Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂತ್ರಾಲಯದಲ್ಲಿ ಪುನೀತ್: ರಾಯರ ದರ್ಶನ ಮಾಡಿ ಭಾವುಕರಾದ ಅಪ್ಪು
ಪವರ್ ಸ್ಟಾರ್ ಪುನೀತ್ ರಾಜ್ ಮಂತ್ರಾಲಯ ಪ್ರವಾಸಕ್ಕೆ ತೆರಳಿದ್ದಾರೆ. ನಿನ್ನೆ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಉತ್ಸವ ಹಿನ್ನಲೆಯಲ್ಲಿ ಮಂತ್ರಾಲಯದ ಮಠಕ್ಕೆ ಆಗಮಿಸಿದ್ದ ಪುನೀತ್ ರಾಜ್ ಕುಮಾರ್ ರಾಯರ ದರ್ಶನ ಪಡೆದು ಧನ್ಯರಾದರು.
Recommended Video
ಮಂತ್ರಾಲಯದ ಶ್ರೀಮಠದಲ್ಲಿ ನಡೆಯುವ ಉತ್ಸವವನ್ನು ಶ್ರೀ ರಾಘವೇಂದ್ರ ಗುರು ವೈಭವೋತ್ಸವ ಎಂದು ಕರೆಯುತ್ತಾರೆ. ಏಳು ದಿನಗಳ ಕಾಲ ನಡೆಯುವ ಈ ವೈಭವೋತ್ಸವದ ಕೊನೆಯ ದಿನ ವರ್ಧಂತಿ ಉತ್ಸವ ಆಚರಿಸಲಾಗುತ್ತೆ.
ಚಿತ್ರರಂಗದಲ್ಲಿ 44 ವರ್ಷ ಪೂರೈಸಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್
ಈ ಉತ್ಸವಕ್ಕೆ ಪುನೀತ್ ರಾಜ್ ಕುಮಾರ್ ಆಗಮಿಸಿದ್ದರು. ಈ ಸಮಾರಂಭದಲ್ಲಿ ಪವರ್ ಸ್ಟಾರ್ ಗೆ ಸನ್ಮಾನ ಮಾಡಿ ಗೌರವಿಸಲಾಯಿತು. ಇನ್ನು ಸಮಾರಂಭದಲ್ಲಿ ಮಾತನಾಡಿದ ಅಪ್ಪು ಹಳೆಯ ನೆನಪನ್ನು ಹಂಚಿಕೊಂಡಿರು. ಇದೆ ಸಮಯದಲ್ಲಿ ಪುನೀತ್ ರಾಯರ ಹಾಡನ್ನು ಹಾಡಿ ರಾಯರ ನೆನೆದರು.
ಹಳೆಯ ನೆನಪನ್ನು ಹಂಚಿಕೊಳ್ಳುತ್ತಿದ್ದ ಅಪ್ಪು ಭಾವುಕರಾಗಿ ಒಂದು ಕ್ಷಣ ಸೈಲೆಂಟ್ ಆದರು. ರಾಯರ ನೆನೆಯುತ್ತ ಹಾಡನ್ನು ಭಕ್ತಿಯಿಂದ ಹಾಡಿದರು. ಡಾ. ರಾಜ್ ಕುಮಾರ್ ಅವರಿಗೆ ಮಂತ್ರಾಲಯ ಎಂದರೆ ತುಂಬ ಇಷ್ಟ. ರಾಯರ ಸನ್ನಿಧಿಯೊಂದಿಗೆ ಡಾ.ರಾಜ್ ಗೆ ಇದ್ದ ಅವಿನಾಭಾವ ಸಂಬಂಧದ ಬಗ್ಗೆ ಫುನೀತ್ ಮಾತನಾಡಿದರು.
ಇನ್ನು 'ಭಾಗ್ಯವಂತರು' ಚಿತ್ರದ ಚಿತ್ರೀಕರಣ ಸಮಯವನ್ನು ನೆನಪಿಸಿಕೊಂಡರು. ಮಂತ್ರಾಲಯಕ್ಕೆ ಹೆಚ್ಚು ಭಾರಿ ಬರದಿದ್ದರು ಇಲ್ಲಿನ ನೆನಪುಗಳು ಹಾಗೆ ಇದೆ ಎಂದರು. ಪುನೀತ್ ಸದ್ಯ ಯುವರತ್ನ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೆ ಟಾಕಿ ಭಾಗ ಮುಗಿಸಿರುವ ಚಿತ್ರತಂಡ ಹಾಡಿನ ಚಿತ್ರೀಕರಣಕ್ಕೆಂದು ಚಿತ್ರತಂಡ ಇಂದು ಯುರೋಪ್ ಗೆ ಹೊರಟಿದೆ.