Just In
- 14 min ago
ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಸಿನಿಮಾದ ಟೈಟಲ್ ಮತ್ತು ಫಸ್ಟ್ ಲುಕ್ ಔಟ್
- 51 min ago
ಫ್ಯಾಂಟಮ್ ಅಪ್ಡೇಟ್: ಕಿಚ್ಚನ ಅಭಿಮಾನಿಗಳಿಗೆ ಕಾದಿದೆ ಭರ್ಜರಿ ಸುದ್ದಿ
- 1 hr ago
'ಬಿಗ್ ಬಾಸ್ ತಮಿಳು ಸೀಸನ್ 4' ಗೆದ್ದು ಬೀಗಿದ ನಟ ಆರಿ ಅರ್ಜುನ; ಗಳಿಸಿದ್ದೆಷ್ಟು?
- 3 hrs ago
ಹಿಂದೂ ಭಾವನೆಗಳಿಗೆ ಧಕ್ಕೆ; ಸೈಫ್ ನಟನೆಯ 'ತಾಂಡವ್' ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರ ದೂರು
Don't Miss!
- Finance
ಸ್ಯಾಮ್ಸಂಗ್ ಎಲೆಕ್ಟ್ರಾನಿಕ್ಸ್ ಉಪಾಧ್ಯಕ್ಷ ಜೇ ವೈ. ಲೀಗೆ ಮೂರು ವರ್ಷ ಜೈಲು ಶಿಕ್ಷೆ
- Sports
ಭಾರತ vs ಆಸ್ಟ್ರೇಲಿಯಾ: 5 ವಿಕೆಟ್ ಪಡೆದು ಮಿಂಚಿದ ಸಿರಾಜ್: 328 ರನ್ಗಳ ಗುರಿ ಪಡೆದ ಭಾರತ
- News
ಕೊರೊನಾ ಲಸಿಕೆ ಪಡೆದ 24 ಗಂಟೆಗಳಲ್ಲೇ ವೈದ್ಯಕೀಯ ಸಿಬ್ಬಂದಿ ಸಾವು!
- Education
ICFRE Recruitment 2021: 43 ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಉಪ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಜನಪ್ರಿಯ ಕವಾಸಕಿ ಬೈಕುಗಳ ಮೇಲೆ ಭರ್ಜರಿ ರಿಯಾಯಿತಿ
- Lifestyle
ಅಂಡಾಣು ಶೈತ್ಯೀಕರಣ: ಮಗುವನ್ನು ಪಡೆಯಲು ಈ ವಿಧಾನ ಸುರಕ್ಷಿತವೇ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಭಿಮಾನಿಯ ಮನದಾಸೆ ಈಡೇರಿಸಿದ ಪವರ್ ಸ್ಟಾರ್ ಪುನೀತ್
ಡಾ.ರಾಜ್ಕುಮಾರ್ ಕುಟುಂಬದವರನ್ನು ಸುಮ್ಮನೆ 'ದೊಡ್ಮನೆಯರು' ಎನ್ನುವುದಿಲ್ಲ. ಅವರ ವಿಶಾಲ ಮನೋಭಾವಕ್ಕೆ ಅನ್ವರ್ಥವಾಗಿ ಆ ಹೆಸರು ಬಂದಿದೆ.
ಶಿವಣ್ಣ, ಬೀದಿ ಬದಿಯಲ್ಲಿ ಚಹ ಕುಡಿದ, ಉಪ್ಪಿಟ್ಟು ತಿಂದ, ಅಭಿಮಾನಿಗಳಿಗೆ ಸಹಾಯ ಮಾಡಿದ ಸುದ್ದಿಗಳು, ಚಿತ್ರಗಳು ನೋಡಿಯೇ ಇರುತ್ತೀರಾ. ಪುನೀತ್ ರಾಜ್ಕುಮಾರ್ ಸಹ ಸರಳತೆಯಲ್ಲಿ ಅಣ್ಣನಂತೆಯೇ.
