Just In
Don't Miss!
- Sports
ಐಪಿಎಲ್ 2021ರಿಂದ ರಾಜಸ್ಥಾನ್ ರಾಯಲ್ಸ್ನ ಬೆನ್ ಸ್ಟೋಕ್ಸ್ ಹೊರಕ್ಕೆ!
- Automobiles
ಗ್ಲಾಸಿ ಆರೇಂಜ್ ವ್ಯಾರ್ಪ್ನೊಂದಿಗೆ ಮಾಡಿಫೈಗೊಂಡ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್ಯುವಿ
- News
ಲಾಕ್ಡೌನ್ ಇಲ್ಲ, ಹದಿನೈದು ದಿನ ಶಿಸ್ತಿನ ಕರ್ಫ್ಯೂ: ಸಿಎಂ ಉದ್ಧವ್ ಠಾಕ್ರೆ
- Finance
2021 ಸ್ಕೋಡಾ ಕೊಡಿಯಾಕ್ ಅಧಿಕೃತವಾಗಿ ಬಿಡುಗಡೆ: ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ
- Lifestyle
ಅಧ್ಯಯನ: ಸ್ಥೂಲಕಾಯದವರ ಸ್ಮರಣಾ ಶಕ್ತಿ ಕಾಪಾಡುತ್ತೆ ಬೆಣ್ಣೆಹಣ್ಣು
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಬೇಸರದ ಸುದ್ದಿ: ಏನದು?
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ 'ಯುವರತ್ನ' ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಭಾರಿ ಕುತೂಹಲ ಮೂಡಿಸಿರುವ ಯುವರತ್ನ ಸಿನಿಮಾ ಏಪ್ರಿಲ್ 1ಕ್ಕೆ ತೆರೆಗೆ ಬರುತ್ತಿದೆ. ಕನ್ನಡ ಮತ್ತು ತೆಲುಗು ಎರಡು ಭಾಷೆಯಲ್ಲೂ ಏಕಕಾಲಕ್ಕೆ ರಿಲೀಸ್ ಆಗುತ್ತಿದೆ.
ಈಗಾಗಲೇ ಸಿನಿಮಾದಿಂದ ಎರಡು ಹಾಡುಗಳು ರಿಲೀಸ್ ಆಗಿದ್ದು ಅಭಿಮಾನಿಗಳ ನಿದ್ದೆಗೆಡಿಸಿದೆ. ಇದೀಗ ಮೂರನೆ ಹಾಡು ರಿಲೀಸ್ ಗೆ ಸಿದ್ಧವಾಗಿತ್ತು. ಫೆಬ್ರವರಿ 21ಕ್ಕೆ ಮೂರನೇ ಹಾಡನ್ನು ರಿಲೀಸ್ ಮಾಡುವುದಾಗಿ ಸಿನಿಮಾತಂಡ ಅನೌನ್ಸ್ ಮಾಡಿತ್ತು. 3ನೇ ಹಾಡು ಹೇಗಿರಲಿದೆ ಎನ್ನುವ ಕುತೂಹಲದಿಂದ ಅಭಿಮಾನಿಗಳು ಕಾಯುತ್ತಿದ್ದರು. ಆದರೀಗ ಹಾಡು ರಿಲೀಸ್ ಆಗುವುದಿಲ್ಲ ಎನ್ನುವ ಸುದ್ದಿ ಹೊರಬಿದ್ದಿದೆ.
ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಬರ್ತಿದೆ 'ಸೋಲ್ ಆಫ್ ಯುವರತ್ನ'
ಪುನೀತ್ ರಾಜ್ ಕುಮಾರ್ ವಿಡಿಯೋ ಮೂಲಕ ಹಾಡು ರಿಲೀಸ್ ಆಗುತ್ತಿಲ್ಲ ಎನ್ನುವ ವಿಚಾರವನ್ನು ಅಭಿಮಾನಿಗಳಿಗೊಂದಿಗೆ ಹಂಚಿಕೊಂಡಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಹಾಡು ರಿಲೀಸ್ ಆಗುತ್ತಿಲ್ಲ ಎಂದಿದ್ದಾರೆ. 'ಯುವರತ್ನ ಸಿನಿಮಾದ 3ನೇ ಹಾಡು 21ಕ್ಕೆ ರಿಲೀಸ್ ಆಗಬೇಕಿತ್ತು. ಆದರೆ ಚಿಕ್ಕ ತಾಂತ್ರಿಕ ಸಮಸ್ಯೆಯಿಂದ ಮುಂದಕ್ಕೆ ಹಾಕಲಾಗಿದೆ. ಆದಷ್ಟು ಬೇಗ ಆ ಹಾಡನ್ನು ರಿಲೀಸ್ ಮಾಡುತ್ತೇವೆ. ಎಲ್ಲರೂ ಸಹಕರಿಸುತ್ತೀರಿ ಎಂದು ಭಾವಿಸುತ್ತೇನೆ' ಎಂದು ಹೇಳಿದ್ದಾರೆ.
ಪಾಠಶಾಲಾ ಸೋಲ್ ಆಫ್ ಯುವರತ್ನ ಹಾಡಿಗಾಗಿ ಕಾದುಕುಳಿತಿದ್ದ ಅಭಿಮಾನಿಗಳಿಗೆ ಈ ಸುದ್ದಿ ನಿರಾಸೆ ಮೂಡಿಸಿದೆ. ಈಗಾಗಲೇ ಚಿತ್ರದ ಪ್ರಮೋಷನ್ ಕೆಲಸಗಳು ಪ್ರಾರಂಭವಾಗಿದ್ದು ವಿಭಿನ್ನ ರೀತಿಯಲ್ಲಿ ಪ್ರಚಾರ ಪ್ರಾರಂಭವಾಗಿದೆ.
ಯುವರತ್ನ, ಸಂತೋಷ್ ಆನಂದ್ ರಾಮ್ ಮತ್ತು ಪವರ್ ಸ್ಟಾರ್ ಕಾಂಬಿನೇಷನ್ ನಲ್ಲಿ ಬರ್ತಿರುವ ಎರಡನೇ ಸಿನಿಮಾ ಇದಾಗಿದೆ. ಚಿತ್ರದಲ್ಲಿ ಪುನೀತ್ ಗೆ ನಾಯಕಿಯಾಗಿ ಸಯೇಶಾ ಸೈಗಲ್ ಕಾಣಿಸಿಕೊಂಡಿದ್ದಾರೆ. ಸಯೇಶಾ ಅವರಿಗೆ ಇದು ಮೊದಲ ಕನ್ನಡ ಸಿನಿಮಾವಾಗಿದ್ದು, ಚಿತ್ರದ ಬಗ್ಗೆ ಸಖತ್ ಎಕ್ಸಾಯಿಟ್ ಆಗಿದ್ದಾರೆ.
ಇನ್ನು ಚಿತ್ರದಲ್ಲಿ ಸೋನು ಗೌಡ, ರಾಧಿಕಾ ಶರತ್ ಕುಮಾರ್ ಕಾವ್ಯ ಶೆಟ್ಟಿ, ಧನಂಜಯ್, ದಿಗಂತ್, ಮತ್ತು ಪ್ರಕಾಶ್ ರೈ ಸೇರಿದಂತೆ ದೊಡ್ಡ ತಾರಬಳಗವೇ ಇದೆ.