Don't Miss!
- News Siddaramaiah: ಪ್ರಧಾನಿ ಕೊಟ್ಟ ಸುಳ್ಳು ಭರವಸೆಗಳಿಗೆ 10 ವರ್ಷ ಮೋಸ ಹೋಗಿದ್ದೀರಿ
- Finance ಆಕ್ಸಿಸ್ ಬ್ಯಾಂಕ್ಗೆ ಭರ್ಜರಿ ಲಾಟರಿ, 7,129 ಕೋಟಿ ನಿವ್ವಳ ಲಾಭ!
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ಬಯೋಗ್ರಫಿ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ ಪುನೀತ್ ರಾಜ್ ಕುಮಾರ್
ಕಿಚ್ಚ ಸುದೀಪ್....ರಾತ್ರೋರಾತ್ರಿ ಸ್ಟಾರ್ ಆದವರಲ್ಲ! ಎಲ್ಲರಂತೆ ಕಾನಿಷ್ಕ ಅಂಗಳದಲ್ಲಿ ಸೈಕಲ್ ಹೊಡೆದವರು! ಆ ಹಾದಿಯಲ್ಲಿ ನೋವುಗಳಿವೆ, ಅವಮಾನಗಳಿವೆ! ಆ ಹಾದಿಯತ್ತ ಬೆಳಕು ಚೆಲ್ಲುವ ಅಭಿಮಾನದ ಕೃತಿಯೊಂದನ್ನು ಸಿದ್ದಪಡಿಸಿದ್ದಾರೆ ಪತ್ರಕರ್ತ ಶರಣು ಹುಲ್ಲೂರು.
Recommended Video
ಅಭಿನಯ ಚಕ್ರವರ್ತಿಯ ಜೀವನ ಕಥೆಗೆ ಪುಸ್ತಕ ರೂಪ ನೀಡಿ, ಜನರ ಮುಂದೆ ತರುತ್ತಿದ್ದಾರೆ ಸಿನಿಮಾ ಪತ್ರಕರ್ತ ಶರಣು ಹುಲ್ಲೂರು. ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟೆಂಬರ್ 2 ರಂದು ಬಯೋಗ್ರಫಿ ಪುಸ್ತಕ ಬಿಡುಗಡೆಯಾಗಲಿದ್ದು, ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಲೋಕಾರ್ಪಣೆ ಮಾಡಲಿದ್ದಾರೆ.
ದರ್ಶನ್ ಗೆ ಸುದೀಪ್ ಸಂಬಂಧದಲ್ಲಿ ಏನಾಗಬೇಕು? ಒಳ್ಳೆ ಹುಡುಗನ ಲೆಕ್ಕಾಚಾರ!
ಇದುವರೆಗೂ ಈ ಪುಸ್ತಕ ಹೆಸರೇನು ಎನ್ನುವುದು ಬಹಿರಂಗವಾಗಿಲ್ಲ. ಶರಣು ಅವರು ಸಹ ಪುಸ್ತಕ ಹೆಸರನ್ನು ಊಹಿಸಿ ಎಂದು ಅಭಿಮಾನಿಗಳಿಗೆ ಬಿಟ್ಟಿದ್ದಾರೆ.
ಈ ಕುರಿತು ಬರಹಗಾರ ಶರಣು ಹುಲ್ಲೂರು ಸಹ ಸಂತಸ ವ್ಯಕ್ತಪಡಿಸಿದ್ದಾರೆ. ''ನೀವು ಈವರೆಗೂ ನೋಡದೇ ಇರುವಂತಹ ಅಭಿನಯ ಚಕ್ರವರ್ತಿ ಸುದೀಪ್ ಅವರ ಅಪರೂಪದ ಫೋಟೋಗಳು ಮತ್ತು ಅನೇಕ ವಿಷಯಗಳು ಬಯೋಗ್ರಫಿಯಲ್ಲಿವೆ. ನಿಮಗೆ ಈ ಪುಸ್ತಕ ತುಂಬಾ ಇಷ್ಟವಾಗತ್ತೆ ಎನ್ನುವ ನಂಬಿಕೆ'' ಎಂದು ಹಳೆಯದೊಂದು ಫೋಟೋ ಹಂಚಿಕೊಂಡಿದ್ದಾರೆ.
ಸುದೀಪ್ ಅವರ ಬಯೋಗ್ರಫಿ ಪುಸ್ತಕದ ಕುರಿತು ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಾಗಿದೆ. ಕಿಚ್ಚನ ಕುರಿತು ಇದುವರೆಗೂ ಬಹಿರಂಗವಾಗದ ಅನೇಕ ವಿಷಯಗಳು ಈ ಪುಸ್ತಕದಲ್ಲಿ ಇರಲಿದೆ ಎಂಬ ನಿರೀಕ್ಷೆ ಹುಟ್ಟಿಕೊಂಡಿದೆ. ಅಪರೂಪದ ಫೋಟೋಗಳು ಈ ಪುಸ್ತಕ ಒದಗಿಸಲಿದೆ ಎಂಬ ಲೆಕ್ಕಾಚಾರದಲ್ಲಿ ಅಭಿಮಾನಿಗಳಿದ್ದಾರೆ.
ಅಂದ್ಹಾಗೆ, ಪತ್ರಿಕೋದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿರುವ ಶರಣು ಹುಲ್ಲೂರು ಹಲವು ಪುಸ್ತಕಗಳನ್ನು ಬರೆದಿದ್ದಾರೆ. ರೆಬೆಲ್ ಸ್ಟಾರ್ ಕುರಿತು 'ಅಂಬರೀಶ್' ಎಂಬ ಪುಸ್ತಕ ಬರೆದಿದ್ದರು. 'ಕೊರೋನಾ' ಹೆಸರಿನಲ್ಲು ಸಹ ಪುಸ್ತಕ ಬರೆದಿದ್ದರು. 'ಬದುಕು ಹ್ಯಾಕ್ ಆಗಿದೆ', 'ಸಿನಿ ಸಾಂಗತ್ಯ', 'ಜುಗಲ್ ಬಂದಿ ಕವಿತೆಗಳು' ಎಂಬ ಪುಸ್ತಕಗಳನ್ನು ಸಹ ಹುಲ್ಲೂರು ರಚಿಸಿದ್ದಾರೆ.