Don't Miss!
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Lifestyle ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪವರ್ ಫುಲ್ ಹನುಮನ ದರ್ಶನ ಪಡೆದ ಪುನೀತ್ ರಾಜ್ ಕುಮಾರ್ ದಂಪತಿ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸದ್ಯ ಕಾಳಿ ನದಿ ಕುರಿತ ಸಾಕ್ಷ್ಯ ಚಿತ್ರ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾ ಜೊತೆಗೆ ಪವರ್ ಸ್ಟಾರ್ ಸಾಕ್ಷ್ಯ ಚಿತ್ರದಲ್ಲೂ ನಿರತರಾಗಿರುವುದು ಅಚ್ಚರಿ ಮೂಡಿಸಿದೆ. ಸಾಕ್ಷ್ಯ ಚಿತ್ರ ಚಿತ್ರೀಕರಣ ನಿಮಿತ್ತ ಪುನೀತ್, ಉತ್ತರ ಕನ್ನಡ, ದಾಂಡೇಲಿ, ಧಾರವಾಡ ಸುತ್ತಾಡುತ್ತಿದ್ದಾರೆ. ಶೂಟಿಂಗ್ ಜೊತೆಗೆ ಪವರ್ ಸ್ಟಾರ್ ಐತಿಹಾಸಿಕ ಸ್ಥಳಗಳಿಗೂ ಭೇಟಿ ನೀಡುತ್ತಿದ್ದಾರೆ.
ಇತ್ತೀಚಿಗೆ ಪುನೀತ್ ಧಾರವಾಡದ ಐತಿಹಾಸಿಕ ನುಗ್ಗಿಕೇರಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಅಶ್ವಿನಿ ಜೊತೆ ಅಪ್ಪು ದೇವಸ್ಥಾನಕ್ಕೆ ಭೇಟಿ ನೀಡಿ ಆಂಜನೇಯನ ದರ್ಶನ ಪಡೆದಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಪುನೀತ್ ದಾಂಡೇಲಿಗೆ ಭೇಟಿ ನೀಡಿದ್ದರು, ವಾಪಸ್ ಹೋಗುವಾಗ ನುಗ್ಗಿಕೇರಿಗೆ ಭೇಟಿ ನೀಡಿದ್ದಾರೆ.
ಫೋಟೋ ವೈರಲ್: ದಾಂಡೇಲಿ ಹಳ್ಳಿಯಲ್ಲಿ ಭೋಜನ ಸವಿದ ಪುನೀತ್ ಸರಳತೆಗೆ ಅಭಿಮಾನಿಗಳು ಫಿದಾ
ಈ ವೇಳೆ ದೇವಸ್ಥಾನದ ವತಿಯಿಂದ ಪುನೀತ್ ರಾಜ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಅಂದಹಾಗೆ ಪವರ್ ಸ್ಟಾರ್ ಈ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಸಹ ಪವರ್ ಫುಲ್ ನುಗ್ಗಿಕೇರಿ ಹನುಮನ ದರ್ಶನ ಪಡೆದಿದ್ದರು. ಯುವರತ್ನ ಸಿನಿಮಾದ ಚಿತ್ರೀಕರಣ ವೇಳೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿದ್ದರು.
Recommended Video
ಇತ್ತೀಚಿಗೆ ಜೋಯಿಡಾ ವನ್ಯ ಜೀವಿ ತಾಣಕ್ಕೆ ಭೇಟಿ ನೀಡಿ ಪುನೀತ್ ರಾಜ್ ಕುಮಾರ್ ಅಲ್ಲಿನ ಪ್ರಕೃತಿ ಸೌಂದರ್ಯಕ್ಕೆ ಮಾರುಹೋಗಿದ್ದರು. ಇದೇ ವೇಳೆ ಜೋಯಿಡಾದ ವಿಶೇಷ ಜೇನು ಸವಿದು ಸಂತೃಪ್ತರಾಗಿದ್ದಾರೆ. ಅಲ್ಲಿಯ ಹನಿ ಬೀ ಪಾರ್ಕ್ ನಲ್ಲಿ ಜೋನು ಕೃಷಿ ನೋಡಿ ಸಂತಸಪಟ್ಟಿದ್ದಾರೆ. ಭೇಟಿಯ ನೆನಪಿಗಾಗಿ ಹನಿ ಬೀ ಪಾರ್ಕ್ ನ ಟೀ ಶರ್ಟ್ ಹಾಕಿಕೊಂಡಿದ್ದಾರೆ. ಜೊತೆಗೆ ವನ್ಯಜೀವಿ ತಾಣದಲ್ಲಿ ಪಕ್ಷಿ ವೀಕ್ಷಣೆ ಮಾಡಿ ಖುಷಿ ಪಟ್ಟಿದ್ದಾರೆ.