೀಪದ ಸ್ಥಳಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆಯುತ್ತಿರುವ ಕಾರಣ, ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಪುನೀತ್ ಅವರನ್ನು ನೋಡಲು ಧಾವಿಸಿದ್ದಾರೆ. ಇದರಿಂದ ಚಿತ್ರೀಕರಣಕ್ಕೆ ಸಮಸ್ಯೆ ಆದ ಪ್ರಸಂಗವೂ ನಡೆದಿದೆ, ಸ್ವತಃ ಪುನೀತ್ ಅವರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡು ಸಮಾಧಾನ ಪಡಿಸಿದ್ದಾರೆ.
Recommended Video
ಪ್ರಿಯಾ ಆನಂದ್ ನಾಯಕಿ
ಜೇಮ್ಸ್ ಸಿನಿಮಾದ ಚಿತ್ರೀಕರಣವು ಬಹು ಭಿರಿಸಿನಿಂದ ಸಾಗಿದೆ. ಸಿನಿಮಾಕ್ಕೆ ತಮಿಳಿನ ಪ್ರಿಯಾ ಆನಂದ್ ನಾಯಕಿಯಾಗಿದ್ದಾರೆ. ಸಿನಿಮಾದ ನಿರ್ದೇಶನವನ್ನು ಭರ್ಜರಿ ಚೇತನ್ ಕುಮಾರ್ ವಹಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಅನು ಪ್ರಭಾಕರ್, ಆದಿತ್ಯ ಮೆನನ್ ಸಹ ಇರಲಿದ್ದಾರೆ.