Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಭಾಸ್ರನ್ನ ಕನ್ನಡಕ್ಕೆ ಸ್ವಾಗತಿಸಿದ ಪುನೀತ್ ರಾಜ್ ಕುಮಾರ್
'ಬಾಹುಬಲಿ' ಚಿತ್ರದ ಮೂಲಕ ನ್ಯಾಷನಲ್ ಸ್ಟಾರ್ ಎನಿಸಿಕೊಂಡ ತೆಲುಗು ನಟ ಪ್ರಭಾಸ್ ಈಗ ಕನ್ನಡ ಇಂಡಸ್ಟ್ರಿ ಪ್ರವೇಶಿಸಿದ್ದಾರೆ. ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಮುಂದಿನ ಚಿತ್ರದಲ್ಲಿ ಪ್ರಭಾಸ್ ನಟಿಸುತ್ತಿದ್ದು, ಇಂದು ಅಧಿಕೃತವಾಗಿ ಈ ಪ್ರಾಜೆಕ್ಟ್ ಘೋಷಣೆಯಾಗಿದೆ.
ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಾಣ ಮಾಡುತ್ತಿದ್ದು, ಚಿತ್ರಕ್ಕೆ ಸಲಾರ್ ಎಂದು ಹೆಸರಿಟ್ಟಿದೆ.
Big News: ಪ್ರಭಾಸ್ ಹೀರೋ ಎಂದು ಘೋಷಿಸಿದ ಹೊಂಬಾಳೆ ಫಿಲಂಸ್
ಸಲಾರ್ ಸಿನಿಮಾ ಪ್ಯಾನ್ ಇಂಡಿಯಾ ಬಿಡುಗಡೆಯಾಗಲಿದ್ದು, ಕನ್ನಡದಲ್ಲಿ ಮೊಟ್ಟ ಮೊದಲ ಸಲ ಪ್ರಭಾಸ್ ಸಿನಿಮಾ ಏಕಕಾಲದಲ್ಲಿ ತೆರೆಕಾಣಲಿದೆ. ಈ ಮೂಲಕ ಸ್ಯಾಂಡಲ್ ವುಡ್ ಇಂಡಸ್ಟ್ರಿಗೆ ಪ್ರಭಾಸ್ ಅಧಿಕೃತ ಪ್ರವೇಶವಾಗಿದೆ.
ಕನ್ನಡ ಚಿತ್ರರಂಗ ಪ್ರವೇಶಿಸಿದ ತೆಲುಗು ನಟ ಪ್ರಭಾಸ್ ಅವರನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪ್ರೀತಿಯಿಂದ ಸ್ವಾಗತಿಸಿದ್ದಾರೆ. ''ನಮ್ಮ ಕನ್ನಡ ನಾಡಿಗೆ ಪ್ರೀತಿಯಿಂದ ಸ್ವಾಗತಿಸುತ್ತಿದ್ದೇನೆ ಪ್ರಭಾಸ್'' ಎಂದು ಪುನೀತ್ ಟ್ವೀಟ್ ಮಾಡಿದ್ದಾರೆ.
Recommended Video
ಪುನೀತ್ ರಾಜ್ಕುಮಾರ್ ಅನ್ನು ತೆಲುಗಿಗೆ ಸ್ವಾಗತಿಸಿದ ಬಾಹುಬಲಿ
ಅಂದ್ಹಾಗೆ, ಹೊಂಬಾಳೆ ಫಿಲಂಸ್ ಅಡಿಯಲ್ಲಿ ಪುನೀತ್ ರಾಜ್ ಕುಮಾರ್ ಮೂರು ಸಿನಿಮಾ ಮಾಡಿದ್ದು, ನಾಲ್ಕನೇ ಚಿತ್ರದ ಮಾತುಕತೆಯೂ ಆಗಿದೆ ಎಂಬ ಮಾಹಿತಿ ಸಿಕ್ಕಿದೆ. ಸದ್ಯ, ಯುವರತ್ನ ಸಿನಿಮಾ ತಯಾರಾಗಿದ್ದು, ಬಿಡುಗಡೆಗೆ ಸಜ್ಜಾಗಿದೆ.