Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೂನ್ 22 ಕ್ಕೆ 'ಅಂಜನಿಪುತ್ರ' ಶೂಟಿಂಗ್ಗೆ ಪುನೀತ್ ಹಾಜರು
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ತಾಯಿಯ ಅಗಲಿಕೆಯಿಂದ ನೊಂದಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವೇ ದಿನಗಳಲ್ಲಿ ಅಂದರೇ ಜೂನ್ 22 ರಿಂದ ತಮ್ಮ ಅಭಿನಯದ 'ಅಂಜನಿಪುತ್ರ' ಶೂಟಿಂಗ್ ನಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದಿದೆ.['ಅಂಜನಿಪುತ್ರ'ನ ಜೊತೆ ಅಂದದ ಅರಗಿಣಿ 'ಹರಿಪ್ರಿಯಾ'ಗೆ ಏನು ಕೆಲಸ?]
ಪುನೀತ್ ರವರು ತಮ್ಮ ಚಿತ್ರೀಕರಣ ಸೇರಿದಂತೆ ಎಲ್ಲಾ ರೀತಿಯ ಕಮಿಟ್ಮೆಂಟ್ ಗಳನ್ನು ಪಾರ್ವತಮ್ಮ ರಾಜ್ ಕುಮಾರ್ ಅವರ ಅನಾರೋಗ್ಯ ಕಾರಣದಿಂದ ರದ್ದುಗೊಳಿಸಿ ಮುಂದೂಡಿದ್ದರು. ಪಾರ್ವತಮ್ಮ ರಾಜ್ ಕುಮಾರ್ ಮೇ 31 ರಂದು ನಿಧನರಾದರು.
ಇದೀಗ ಪುನೀತ್ ರವರು ತಾಯಿಯ ಅಗಲಿಕೆಯಿಂದ ಚೇತರಿಸಿಕೊಳ್ಳುತ್ತಿದ್ದು, ಈಗಾಗಲೇ ಶೇಕಡ 50 ರಷ್ಟು ಚಿತ್ರೀಕರಣ ಮುಗಿದಿರುವ 'ಅಂಜನಿಪುತ್ರ' ಚಿತ್ರದ ಉಳಿದ ಭಾಗದ ಶೂಟಿಂಗ್ಗಾಗಿ ಜೂನ್ 22 ರಿಂದ ಚಿತ್ರೀಕರಣಕ್ಕೆ ಹಿಂದಿರುಗಲಿದ್ದಾರೆ ಎಂದು ತಿಳಿದಿದೆ.
ನಿರ್ದೇಶಕ ಎ ಹರ್ಷ ಸಹ ಇಷ್ಟು ದಿನ ಇತರೆ ಚಿತ್ರಗಳ ಡ್ಯಾನ್ಸ್ ಕೊರಿಯೋಗ್ರಫಿ ಮಾಡುವಲ್ಲಿ ಬಿಸಿಯಾಗಿದ್ದರು. ಅಲ್ಲದೇ ಈಗ 'ಭರ್ಜರಿ' ಚಿತ್ರದ ಹಾಡುಗಳ ಶೂಟಿಂಗ್ಗಾಗಿ ಸ್ಲೋವೇನಿಯಾಗೆ ತೆರಳಿರುವ ಎ ಹರ್ಷ ರವರು ಸಹ ಜೂನ್ 22 ರ ಒಳಗಾಗಿ ಹಿಂದಿರುಗಲಿದ್ದಾರೆ. ಅಲ್ಲಿಂದ ಬಂದ ತಕ್ಷಣ ಚಿತ್ರದ ಶೂಟಿಂಗ್ ಶುರುಮಾಡಲಿದ್ದಾರೆ.[ಪವರ್ ಸ್ಟಾರ್ ಹೊಸ ಚಿತ್ರಕ್ಕೆ 'ಕಿರಿಕ್' ಸಾನ್ವಿ ನಾಯಕಿ!]
'ಅಂಜನಿಪುತ್ರ' ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಗೆ ಜೊತೆಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿದ್ದಾರೆ. ಹರಿಪ್ರಿಯ ಚಿತ್ರದಲ್ಲಿ ಗೆಸ್ಟ್ ರೋಲ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಪುನೀತ್ ಗೆ ತಾಯಿಯಾಗಿ ರಮ್ಯಾ ಕೃಷ್ಣ ರವರು ನಟಿಸುತ್ತಿದ್ದಾರೆ. ಚಿತ್ರವನ್ನು ಎಂ.ಎನ್.ಕೆ ಮೂವೀಸ್ ಅಡಿಯಲ್ಲಿ ಎಂ.ಎನ್.ಕುಮಾರ್ ಮತ್ತು ಜಯಶ್ರೀ ದೇವಿ ರವರು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಚಿತ್ರಕ್ಕಿದೆ.