ಇತ್ತೀಚೆಗಷ್ಟೆ ತಮ್ಮ ಕಚೇರಿಯ ಉದ್ಯೋಗಿಯೊಬ್ಬರ ಮದುವೆಗಾಗಿ ಕರಾವಳಿಗೆ ಬಂದಿದ್ದ ಪುನೀತ್ ರಾಜ್ಕುಮಾರ್, ಇದೀಗ ಮತ್ತೊಮ್ಮೆ ತಮ್ಮ ವಿಶಾಲ ಹೃದಯಕ್ಕೆ, ಮನುಷ್ಯ ಪ್ರೀತಿಗೆ ಉದಾಹರಣೆಯೊಂದನ್ನು ನೀಡಿದ್ದಾರೆ.
ಅಭಿಮಾನಿಯೊಬ್ಬ ತಮ್ಮ ತಂಗಿಯ ಮದುವೆಗೆ ಪುನೀತ್ ಅವರನ್ನು ಆಹ್ವಾನಿಸಿದ್ದರು. ಆದರೆ ಕೊರೊನಾ ಕಾಲ ಅದಕ್ಕಿಂತಲೂ ಹೆಚ್ಚಾಗಿ, ಪುನೀತ್ ಮದುವೆಗೆ ಬಂದರೆ ಜನಜಾತ್ರೆಯೇ ನೆರೆದು, ಮದುವೆಗೆ ಬಂದವರು ಸಮಸ್ಯೆಗೆ ಸಿಕ್ಕಿಹಾಕಿಕೊಂಡು ಬಿಡುತ್ತಾರೆ.
ಹಾಗಾಗಿ ನವ ಜೋಡಿಗೆ ವಿಡಿಯೋ ಕಾಲ್ ಮಾಡಿ ಮದುವೆಗೆ ಶುಭಾಶಯ ಕೋರಿದ್ದಾರೆ ಪುನೀತ್ ರಾಜ್ಕುಮಾರ್. ಪುನೀತ್ ಅವರು ನವವಿವಾಹಿತ ಜೋಡಿಗೆ ವಿಡಿಯೋ ಕಾಲ್ ಮೂಲಕ ಮದುವೆ ಶುಭಾಶಯ ಕೋರಿದ ಚಿತ್ರ ಸಖತ್ ವೈರಲ್ ಆಗುತ್ತಿದೆ.
ಕೆಲವು ದಿನಗಳ ಹಿಂದಷ್ಟೆ ತಮ್ಮ ಕಚೇರಿಯ ಉದ್ಯೋಗಿಯೊಬ್ಬನ ಮದುವೆಯಲ್ಲಿ ಪಾಲ್ಗೊಳ್ಳಲು ಕುಮುಟಾಕ್ಕೆ ಬಂದಿದ್ದರು ಪುನೀತ್ ರಾಜ್ಕುಮಾರ್. ಪುನೀತ್ ಬಂದ ವಿಷಯ ಗೊತ್ತಾಗಿ ಮದುವೆ ಮನೆ ಮುಂದೆ ಜನಜಾತ್ರೆಯೇ ನೆರೆದಿತ್ತು. ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಡಬೇಕಾಯ್ತು. ಮದುವೆಗೆ ಬಂದಿದ್ದ ಪುನೀತ್ ಗೋಕರ್ಣ ಬೀಚ್, ದೇವಾಲಯ ಇನ್ನಿತರೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದರು.
ಪುನೀತ್ ಅವರ ಯುವರತ್ನ ಸಿನಿಮಾ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಈ ನಡುವೆ ಜೇಮ್ಸ್ ಸಿನಿಮಾದ ಚಿತ್ರೀಕರಣದಲ್ಲಿ ಪುನೀತ್ ತೊಡಗಿಸಿಕೊಂಡಿದ್ದು, ಸಿನಿಮಾದ ಚಿತ್ರೀಕರಣ ಬಹುತೇಕ ಅಂತಿಮ ಹಂತಕ್ಕೆ ಬಂದಿದೆ.